ಬ್ರೇಕಿಂಗ್ ನ್ಯೂಸ್
26-05-22 12:38 pm HK News Desk ಕ್ರೈಂ
ಕಲಬುರಗಿ, ಮೆ 26: ಅನ್ಯಕೋಮಿನ ಯುವತಿಯನ್ನ ಪ್ರೀತಿಸುತ್ತಿದ್ದ ಯುವಕನನ್ನ ಜನನಿಬಿಡ ಪ್ರದೇಶದ ನಡುರಸ್ತೆಯಲ್ಲಿಯೇ ಬರ್ಬರವಾಗಿ ಕೊಚ್ಚಿ ಕೊಲೆಗೈದ ಘಟನೆ ಜಿಲ್ಲೆಯ ಚಿತ್ತಾಪುರ ತಾಲೂಕಿನ ವಾಡಿ ಪಟ್ಟಣದಲ್ಲಿ ನಡೆದಿದೆ.
ವಾಡಿ ಪಟ್ಟಣದ ಭೀಮನಗರ ಬಡಾವಣೆ ನಿವಾಸಿ ವಿಜಯ ಕಾಂಬಳೆ (25) ಕೋಲೆಯಾದ ಯುವಕ ಎಂದು ಗುರುತಿಸಲಾಗಿದೆ. ವಿಜಯ ಅನ್ಯಕೋಮಿನ ಯುವತಿಯನ್ನ ಪ್ರೀತಿ ಮಾಡುತ್ತಿದ್ದನಂತೆ. ಇದೇ ಕಾರಣಕ್ಕೆ ಯುವತಿಯ ಕುಟುಂಬಸ್ಥರು ಹಾಗೂ ಸಹೋದರರು ಸೇರಿ ವಿಜಯನನ್ನ ಕೊಲೆಗೈದಿದ್ದಾರೆ ಎಂಬ ಶಂಕೆ ವ್ಯಕ್ತವಾಗಿದೆ. ದೈನಂದಿನಂತೆ ವಾಡಿ ಪಟ್ಟಣದಲ್ಲಿ ಓಡಾಡಿಕೊಂಡಿದ್ದ ವಿಜಯನನ್ನ ರೈಲ್ವೆ ತಡೆಗೋಡೆ ಹತ್ತಿರ ತಡೆದು ಜಗಳ ತೆಗೆದ ದುಷ್ಕರ್ಮಿಗಳು, ಮಾರಕಾಸ್ತ್ರ, ಕಲ್ಲು ಕಟ್ಟಿಗೆಯಿಂದ ಮಾರಣಾಂತಿಕ ಹಲ್ಲೆ ಮಾಡಿ ಪರಾರಿಯಾಗಿದ್ದಾರೆ. ತೀವ್ರ ರಕ್ತಸ್ರಾವದಿಂದ ಬಳಲಿದ ಯುವಕ ಸ್ಥಳದಲ್ಲಿಯೇ ವಿಲವಿಲ ಒದ್ದಾಡಿ ಸಾವನ್ನಪ್ಪಿದ್ದಾನೆ.
ಕೊಲೆ ಪ್ರಕರಣದಿಂದ ವಾಡಿ ಪಟ್ಟಣದಲ್ಲಿ ಆತಂಕದ ಛಾಯೆ ಆವರಿಸಿದೆ. ಯುವಕನ ಕುಟುಂಬಸ್ಥರ ಅಕ್ರಂದನ ಮುಗಿಲು ಮುಟ್ಟಿದೆ. ಇನ್ನು ಸ್ಥಳಕ್ಕೆ ಭೇಟಿ ನೀಡಿ ಪರೀಶಿಲನೆ ಮಾಡಿದ ಪೊಲೀಸರು ಹಂತಕರ ಶೋಧಕಾರ್ಯ ಆರಂಭಿಸಿದ್ದಾರೆ. ಘಟನಾ ಸ್ಥಳಕ್ಕೆ ಎಸ್ ಪಿ ಇಶಾ ಪಂಥ ಭೇಟಿ ನೀಡಿ ಪರಿಸ್ಥಿತಿ ವಿಚಾರಿಸಿದ್ದಾರೆ. ಮುಂಜಾಗ್ರತಾ ಕ್ರಮವಾಗಿ ಪಟ್ಟದ ಸುತ್ತಲೂ ಬಿಗಿ ಪೋಲಿಸ್ ಭದ್ರತೆಯನ್ನು ಕೈಗೊಳ್ಳಲಾಗಿದೆ.
ಘಟನೆ ಸಂಬಂಧ ವಾಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಕೊಲೆ ಕೇಸ್ನ ಕುರಿತು ತನಿಖೆ ಆರಂಭಿಸಿದ ಪೋಲಿಸರು ಹಂತಕರ ಹೆಡೆಮುರಿ ಕಟ್ಟಲು ಮಾಹಿತಿ ಕಲೆ ಹಾಕುತ್ತಿದ್ದಾರೆ. ಒಟ್ಟಿನಲ್ಲಿ ಪ್ರೀತಿಸಿದ ತಪ್ಪಿಗೆ ಯುವಕ ಬರ್ಬರವಾಗಿ ಹತ್ಯೆಯಾಗಿದ್ದರೆ, ಇತ್ತ ಇದ್ದ ಒಬ್ಬ ಮಗನನ್ನು ಕಳೆದುಕೊಂಡ ತಾಯಿ ಅನಾಥಳಾಗಿ ಕಣ್ಣಿಡುತ್ತಿದ್ದಾಳೆ.
Kalaburgi 25 year old boy murdered brutally for loving Muslim Girl. The deceased has been identified as Vijay Kambale.
27-06-26 08:31 pm
HK News Staffer
ಅಂಬಾನಿ ಕೊಟ್ಟ 900 ಕೋಟಿ ದೇಣಿಗೆಗೂ ಲೆಕ್ಕ ಇಲ್ಲ, ಈಗ...
27-06-26 04:21 pm
ಆರ್ಎಸ್ಎಸ್ ಗಲಿಬಿಲಿಗೊಂಡರೆ ಬಿಜೆಪಿ ಬುಸುಗುಡುತ್ತದ...
26-06-26 08:30 pm
ಬಿಡದಿಯಲ್ಲಿ ರೈತರ ವಿರುದ್ಧವಾಗಿ ಟೌನ್ಶಿಪ್ ಕಟ್ಟುವ...
26-06-26 05:10 pm
ಇಷ್ಟೆಲ್ಲಾ ಅಲ್ಲೋಲ ಕಲ್ಲೋಲಕ್ಕೆ ಶೋಭಾ ಕರಂದ್ಲಾಜೆ ನೇ...
25-06-26 09:10 pm
27-06-26 09:10 pm
HK News Staffer
40 ಸೆಕೆಂಡ್ ನಲ್ಲಿ ಎರಡು ಬಾರಿ ಭೂಕಂಪ ; ತತ್ತರಿಸಿ ಹ...
25-06-26 12:13 pm
ಕೂಲ್ ಸಿಟಿ ಯುರೋಪಿನಲ್ಲೀಗ ಬಿಸಿಲ ಹೊಡೆತ ; ಫ್ರಾನ್ಸ್...
24-06-26 01:51 pm
ಮಾಹಿತಿ ಹಕ್ಕು ನಿಯಮಗಳಿಗೆ ಮಹಾರಾಷ್ಟ್ರ ಸರ್ಕಾರ ತಿದ್...
23-06-26 10:47 pm
ಟಿಎಂಸಿಯಲ್ಲಿ ರಾಜಕೀಯ ಭೂಕಂಪ ; ಮಮತಾ ಬ್ಯಾನರ್ಜಿ ಅಧ...
23-06-26 12:21 pm
27-06-26 02:44 pm
HK News Staffer
Rss ಸಂಘಟನೆಯನ್ನು ರಿಜಿಸ್ಟರ್ ಮಾಡಿದ್ರೆ ಒಳ್ಳೇದು ;...
26-06-26 09:42 pm
ಸಾಂಪ್ರದಾಯಿಕ ಕನ್ನಡ ಎಂಎ ಪದವಿಗೆ ಆಧುನಿಕ ಟಚ್; ಸಂತ...
26-06-26 08:33 pm
ಡಿಕೆಶಿ ಜೊತೆ ಯಾವುದೇ ವ್ಯಾವಹಾರಿಕ ಸಂಬಂಧವಿಲ್ಲ, ಅಪಪ...
26-06-26 02:14 pm
ಮಂಗಳೂರು, ಮೈಸೂರು ಸೇರಿ ರಾಜ್ಯದ 10 ನಗರಗಳಿಗೆ ಇಲೆಕ್...
25-06-26 10:56 pm
27-06-26 08:01 pm
HK News Staffer
ಬೆಂಗಳೂರಿನಿಂದ ಪ್ರಿಯತಮೆಯ ಅಪಹರಣ ; ಅಂಕೋಲಾಕ್ಕೆ ಹೋಗ...
27-06-26 04:23 pm
ಬೆಂಗಳೂರಿನಲ್ಲಿ ಅಕ್ರಮ ಹಣದ ಭಾರಿ ಬೇಟೆ ; ಕುರುಬರಹಳ್...
27-06-26 04:19 pm
ಮಂತ್ರಾಲಯ ಯಾತ್ರೆ ಮಧ್ಯೆ ಯಮನಂತೆ ನುಗ್ಗಿದ ಲಾರಿ! ಡಿ...
27-06-26 11:46 am
Mangalore, Police, criminial escapes: ಪಾಂಡೇಶ್...
27-06-26 10:54 am