ಬ್ರೇಕಿಂಗ್ ನ್ಯೂಸ್
08-08-20 10:05 am Headline Karnataka News Network ನ್ಯೂಸ್ View
ಔರಂಗಾಬಾದ್, ಆಗಸ್ಟ್ 08: ಕೊರೊನಾ ಎಂಬ ಮಾಹಾಮಾರಿ ವಿಶ್ವದಾದ್ಯಂತ ತಲ್ಲಣ ಸೃಷ್ಟಿಸಿದೆ. ಈ ಮಹಾಮಾರಿ ತಂದಿಟ್ಟ ಸಂಕಷ್ಟದ ಸ್ಥಿತಿ ಜೀವನದ ಪಾಠವನ್ನೂ ಕಲಿಸಿದೆ. ಲಾಕ್ ಡೌನ್ ಸಂದರ್ಭದಲ್ಲಿ ಜೀವನದ ಪ್ರತಿ ಹಂತದಲ್ಲಿ ಸಂಬಂಧಗಳ ಮಹತ್ವವನ್ನು ಮನವರಿಕೆ ಮಾಡಿಸಿದೆ. ಒಡನಾಟವನ್ನು ಹೆಚ್ಚಿಸಿದೆ. ಇನ್ನೊಂದು ಕಡೆ ಕೆಲ ಸಂಬಂಧಗಳ ಮುಖವಾಡವನ್ನೂ ಕಳಚಿಟ್ಟಿದೆ.
ಕೊರೊನಾ ಸೋಂಕು ತಗುಲಿದೆ ಎಂಬ ಕಾರಣಕ್ಕೆ ಕೆಲ ಅನ್ಯೋನ್ಯ ಸಂಬಂಧಗಳೇ ದೂರವಾಗಿದೆ. ಕೊರೊನಾ ಸೋಂಕು ತಗುಲಿದೆ ಎಂಬ ಕಾರಣಕ್ಕೆ ತನ್ನ ಹೆತ್ತ ತಾಯಿಯನ್ನೇ ಮಗನೊಬ್ಬ ಕಾಡಿಗೆ ಬಿಟ್ಟು ಬಂದ ಹೃದಯ ವಿದ್ರಾವಕ ಘಟನೆ ಔರಂಗಾಬಾದ್ ನಲ್ಲಿ ಬೆಳಕಿಗೆ ಬಂದಿದೆ. ಕೊರೊನಾ ಬಂದವರನ್ನು ಸುತ್ತಮುತ್ತಲಿನ ಜನರು ಶತ್ರುಗಳಂತೆ ನೋಡ್ತಿದ್ದಾರೆ .ಈ ಘಟನೆಯಲ್ಲಿ ಮಗನೇ ತನ್ನ ತಾಯಿಯನ್ನು ಶತ್ರುವಂತೆ ನೋಡಿದ್ದಾನೆ.

ಕೊರೊನಾ ಚಿಕಿತ್ಸೆಗೆ ಹೆಚ್ಚು ವೆಚ್ಚವಾಗುತ್ತದೆ ಎನ್ನುವ ಕಾರಣ ನೀಡಿ ಅನೇಕರು ಕೊರೊನಾ ಬಂದಿರುವುದನ್ನೇ ಮುಚ್ಚಿಡುತ್ತಿದ್ದಾರೆ. ಇದೇ ಕಾರಣಕ್ಕೆ ಚಿಕಿತ್ಸೆಗೆ ಹೆಚ್ಚು ವೆಚ್ಚವಾಗುತ್ತದೆ ಎಂದು
ತನ್ನ 90 ವರ್ಷದ ತಾಯಿಗೆ ಕೊರೊನಾ ಎಂಬುದು ಗೊತ್ತಾಗ್ತಿದ್ದಂತೆ ಮಗ ಆಕೆಯನ್ನು ಕಾಡಿನಲ್ಲಿ ಬಿಟ್ಟು ಬಂದಿದ್ದಾನೆ.
ಕಾಡಿನಲ್ಲಿ ವಯೋವೃದ್ಧೆ ಒದ್ದಾಡುತ್ತಿರುವುದು ಕಂಡು ಬಂದಿದೆ. ಇದನ್ನು ಗಮನಿಸಿದ ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಪೊಲೀಸರು ವೃದ್ಧೆಯನ್ನು ಜಿಲ್ಲಾಸ್ಪತ್ರೆಗೆ ದಾಖಲಿಸಿದ್ದಾರೆ.
ವೃದ್ಡೆಗೆ ಕೊರೊನಾ ಇರೋ ವಿಷ್ಯ ಗೊತ್ತಾಗ್ತಿದ್ದಂತೆ ಮನೆಯವರು ವೃದ್ಧೆಯನ್ನು ಮನೆಯಲ್ಲಿ ಇಟ್ಟುಕೊಳ್ಳಲು ನಿರಾಕರಿಸಿದ್ದಾರೆ. ಈ ಹಿನ್ನೆಲೆಯಲ್ಲಿ ತಾಯಿಯನ್ನು ಬೆಡ್ ಶೀಟ್ ನಲ್ಲಿ ಸುತ್ತಿ ಕಾಡಿನಲ್ಲಿ ಮಗ ಬಿಟ್ಟು ಹೋಗಿರುವುದು ಮನುಷ್ಯನ ಮಾನವೀಯ ಗುಣವನ್ನೇ ಅಣಕಿಸಿದೆ. ಪ್ರಕರಣ ದಾಖಲಿಸಿಕೊಂಡ ಪೊಲೀಸರು ವೃದ್ಧೆಯ ಕುಟುಂಬಸ್ಥರ ಹುಡುಕಾಟ ಶುರು ಮಾಡಿದ್ದಾರೆ.
04-04-26 07:33 pm
HK News Staffer
ಪಶ್ಚಿಮ ಏಷ್ಯಾ ಸಂಘರ್ಷ; ಭಾರತದ ರಾಜತಾಂತ್ರಿಕ ನಡೆಯನ್...
03-04-26 04:14 pm
ಬಾಗಲಕೋಟ, ದಾವಣಗೆರೆ ಉಪ ಚುನಾವಣೆ; ಗೆಲುವು ಕಷ್ಟ- ಗು...
03-04-26 03:48 pm
ಕ್ಲೈಮ್ಯಾಕ್ಸ್ ಹಂತಕ್ಕೆ ತಲುಪಿದ ಕುಮಾರಸ್ವಾಮಿ- ಎಡಿಜ...
02-04-26 09:31 pm
ನಾನು ಮುಖ್ಯಮಂತ್ರಿಯಾಗಿ ಮುಸ್ಲಿಂ ಅಲ್ಪಸಂಖ್ಯಾತ ಮೀಸಲ...
02-04-26 08:07 pm
05-04-26 12:37 pm
HK News Staffer
ಇರಾನ್ ಗೆ ಅಮೆರಿಕ ಮತ್ತೆ 48 ಗಂಟೆಗಳ ಗಡುವು ; ಒಂದು...
04-04-26 10:53 pm
ಅಣ್ಣಾಮಲೈ ಹೊರಗಿಟ್ಟು ಬಿಜೆಪಿ ಪಟ್ಟಿ ಬಿಡುಗಡೆ; ತಮಿಳ...
03-04-26 07:52 pm
50 ವರ್ಷಗಳ ಬಳಿಕ ಮಾನವ ಸಹಿತ ಚಂದ್ರಯಾನ; ಅಮೆರಿಕ, ಕೆ...
03-04-26 07:35 am
ಚಿಂತಿಸಬೇಡಿ, ನಿಮ್ಮ ಹಡಗು ಸುರಕ್ಷಿತ; ಹಾರ್ಮುಜ್ ಜಲಸ...
02-04-26 10:24 pm
03-04-26 11:43 am
HK News Staffer
ಧರ್ಮಸ್ಥಳ ಎಐ ವಿಡಿಯೋ ಪ್ರಕರಣ; ಯೂಟ್ಯೂಬರ್ ಎಂ.ಡಿ....
02-04-26 02:43 pm
ದೂರು ನೀಡಲು ಬಂದ ಮಹಿಳೆಯೊಂದಿಗೆ ಸಂಬಂಧ ಬೆಳೆಸುವುದು...
01-04-26 09:04 pm
ಮುಸ್ಲಿಂ ಮದುವೆಯಲ್ಲಿ ಕೊರಗಜ್ಜ ದೈವದ ಅನುಕರಣೆ ; ಮದು...
31-03-26 10:06 pm
Moodbidri Accident: ಮೂಡುಬಿದ್ರೆ ; ರಸ್ತೆ ಬದಿ ನಿ...
31-03-26 09:02 pm
05-04-26 11:03 am
HK News Staffer
ನಾಸಿಕ್ ಭೀಕರ ದುರಂತ; ನಿಯಂತ್ರಣ ತಪ್ಪಿ ಬಾವಿಗೆ ಬಿದ್...
04-04-26 05:42 pm
ಅತ್ತೆ, ಮಾವನ ಕಿರುಕುಳಕ್ಕೆ ಬೇಸತ್ತು ಗರ್ಭಿಣಿ ಮಹಿಳೆ...
04-04-26 05:39 pm
ಇನ್ಫೋಸಿಸ್ ಸಿಎಸ್ಆರ್ ಫಂಡ್ ತೆಗೆಸಿಕೊಡುವುದಾಗಿ ವಂಚನ...
04-04-26 04:36 pm
ಮಂಗಳೂರಿನಲ್ಲಿ ಎಪ್ರಿಲ್ 19ರಂದು ಸೀ ಬ್ರೀಜ್ ಮ್ಯಾರಥಾ...
04-04-26 11:32 am