ಬ್ರೇಕಿಂಗ್ ನ್ಯೂಸ್
26-05-22 12:38 pm HK News Desk ಕ್ರೈಂ
ಕಲಬುರಗಿ, ಮೆ 26: ಅನ್ಯಕೋಮಿನ ಯುವತಿಯನ್ನ ಪ್ರೀತಿಸುತ್ತಿದ್ದ ಯುವಕನನ್ನ ಜನನಿಬಿಡ ಪ್ರದೇಶದ ನಡುರಸ್ತೆಯಲ್ಲಿಯೇ ಬರ್ಬರವಾಗಿ ಕೊಚ್ಚಿ ಕೊಲೆಗೈದ ಘಟನೆ ಜಿಲ್ಲೆಯ ಚಿತ್ತಾಪುರ ತಾಲೂಕಿನ ವಾಡಿ ಪಟ್ಟಣದಲ್ಲಿ ನಡೆದಿದೆ.
ವಾಡಿ ಪಟ್ಟಣದ ಭೀಮನಗರ ಬಡಾವಣೆ ನಿವಾಸಿ ವಿಜಯ ಕಾಂಬಳೆ (25) ಕೋಲೆಯಾದ ಯುವಕ ಎಂದು ಗುರುತಿಸಲಾಗಿದೆ. ವಿಜಯ ಅನ್ಯಕೋಮಿನ ಯುವತಿಯನ್ನ ಪ್ರೀತಿ ಮಾಡುತ್ತಿದ್ದನಂತೆ. ಇದೇ ಕಾರಣಕ್ಕೆ ಯುವತಿಯ ಕುಟುಂಬಸ್ಥರು ಹಾಗೂ ಸಹೋದರರು ಸೇರಿ ವಿಜಯನನ್ನ ಕೊಲೆಗೈದಿದ್ದಾರೆ ಎಂಬ ಶಂಕೆ ವ್ಯಕ್ತವಾಗಿದೆ. ದೈನಂದಿನಂತೆ ವಾಡಿ ಪಟ್ಟಣದಲ್ಲಿ ಓಡಾಡಿಕೊಂಡಿದ್ದ ವಿಜಯನನ್ನ ರೈಲ್ವೆ ತಡೆಗೋಡೆ ಹತ್ತಿರ ತಡೆದು ಜಗಳ ತೆಗೆದ ದುಷ್ಕರ್ಮಿಗಳು, ಮಾರಕಾಸ್ತ್ರ, ಕಲ್ಲು ಕಟ್ಟಿಗೆಯಿಂದ ಮಾರಣಾಂತಿಕ ಹಲ್ಲೆ ಮಾಡಿ ಪರಾರಿಯಾಗಿದ್ದಾರೆ. ತೀವ್ರ ರಕ್ತಸ್ರಾವದಿಂದ ಬಳಲಿದ ಯುವಕ ಸ್ಥಳದಲ್ಲಿಯೇ ವಿಲವಿಲ ಒದ್ದಾಡಿ ಸಾವನ್ನಪ್ಪಿದ್ದಾನೆ.
ಕೊಲೆ ಪ್ರಕರಣದಿಂದ ವಾಡಿ ಪಟ್ಟಣದಲ್ಲಿ ಆತಂಕದ ಛಾಯೆ ಆವರಿಸಿದೆ. ಯುವಕನ ಕುಟುಂಬಸ್ಥರ ಅಕ್ರಂದನ ಮುಗಿಲು ಮುಟ್ಟಿದೆ. ಇನ್ನು ಸ್ಥಳಕ್ಕೆ ಭೇಟಿ ನೀಡಿ ಪರೀಶಿಲನೆ ಮಾಡಿದ ಪೊಲೀಸರು ಹಂತಕರ ಶೋಧಕಾರ್ಯ ಆರಂಭಿಸಿದ್ದಾರೆ. ಘಟನಾ ಸ್ಥಳಕ್ಕೆ ಎಸ್ ಪಿ ಇಶಾ ಪಂಥ ಭೇಟಿ ನೀಡಿ ಪರಿಸ್ಥಿತಿ ವಿಚಾರಿಸಿದ್ದಾರೆ. ಮುಂಜಾಗ್ರತಾ ಕ್ರಮವಾಗಿ ಪಟ್ಟದ ಸುತ್ತಲೂ ಬಿಗಿ ಪೋಲಿಸ್ ಭದ್ರತೆಯನ್ನು ಕೈಗೊಳ್ಳಲಾಗಿದೆ.
ಘಟನೆ ಸಂಬಂಧ ವಾಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಕೊಲೆ ಕೇಸ್ನ ಕುರಿತು ತನಿಖೆ ಆರಂಭಿಸಿದ ಪೋಲಿಸರು ಹಂತಕರ ಹೆಡೆಮುರಿ ಕಟ್ಟಲು ಮಾಹಿತಿ ಕಲೆ ಹಾಕುತ್ತಿದ್ದಾರೆ. ಒಟ್ಟಿನಲ್ಲಿ ಪ್ರೀತಿಸಿದ ತಪ್ಪಿಗೆ ಯುವಕ ಬರ್ಬರವಾಗಿ ಹತ್ಯೆಯಾಗಿದ್ದರೆ, ಇತ್ತ ಇದ್ದ ಒಬ್ಬ ಮಗನನ್ನು ಕಳೆದುಕೊಂಡ ತಾಯಿ ಅನಾಥಳಾಗಿ ಕಣ್ಣಿಡುತ್ತಿದ್ದಾಳೆ.
Kalaburgi 25 year old boy murdered brutally for loving Muslim Girl. The deceased has been identified as Vijay Kambale.
09-09-25 10:52 pm
Bangalore Correspondent
U T Khader: ಯುಟಿ ಖಾದರ್ ಏಕಪಕ್ಷೀಯ ತೀರ್ಮಾನ ತೆಗೆದ...
09-09-25 09:14 pm
Shivamogga Accident: ಸೆ.25ಕ್ಕೆ ಹಸೆಮಣೆ ಏರಬೇಕಿದ...
08-09-25 08:07 pm
ವೀರಶೈವ ಲಿಂಗಾಯತರು ಹಿಂದು ಬದಲು ಇತರರು ಎಂದು ನಮೂದಿಸ...
08-09-25 06:48 pm
ಮಸೀದಿ ಎದುರಲ್ಲಿ ಗಣೇಶ ವಿಸರ್ಜನೆ ವೇಳೆ ಕಲ್ಲು ತೂರಾಟ...
08-09-25 05:21 pm
10-09-25 04:22 pm
HK News Desk
ನೇಪಾಳದಲ್ಲಿ ಹಿಂಸಾಚಾರ ತೀವ್ರ ; ದೇಶ ಬಿಟ್ಟು ಓಡಿದ ಪ...
09-09-25 11:09 pm
ನೂತನ ಉಪ ರಾಷ್ಟ್ರಪತಿಯಾಗಿ ಎನ್.ಡಿ.ಎ ಮೈತ್ರಿಕೂಟದ ಸಿ...
09-09-25 09:38 pm
ಕಾಸರಗೋಡು ; ರಾಷ್ಟ್ರೀಯ ಹೆದ್ದಾರಿ ದಾಟಲೆತ್ನಿಸಿದ ಮಹ...
08-09-25 11:06 pm
ನೇಪಾಳದಲ್ಲಿ ಸೋಶಿಯಲ್ ಮೀಡಿಯಾ ಬ್ಯಾನ್ ; ದೇಶಾದ್ಯಂತ...
08-09-25 10:59 pm
11-09-25 02:45 pm
Mangalore Correspondent
ಬಿಜೆಪಿ ಬಗ್ಗೆ ಪುತ್ತಿಲ ಪರಿವಾರದ ಅಸಮಾಧಾನ ; ಭರವಸೆ...
11-09-25 01:40 pm
Headline Karnataka, Social Campaigning, Manga...
11-09-25 11:34 am
ಧರ್ಮಸ್ಥಳ ಕೇಸ್ ; ವಿಚಾರಣೆ ಮುಗಿಸಿ ಸತ್ಯಕ್ಕೆ ಜಯ ಎನ...
10-09-25 10:50 pm
Yenepoya Hospital, Mangalore: ಯೆನಪೋಯ ಆಸ್ಪತ್ರೆ...
10-09-25 08:46 pm
11-09-25 02:25 pm
HK STAFF
Mangalore Police, Communial Case, Arrest, Cri...
08-09-25 10:34 pm
ಮಂಗಳೂರು ಏರ್ಪೋರ್ಟ್ ಟರ್ಮಿನಲ್ ಬಿಲ್ಡಿಂಗ್ ಧ್ವಂಸ ಬೆ...
07-09-25 03:34 pm
Mangalore SAF Police Constable, Arrest: ವಕೀಲ...
06-09-25 08:32 pm
60 Crore Fraud, Actress Shilpa Shetty, Raj Ku...
06-09-25 07:45 pm