ಬ್ರೇಕಿಂಗ್ ನ್ಯೂಸ್
12-06-23 10:22 pm Mangalore Correspondent ಕಾಲೇಜು ಕ್ಯಾಂಪಸ್
ಮಂಗಳೂರು, ಜೂನ್ 12: ನಗರದ ಬೆಸೆಂಟ್ ಸಂಧ್ಯಾ ಕಾಲೇಜಿನ ಹಳೆ ವಿದ್ಯಾರ್ಥಿ ಸಂಘ ಆಯೋಜಿಸಿದ್ದ ಬಿ.ಪಿ.ಎಲ್ ಕ್ರಿಕೆಟ್ ಪಂದ್ಯಾವಳಿ ಪದುವಾ ಕಾಲೇಜು ಮೈದಾನದಲ್ಲಿ ಇತ್ತೀಚೆಗೆ ಜರಗಿತು. ಪಂದ್ಯಾವಳಿಯನ್ನು ಬೆಸೆಂಟ್ ಕಾಲೇಜು ಆಡಳಿತ ಮಂಡಳಿ ಸದಸ್ಯರಾದ ಸತೀಶ ಕುಮಾರ ಭಟ್ ದೀಪ ಬೆಳಗಿಸಿ ಉದ್ಘಾಟಿಸಿ ಶುಭ ಹಾರೈಸಿದರು.
ಬೆಸೆಂಟ್ ಸಂಧ್ಯಾ ಕಾಲೇಜು ಪ್ರಾಂಶುಪಾಲ ಡಾ.ಲಕ್ಷೀನಾರಾಯಣ ಭಟ್, ಸಂಘದ ಮಾಜಿ ಸಲಹೆಗಾರರಾದ ಗಣಪತಿ ಭಟ್ ಎಂ, ಡಾ. ವಾಸಪ್ಪಗೌಡ, ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷ ಪ್ರದೀಪ್, ಕಾರ್ಯದರ್ಶಿ ಪ್ರಣವ್ ಗಣೇಶ್. ಕ್ರೀಡಾ ಕಾರ್ಯದರ್ಶಿ ಮನೀಷ್ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.




ಪಂದ್ಯಾವಳಿಯಲ್ಲಿ ಆರು ತಂಡಗಳಾದ ಟೀಮ್ ವಿಕ್ಟರಿ, ಟೀಮ್ ಬ್ಲೂ ಸ್ಟ್ರೀಕ್, ಟೀಮ್ ಡಾಮಿನೇಟ್, ಟೀಮ್ ಮಾಂಕ್, ಆರೇಜ್ ಆರ್ಮಿ ಮತ್ತು ಟೀಮ್ ಮಾನ್ಸ್ಟರ್ ಕ್ರೀಡಾಕೂಟದಲ್ಲಿ ಭಾಗವಹಿಸಿದ್ದವು. ವಿಜೇತ ತಂಡಗಳಿಗೆ ಹಾಗೂ ಸರಣಿ ಶ್ರೇಷ್ಠ ಕ್ರೀಡಾಪಟುಗಳಿಗೆ ಆಕರ್ಷಕ ಬಹುಮಾನಗಳನ್ನು ಘೋಷಿಸಲಾಗಿತ್ತು. ದಿನವಿಡೀ ನಡೆದ ಲೀಗ್ ಸ್ಪರ್ಧೆಯಲ್ಲಿ ಲೋಹಿತ್ ಬಜಾಲ್ ಮಾಲಕತ್ವದ ಆರೇಜ್ ಆರ್ಮಿ ತಂಡವು ಜಯಶಾಲಿಯಾಗಿ ಟ್ರೋಫಿಯನ್ನು ತನ್ನದಾಗಿಸಿಕೊಂಡಿತು. ಗೌರವ್ ಮೊಹ್ಲಿ ಮಾಲಕತ್ವದ ಟೀಮ್ ವಿಕ್ಟರಿ ತಂಡವು ರನ್ನರ್ ಅಪ್ ಪ್ರಶಸ್ತಿ ಪಡೆದುಕೊಂಡಿತು.



ಸಂಜೆ ನಡೆದ ಸಮಾರೋಪ ಸಮಾರಂಭದಲ್ಲಿ ಪ್ರಶಸ್ತಿಗಳನ್ನು ವಿತರಿಸಲಾಯಿತು. ಕಾರ್ಯಕ್ರಮದಲ್ಲಿ ಉದ್ಯಮಿ ಹಾಗೂ ಹಳೆ ವಿದ್ಯಾರ್ಥಿ ಉದಯ್ ಆಚಾರ್, ಕಾಲೇಜು ಪ್ರಾಂಶುಪಾಲರಾದ ಡಾ. ಲಕ್ಷೀನಾರಾಯಣ ಭಟ್ ಹಾಗೂ ಎಸ್.ಡಿ.ಎಂ ಉಪನ್ಯಾಸಕರಾದ ಪ್ರವೀಣ ದೆಂಗೋಡಿ ವಿಜೇತರಿಗೆ ಬಹುಮಾನ ವಿತರಿಸಿದರು. ಮದುರಾಜ್ ಅವರು ಸರಣಿ ಶ್ರೇಷ್ಠ, ಅಂಬಾತನಯ ಶ್ರೇಷ್ಠ ದಾಂಡಿಗನಾಗಿ ಹಾಗೂ ಸುನೀಲ್ ಶ್ರೇಷ್ಠ ಎಸೆತಗಾರನಾಗಿ ಪ್ರಶಸ್ತಿ ಪಡೆದರು. ಕಾರ್ಯಕ್ರಮದಲ್ಲಿ ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷ ಪ್ರದೀಪ್ ವಂದಿಸಿದರು. ಪ್ರತೀಶ್ ಗೌರೀಶ್ ಕಾರ್ಯಕ್ರಮ ನಿರೂಪಿಸಿದರು.
Alumni of Besant Evening college host BPL cricket Match 2023 in Mangalore.
02-06-26 10:42 pm
HK News Desk
ಕಾಂಗ್ರೆಸ್ಗೆ ಮತ ಹಾಕುವ ಬದಲು ಕುಕ್ಕರ್ ಅಥವಾ ಎಸ್ಡ...
01-06-26 09:44 pm
ಫೈನಲ್ ಸೋಲಿನ ಬೆನ್ನಲ್ಲೇ ಜಿಟಿಗೆ ಮತ್ತೊಂದು ಶಾಕ್...
01-06-26 11:31 am
ದೇಶದ ಸಿರಿವಂತ ಸಿಎಂ ಆಗಲಿದ್ದಾರೆ 'ಕನಕಪುರ ಬಂಡೆ' ಡಿ...
31-05-26 09:23 pm
ಜೂನ್ 3ರಂದು 24ನೇ ಮುಖ್ಯಮಂತ್ರಿಯಾಗಿ ಡಿಕೆಶಿ ಪ್ರಮಾಣ...
30-05-26 06:45 pm
02-06-26 10:40 am
HK News Staffer
ನಟ ವಿಜಯ್ ಹಾದಿಯಲ್ಲೇ ಅಣ್ಣಾಮಲೈ ! ಬಿಜೆಪಿ ಬಿಟ್ಟು ದ...
02-06-26 10:01 am
ಪ್ರಧಾನಿ ಮೋದಿ ಕರೆ ಎಫೆಕ್ಟ್ ; ದೇಶಾದ್ಯಂತ ಚಿನ್ನ ಖರ...
31-05-26 09:25 pm
ಸೌದಿ ಜೈಲಿನಲ್ಲಿ ಎರಡು ದಶಕಗಳ ಅಗ್ನಿಪರೀಕ್ಷೆ; 34 ಕೋ...
29-05-26 06:17 pm
ಟಿಎಂಸಿಯಲ್ಲಿ ಬಿರುಕು ; 50 ಶಾಸಕರು, ಸಂಸದರು ಬಿಜೆಪಿ...
27-05-26 09:17 pm
02-06-26 04:18 pm
HK News Staffer
Mithun Rai, Dk Shivakumar CM, Mangalore: ಮುಂದ...
02-06-26 01:18 pm
Ut Khader, Mangalore: ಡಿಸಿಎಂ ಆಗೋದು ಮಾಧ್ಯಮದಲ್ಲ...
02-06-26 01:06 pm
Ivan Dsouza, Congress: ಐವಾನ್ ಡಿಸೋಜಗೆ ಸಚಿವ ಸ್ಥ...
01-06-26 07:05 pm
ಬೆಂಗಳೂರು–ಮಂಗಳೂರು ವಂದೇ ಭಾರತ್ ಟ್ರಯಲ್ಗೆ ಬ್ರೇಕ್...
01-06-26 02:22 pm
02-06-26 09:27 pm
HK News Staffer
Mangalore Robbery, Forest Jeep: ಅರಣ್ಯ ಇಲಾಖೆಯ...
02-06-26 02:58 pm
ಶಿರೂರಿನ ಹೊಳೆಯಲ್ಲಿ ಮುಳುಗಿ 16 ವರ್ಷದ ವಿದ್ಯಾರ್ಥಿ...
01-06-26 08:16 pm
ಪಿಲಾತಬೆಟ್ಟು ; ದೈವಕ್ಕೆ ತಂಬಿಲ ಮಾಡ್ತಿದ್ದಾಗಲೇ ಕುಡ...
01-06-26 12:40 pm
ನಾಲ್ಕು ಪುಟಗಳ ಡೆತ್ನೋಟ್ ಬರೆದಿಟ್ಟು ಲಾಡ್ಜ್ನಲ್ಲಿ...
31-05-26 08:25 pm