ಬ್ರೇಕಿಂಗ್ ನ್ಯೂಸ್
26-05-22 12:38 pm HK News Desk ಕ್ರೈಂ
ಕಲಬುರಗಿ, ಮೆ 26: ಅನ್ಯಕೋಮಿನ ಯುವತಿಯನ್ನ ಪ್ರೀತಿಸುತ್ತಿದ್ದ ಯುವಕನನ್ನ ಜನನಿಬಿಡ ಪ್ರದೇಶದ ನಡುರಸ್ತೆಯಲ್ಲಿಯೇ ಬರ್ಬರವಾಗಿ ಕೊಚ್ಚಿ ಕೊಲೆಗೈದ ಘಟನೆ ಜಿಲ್ಲೆಯ ಚಿತ್ತಾಪುರ ತಾಲೂಕಿನ ವಾಡಿ ಪಟ್ಟಣದಲ್ಲಿ ನಡೆದಿದೆ.
ವಾಡಿ ಪಟ್ಟಣದ ಭೀಮನಗರ ಬಡಾವಣೆ ನಿವಾಸಿ ವಿಜಯ ಕಾಂಬಳೆ (25) ಕೋಲೆಯಾದ ಯುವಕ ಎಂದು ಗುರುತಿಸಲಾಗಿದೆ. ವಿಜಯ ಅನ್ಯಕೋಮಿನ ಯುವತಿಯನ್ನ ಪ್ರೀತಿ ಮಾಡುತ್ತಿದ್ದನಂತೆ. ಇದೇ ಕಾರಣಕ್ಕೆ ಯುವತಿಯ ಕುಟುಂಬಸ್ಥರು ಹಾಗೂ ಸಹೋದರರು ಸೇರಿ ವಿಜಯನನ್ನ ಕೊಲೆಗೈದಿದ್ದಾರೆ ಎಂಬ ಶಂಕೆ ವ್ಯಕ್ತವಾಗಿದೆ. ದೈನಂದಿನಂತೆ ವಾಡಿ ಪಟ್ಟಣದಲ್ಲಿ ಓಡಾಡಿಕೊಂಡಿದ್ದ ವಿಜಯನನ್ನ ರೈಲ್ವೆ ತಡೆಗೋಡೆ ಹತ್ತಿರ ತಡೆದು ಜಗಳ ತೆಗೆದ ದುಷ್ಕರ್ಮಿಗಳು, ಮಾರಕಾಸ್ತ್ರ, ಕಲ್ಲು ಕಟ್ಟಿಗೆಯಿಂದ ಮಾರಣಾಂತಿಕ ಹಲ್ಲೆ ಮಾಡಿ ಪರಾರಿಯಾಗಿದ್ದಾರೆ. ತೀವ್ರ ರಕ್ತಸ್ರಾವದಿಂದ ಬಳಲಿದ ಯುವಕ ಸ್ಥಳದಲ್ಲಿಯೇ ವಿಲವಿಲ ಒದ್ದಾಡಿ ಸಾವನ್ನಪ್ಪಿದ್ದಾನೆ.
ಕೊಲೆ ಪ್ರಕರಣದಿಂದ ವಾಡಿ ಪಟ್ಟಣದಲ್ಲಿ ಆತಂಕದ ಛಾಯೆ ಆವರಿಸಿದೆ. ಯುವಕನ ಕುಟುಂಬಸ್ಥರ ಅಕ್ರಂದನ ಮುಗಿಲು ಮುಟ್ಟಿದೆ. ಇನ್ನು ಸ್ಥಳಕ್ಕೆ ಭೇಟಿ ನೀಡಿ ಪರೀಶಿಲನೆ ಮಾಡಿದ ಪೊಲೀಸರು ಹಂತಕರ ಶೋಧಕಾರ್ಯ ಆರಂಭಿಸಿದ್ದಾರೆ. ಘಟನಾ ಸ್ಥಳಕ್ಕೆ ಎಸ್ ಪಿ ಇಶಾ ಪಂಥ ಭೇಟಿ ನೀಡಿ ಪರಿಸ್ಥಿತಿ ವಿಚಾರಿಸಿದ್ದಾರೆ. ಮುಂಜಾಗ್ರತಾ ಕ್ರಮವಾಗಿ ಪಟ್ಟದ ಸುತ್ತಲೂ ಬಿಗಿ ಪೋಲಿಸ್ ಭದ್ರತೆಯನ್ನು ಕೈಗೊಳ್ಳಲಾಗಿದೆ.
ಘಟನೆ ಸಂಬಂಧ ವಾಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಕೊಲೆ ಕೇಸ್ನ ಕುರಿತು ತನಿಖೆ ಆರಂಭಿಸಿದ ಪೋಲಿಸರು ಹಂತಕರ ಹೆಡೆಮುರಿ ಕಟ್ಟಲು ಮಾಹಿತಿ ಕಲೆ ಹಾಕುತ್ತಿದ್ದಾರೆ. ಒಟ್ಟಿನಲ್ಲಿ ಪ್ರೀತಿಸಿದ ತಪ್ಪಿಗೆ ಯುವಕ ಬರ್ಬರವಾಗಿ ಹತ್ಯೆಯಾಗಿದ್ದರೆ, ಇತ್ತ ಇದ್ದ ಒಬ್ಬ ಮಗನನ್ನು ಕಳೆದುಕೊಂಡ ತಾಯಿ ಅನಾಥಳಾಗಿ ಕಣ್ಣಿಡುತ್ತಿದ್ದಾಳೆ.
Kalaburgi 25 year old boy murdered brutally for loving Muslim Girl. The deceased has been identified as Vijay Kambale.
31-10-25 08:10 pm
HK News Desk
'ನವೆಂಬರ್ ಕ್ರಾಂತಿ' ಮುನ್ಸೂಚನೆ ನೀಡಿದ್ದ ರಾಜಣ್ಣ ಅಖ...
31-10-25 06:02 pm
ಧರ್ಮಸ್ಥಳ ಕೇಸ್ ; ಮಹೇಶ್ ಶೆಟ್ಟಿ ತಿಮರೋಡಿ ತಂಡದ ಮೇಲ...
30-10-25 11:00 pm
ನಟ ಪ್ರಕಾಶ್ ರಾಜ್, ರಾಜೇಂದ್ರ ಚೆನ್ನಿ, ಜಕರಿಯಾ ಜೋಕಟ...
30-10-25 07:25 pm
ಚಿತ್ತಾಪುರ ಆರೆಸ್ಸೆಸ್ ಪಥಸಂಚಲನ ; ನ.5ರಂದು ಮತ್ತೊಂದ...
30-10-25 06:22 pm
01-11-25 07:27 pm
HK News Desk
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
ಭಾರತ ಮೂಲದ ಅನಿಲ್ ಕುಮಾರ್ ಬೊಲ್ಲಗೆ 240 ಕೋಟಿ ಮೊತ್ತ...
28-10-25 10:23 pm
ಶಾಂಘೈ ತೆರಳಿದ್ದ ಪ್ರಧಾನಿ ಮೋದಿ ಹತ್ಯೆಗೆ ಅಮೆರಿಕ ಸಂ...
26-10-25 11:01 pm
ಅಂಗೈಯಲ್ಲಿ ಡೆತ್ ನೋಟ್ ಬರೆದಿಟ್ಟು ಸರ್ಕಾರಿ ವೈದ್ಯೆ...
26-10-25 05:38 pm
31-10-25 10:47 pm
Mangalore Correspondent
MP Brijesh Chowta, Mangalore: ದೇಶವ್ಯಾಪಿ ಸರ್ದಾ...
31-10-25 09:23 pm
ಅನಧಿಕೃತ ಪಾರ್ಕಿಂಗ್ ವಿರುದ್ಧ ಮಂಗಳೂರು ಪೊಲೀಸರ ಕಾರ್...
31-10-25 09:00 pm
78 ಶೇ. ಜನರಿಗೆ ಎರಡು ವರ್ಷದಲ್ಲಿ 23 ಸಾವಿರ ಮಕ್ಕಳು,...
31-10-25 03:05 pm
ಬಿಸಿ ರೋಡಿನಲ್ಲಿ ಆಂಬುಲೆನ್ಸ್ ಗೆ ಸೈಡ್ ಕೊಡದೆ ಸತಾಯಿ...
30-10-25 11:16 pm
01-11-25 07:25 pm
HK News Desk
Rowdy Topi Naufal Murder, Mangalore: ಮಂಗಳೂರಿನ...
01-11-25 03:31 pm
ವೃದ್ಧ ಮಹಿಳೆಗೆ ಡಿಜಿಟಲ್ ಅರೆಸ್ಟ್ ಬಲೆ ; ಐದು ಗಂಟೆಯ...
01-11-25 01:31 pm
ಸುಹಾಸ್ ಶೆಟ್ಟಿ ಕೊಲೆ ಪ್ರಕರಣ ; 11 ಆರೋಪಿಗಳ ವಿರುದ್...
31-10-25 10:57 pm
ಮುಂಬೈನಲ್ಲಿ 17 ಮಕ್ಕಳನ್ನು ಒತ್ತೆಯಾಳಾಗಿಸಿದ್ದ ವ್ಯಕ...
31-10-25 12:55 pm