ಬ್ರೇಕಿಂಗ್ ನ್ಯೂಸ್
27-05-22 04:07 pm HK News Desk ಕ್ರೈಂ
ನವದೆಹಲಿ, ಮೇ 27 : ಅಕ್ರಮ ಆಸ್ತಿ ಗಳಿಕೆ ಪ್ರಕರಣದಲ್ಲಿ ಹರಿಯಾಣದ ಮಾಜಿ ಸಿಎಂ ಓಂಪ್ರಕಾಶ್ ಚೌಟಾಲಾ ಅವರಿಗೆ ದೆಹಲಿಯ ವಿಶೇಷ ಸಿಬಿಐ ನ್ಯಾಯಾಲಯ ನಾಲ್ಕು ವರ್ಷಗಳ ಜೈಲು ಶಿಕ್ಷೆ ಮತ್ತು 50 ಲಕ್ಷ ರೂ. ದಂಡ ವಿಧಿಸಿ ತೀರ್ಪು ನೀಡಿದೆ.
ಇದೆ ವೇಳೆ, ಓಂಪ್ರಕಾಶ್ ಚೌಟಾಲಾ ಅಕ್ರಮ ಹಣದಿಂದ ಗಳಿಸಿರುವ ನಾಲ್ಕು ಕಡೆಗಳ ಆಸ್ತಿಗಳನ್ನು ಮುಟ್ಟುಗೋಲು ಹಾಕಿಕೊಳ್ಳುವಂತೆ ಕೋರ್ಟ್ ಆದೇಶಿಸಿದೆ.
1993ರಿಂದ 2006ರ ವರೆಗಿನ ಅಕ್ರಮ ಆಸ್ತಿ ಗಳಿಕೆ ಪ್ರಕರಣದಲ್ಲಿ ದೋಷಿಯಾಗಿದ್ದ ಚೌಟಾಲಾ ಪರ ವಕೀಲರು ಹಾಗೂ ಸಿಬಿಐ ಪರ ವಕೀಲರ ವಾದವನ್ನು ವಿಶೇಷ ಕೋರ್ಟ್ ನ್ಯಾಯಾಧೀಶ ವಿಕಾಸ್ ಧುಲ್ ಗುರುವಾರ ಆಲಿಸಿದ್ದರು. ಚೌಟಾಲಾ ಅವರ ವೈದ್ಯಕೀಯ ಸಮಸ್ಯೆ ಮತ್ತು ವೃದ್ಧಾಪ್ಯವನ್ನು ಉಲ್ಲೇಖಿಸಿ ಅವರಿಗೆ ಕನಿಷ್ಠ ಶಿಕ್ಷೆಯನ್ನು ನೀಡಬೇಕೆಂದು ನ್ಯಾಯಾಲಯವನ್ನು ಕೋರಿದ್ದರು. ಆದರೆ ಸಿಬಿಐ ಪರ ವಕೀಲರು ಆರೋಪಿಗೆ ಗರಿಷ್ಠ ಶಿಕ್ಷೆ ವಿಧಿಸುವಂತೆ ಕೋರಿದ್ದಲ್ಲದೆ, ಇದು ಸಮಾಜಕ್ಕೆ ಸಂದೇಶವನ್ನು ನೀಡಬೇಕು ಎಂದು ಮನವಿ ಮಾಡಿತ್ತು.

ಸಿಬಿಐ ಅಧಿಕಾರಿಗಳು ಈ ಬಗ್ಗೆ 2005 ರಲ್ಲಿ ಪ್ರಕರಣ ದಾಖಲಿಸಿದ್ದು 1993 ಮತ್ತು 2006 ರ ನಡುವೆ ಅಕ್ರಮ ಆಸ್ತಿಯನ್ನು ಗಳಿಸಿದ ಆರೋಪದ ಮೇಲೆ ಮಾರ್ಚ್ 26, 2010 ರಂದು ಚಾರ್ಜ್ ಶೀಟ್ ಸಲ್ಲಿಸಿದ್ದರು. ಆನಂತರ ಕೋರ್ಟಿನಲ್ಲಿ ವಿಚಾರಣೆ ನಡೆದು ಸುದೀರ್ಘ ಅವಧಿಯ ಬಳಿಕ ಸಾವಿನ ಅಂಚಿನಲ್ಲಿರುವ ಚೌಟಾಲಾಗೆ ಶಿಕ್ಷೆ ವಿಧಿಸಿದೆ. ಭ್ರಷ್ಟಾಚಾರ ಪ್ರಕರಣದಲ್ಲಿ ಮಾಜಿ ಮುಖ್ಯಮಂತ್ರಿ ಒಬ್ಬರಿಗೆ ಶಿಕ್ಷೆಯಾಗಿದ್ದು ಇದೇ ಮೊದಲು.
A decision has been taken on the punishment of former Haryana Chief Minister Om Prakash Chautala in the disproportionate assets case. A special CBI court in Delhi on Friday sentenced former Haryana Chief Minister Om Prakash Chautala to four years' imprisonment and also imposed a fine of Rs.50 lakhs, convicted in the disproportionate assets case. Not only this, the court has also ordered confiscation of four properties of Chautala.
21-02-26 11:27 am
HK News Desk
ಹಾಸನಾಂಬೆ ಉತ್ಸವ ಟೆಂಡರ್ನಲ್ಲಿ ಭಾರೀ ಗೋಲ್ಮಾಲ್ ? ;...
20-02-26 09:20 pm
ಸಾರಿಗೆ ನೌಕರರ ಮುಷ್ಕರ ತಾತ್ಕಾಲಿಕ ಹಿಂದಕ್ಕೆ ; 26 ತ...
19-02-26 09:29 pm
ಪರಮೇಶ್ವರ್ ಅಥವಾ ಡಿಕೆಶಿ ಯಾರಾಗ್ತಾರೆ ಮುಂದಿನ ಮುಖ್ಯ...
19-02-26 03:11 pm
ವಿಧಾನಸೌಧ ಒಳಗಡೆ ಮಾಧ್ಯಮಗಳಿಗೆ ಲಕ್ಷ್ಮಣ ರೇಖೆ ; ಭದ್...
18-02-26 09:02 pm
21-02-26 05:01 pm
HK News Desk
ಸುಂಕ ನೀತಿ ಕಾನೂನುಬಾಹಿರ ಎಂದ ಅಮೆರಿಕ ಸುಪ್ರೀಂ ಕೋರ್...
21-02-26 03:07 pm
ಎಐ ಶೃಂಗಸಭೆಯಲ್ಲಿ ಕಾಂಗ್ರೆಸ್ ಕಾರ್ಯಕರ್ತರ ಶರ್ಟ್ ಬಿ...
20-02-26 08:45 pm
ಗಲ್ಫ್ ದೇಶಗಳತ್ತ ಅಮೆರಿಕದ ಯುದ್ಧ ವಿಮಾನಗಳು ; ಇರಾನ್...
19-02-26 11:04 pm
'ಉಚಿತ' ಕೊಡುಗೆಗಳು ದೇಶದ ಅಭಿವೃದ್ಧಿಗೆ ಅಡ್ಡಿ ; ಆದಾ...
19-02-26 10:10 pm
21-02-26 09:30 pm
Mangalore Correspondent
ಲೂಡೋ ಆಡುವಾಗ ಪ್ಲಾಸ್ಟಿಕ್ ಕಾಯ್ನ್ ನುಂಗಿದ ಎಂಟು ವರ್...
21-02-26 09:02 pm
Mangalore, SIT, Sridhar: ಶಿಬಾಜೆ ಶ್ರೀಧರ ಮುಗೇರ...
20-02-26 06:05 pm
Kotekar, Mangalore News: ಕೋಟೆಕಾರು ಪ.ಪಂ ಸದಸ್ಯ...
20-02-26 04:18 pm
ಕುತ್ಲೂರಿನಲ್ಲಿ ನಕ್ಸಲ್ ಕರಪತ್ರ ಹಂಚಿದ್ದ ಪ್ರಕರಣ ;...
19-02-26 10:37 pm
21-02-26 05:50 pm
HK News Desk
ಬೆಂಗಳೂರಿನಲ್ಲಿ ಭಯೋತ್ಪಾದಕ ಜಾಲ ; ಎನ್ಐಎ ವಾಂಟೆಡ್ ಲ...
21-02-26 04:29 pm
ಕೊಲೆ- ಆತ್ಮಹತ್ಯೆ-ನಾಪತ್ತೆ ಕತೆ ಕಟ್ಟಿದ್ದ ಮಹಿಳೆ ;...
21-02-26 02:22 pm
Mangalore Police, Safwan Hussain Arrest : ನಟೋ...
20-02-26 10:08 pm
ಲಕ್ಕುಂಡಿ ನಿಧಿ ಹೆಸ್ರಲ್ಲಿ ಜನರಿಗೆ ಟೋಪಿ ; ಹಂಡಿಯೊಳ...
20-02-26 09:07 pm