ಬ್ರೇಕಿಂಗ್ ನ್ಯೂಸ್
26-05-22 12:38 pm HK News Desk ಕ್ರೈಂ
ಕಲಬುರಗಿ, ಮೆ 26: ಅನ್ಯಕೋಮಿನ ಯುವತಿಯನ್ನ ಪ್ರೀತಿಸುತ್ತಿದ್ದ ಯುವಕನನ್ನ ಜನನಿಬಿಡ ಪ್ರದೇಶದ ನಡುರಸ್ತೆಯಲ್ಲಿಯೇ ಬರ್ಬರವಾಗಿ ಕೊಚ್ಚಿ ಕೊಲೆಗೈದ ಘಟನೆ ಜಿಲ್ಲೆಯ ಚಿತ್ತಾಪುರ ತಾಲೂಕಿನ ವಾಡಿ ಪಟ್ಟಣದಲ್ಲಿ ನಡೆದಿದೆ.
ವಾಡಿ ಪಟ್ಟಣದ ಭೀಮನಗರ ಬಡಾವಣೆ ನಿವಾಸಿ ವಿಜಯ ಕಾಂಬಳೆ (25) ಕೋಲೆಯಾದ ಯುವಕ ಎಂದು ಗುರುತಿಸಲಾಗಿದೆ. ವಿಜಯ ಅನ್ಯಕೋಮಿನ ಯುವತಿಯನ್ನ ಪ್ರೀತಿ ಮಾಡುತ್ತಿದ್ದನಂತೆ. ಇದೇ ಕಾರಣಕ್ಕೆ ಯುವತಿಯ ಕುಟುಂಬಸ್ಥರು ಹಾಗೂ ಸಹೋದರರು ಸೇರಿ ವಿಜಯನನ್ನ ಕೊಲೆಗೈದಿದ್ದಾರೆ ಎಂಬ ಶಂಕೆ ವ್ಯಕ್ತವಾಗಿದೆ. ದೈನಂದಿನಂತೆ ವಾಡಿ ಪಟ್ಟಣದಲ್ಲಿ ಓಡಾಡಿಕೊಂಡಿದ್ದ ವಿಜಯನನ್ನ ರೈಲ್ವೆ ತಡೆಗೋಡೆ ಹತ್ತಿರ ತಡೆದು ಜಗಳ ತೆಗೆದ ದುಷ್ಕರ್ಮಿಗಳು, ಮಾರಕಾಸ್ತ್ರ, ಕಲ್ಲು ಕಟ್ಟಿಗೆಯಿಂದ ಮಾರಣಾಂತಿಕ ಹಲ್ಲೆ ಮಾಡಿ ಪರಾರಿಯಾಗಿದ್ದಾರೆ. ತೀವ್ರ ರಕ್ತಸ್ರಾವದಿಂದ ಬಳಲಿದ ಯುವಕ ಸ್ಥಳದಲ್ಲಿಯೇ ವಿಲವಿಲ ಒದ್ದಾಡಿ ಸಾವನ್ನಪ್ಪಿದ್ದಾನೆ.
ಕೊಲೆ ಪ್ರಕರಣದಿಂದ ವಾಡಿ ಪಟ್ಟಣದಲ್ಲಿ ಆತಂಕದ ಛಾಯೆ ಆವರಿಸಿದೆ. ಯುವಕನ ಕುಟುಂಬಸ್ಥರ ಅಕ್ರಂದನ ಮುಗಿಲು ಮುಟ್ಟಿದೆ. ಇನ್ನು ಸ್ಥಳಕ್ಕೆ ಭೇಟಿ ನೀಡಿ ಪರೀಶಿಲನೆ ಮಾಡಿದ ಪೊಲೀಸರು ಹಂತಕರ ಶೋಧಕಾರ್ಯ ಆರಂಭಿಸಿದ್ದಾರೆ. ಘಟನಾ ಸ್ಥಳಕ್ಕೆ ಎಸ್ ಪಿ ಇಶಾ ಪಂಥ ಭೇಟಿ ನೀಡಿ ಪರಿಸ್ಥಿತಿ ವಿಚಾರಿಸಿದ್ದಾರೆ. ಮುಂಜಾಗ್ರತಾ ಕ್ರಮವಾಗಿ ಪಟ್ಟದ ಸುತ್ತಲೂ ಬಿಗಿ ಪೋಲಿಸ್ ಭದ್ರತೆಯನ್ನು ಕೈಗೊಳ್ಳಲಾಗಿದೆ.
ಘಟನೆ ಸಂಬಂಧ ವಾಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಕೊಲೆ ಕೇಸ್ನ ಕುರಿತು ತನಿಖೆ ಆರಂಭಿಸಿದ ಪೋಲಿಸರು ಹಂತಕರ ಹೆಡೆಮುರಿ ಕಟ್ಟಲು ಮಾಹಿತಿ ಕಲೆ ಹಾಕುತ್ತಿದ್ದಾರೆ. ಒಟ್ಟಿನಲ್ಲಿ ಪ್ರೀತಿಸಿದ ತಪ್ಪಿಗೆ ಯುವಕ ಬರ್ಬರವಾಗಿ ಹತ್ಯೆಯಾಗಿದ್ದರೆ, ಇತ್ತ ಇದ್ದ ಒಬ್ಬ ಮಗನನ್ನು ಕಳೆದುಕೊಂಡ ತಾಯಿ ಅನಾಥಳಾಗಿ ಕಣ್ಣಿಡುತ್ತಿದ್ದಾಳೆ.
Kalaburgi 25 year old boy murdered brutally for loving Muslim Girl. The deceased has been identified as Vijay Kambale.
12-09-26 09:40 pm
HK News Staffer
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
14-09-26 10:01 pm
HK News Staffer
ಮಂಗಳೂರಿನಲ್ಲಿ ಎರಡು ದಿನ ಸಿಎಂ ಡಿಕೆಶಿ ವಾಸ್ತವ್ಯ ;...
14-09-26 06:02 pm
100 ವರ್ಷಗಳ ಬಳಿಕವೂ ಸ್ವಂತ ಸೂರಿಗಾಗಿ ಕರಾವಳಿಯಲ್ಲಿ...
14-09-26 05:00 pm
Konkan Catholic Credit Society Inaugurated in...
14-09-26 04:18 pm
Konkan Catholic Credit Society Mangalore: ಹಣಕ...
13-09-26 10:11 pm
12-09-26 07:41 pm
HK News Staffer
ಕ್ರಿಪ್ಟೊ ಕರೆನ್ಸಿ ಹೆಸ್ರಲ್ಲಿ ಡಾಕ್ಟರ್ ಗೆ ಮಹಿಳೆಯಿ...
11-09-26 06:38 pm
ಜಾಮೀನು ಪಡೆಯಲು ನಕಲಿ ಆಧಾರ್ ಕಾರ್ಡ್ ಹಾಜರು ; ಉಡು...
11-09-26 01:09 pm
ಬೈಕ್ಗೆ ಡಿಕ್ಕಿ ಹೊಡೆದ ಕಾರು ; ಚಾಮರಾಜನಗರದಲ್ಲಿ ಮೂ...
11-09-26 10:14 am
ಕುಂದಾಪುರದಲ್ಲಿ 8 ಶಾಲಾ ಮಕ್ಕಳ ಬಲಿ ಪಡೆದ ಭೀಕರ ಅಪಘಾ...
10-09-26 08:16 pm