ಬ್ರೇಕಿಂಗ್ ನ್ಯೂಸ್
27-05-22 08:59 pm Mangalore Correspondent ಕ್ರೈಂ
ಉಳ್ಳಾಲ, ಮೇ 27: ಹಣಕಾಸಿನ ವಿಚಾರಕ್ಕೆ ಸಂಬಂಧಿಸಿ ಉಚ್ಚಿಲ ಸಮೀಪ ನಸುಕಿನ ಜಾವ ನಡೆದಿರುವ ರೌಡಿಶೀಟರ್ ಅಜ್ಜಿನಡ್ಕ , ಮುಳ್ಳುಗುಡ್ಡೆ ನಿವಾಸಿ ಆರೀಫ್ (37) ಕೊಲೆಯತ್ನ ಪ್ರಕರಣದ ಐವರು ಆರೋಪಿಗಳನ್ನು ಉಳ್ಳಾಲ ಪೊಲೀಸರು ಬಂಧಿಸಿದ್ದಾರೆ.
ಉಳ್ಳಾಲ ಮೇಲಂಗಡಿ ನಿವಾಸಿ ಅಬ್ದುಲ್ ಕರೀಂ(46), ಪೈಝಲ್ನಗರ ನಿವಾಸಿಗಳಾದ ಪುಚ್ಚ ನಿಶಾಕ್(25), ಮೊಹಮ್ಮದ್ ಅಶ್ಪಾಕ್(26), ಕಾಟಿಪಳ್ಳ ನಿವಾಸಿ ಉಮ್ಮರ್ ಫಾರೂಕ್(25), ಮಾರ್ನಮಿಕಟ್ಟೆ ನಿವಾಸಿ ರಿಫಾತ್ (27) ಬಂಧಿತ ಆರೋಪಿಗಳು. ರೌಡಿಶೀಟರ್ ಆರೀಫ್ ಮತ್ತು ಅಬ್ದುಲ್ ಕರೀಂ ಜತೆಯಾಗಿ ವ್ಯವಹಾರ ಮಾಡುತ್ತಿದ್ದು, ಕರೀಂ ಎಂಬಾತ ಆರೀಫ್ ನಿಂದ ಸಾಲ ಪಡೆದುಕೊಂಡಿದ್ದ ಎನ್ನಲಾಗಿದೆ.
ಕೆಲವು ದಿನಗಳ ಹಿಂದೆ ಆರೀಫ್ ಸಾಲ ನೀಡಿದ ಹಣ ವಾಪಸ್ ನೀಡುವಂತೆ ಕರೀಂನಲ್ಲಿ ಕೇಳಿದ್ದ. ಈ ವಿಚಾರವನ್ನು ಕರೀಂ ನೌಫಾಲ್ ಬಳಿ ತಿಳಿಸಿದ್ದ ಎನ್ನಲಾಗಿದೆ. ನೌಫಾಲ್ ಆರೀಫ್ಗೆ ಕರೆ ಮಾಡಿ ಎಲ್ಲಾ ಹಣ ವಾಪಸ್ ನೀಡಲು ಸಾಧ್ಯವಿಲ್ಲ ಎಂದು ತಿಳಿಸಿದ್ದ. ಇದೇ ವಿಚಾರದಲ್ಲಿ ಅವರ ಮಧ್ಯೆ ಸಂಘರ್ಷ ನಡೆದಿದ್ದು, ನೌಫಾಲ್ ತನ್ನ ಸ್ನೇಹಿತರಾದ ನಿಶಾಕ್, ಅಶ್ಪಾಕ್, ಫಾರೂಕ್ ಮತ್ತು ರಿಫಾತ್ ಗೆ ಕೊಲೆ ಮಾಡಲು ಸುಫಾರಿ ನೀಡಿದ್ದ ಎಂಬುದು ತನಿಖೆಯ ವೇಳೆ ತಿಳಿದುಬಂದಿದೆ.
ಮಂಗಳವಾರ ನಸುಕಿನ ಜಾವ ಆರೋಪಿಗಳು ಆರೀಫ್ ನನ್ನು ಉಚ್ಚಿಲ ಬಳಿ ತಡೆದು ನಿಲ್ಲಿಸಿ ಮಚ್ಚಿನಿಂದ ದಾಳಿ ನಡೆಸಿ ಕೊಲೆಯತ್ನ ನಡೆಸಿದ್ದರು. ಗಂಭೀರ ಗಾಯಗೊಂಡ ಆರೀಫ್ ಆರೋಪಿಗಳ ಕೈಯಿಂದ ತಪ್ಪಿಸಿಕೊಂಡಿದ್ದು, ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ದಾಖಲಾಗಿದ್ದರು. ಬಂಧಿತ ಆರೋಪಿಗಳನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ನ್ಯಾಯಾಂಗ ಬಂಧನ ವಿಧಿಸಲಾಗಿದೆ. ತಲೆಮರೆಸಿಕೊಂಡಿರುವ ಆರೋಪಿಗಳಾದ ನೌಫಾಲ್ , ತಲ್ಹತ್ ಬಂಧನಕ್ಕೆ ಶೋಧ ಮುಂದುವರಿದಿದೆ.
ಉಳ್ಳಾಲ ; ಹಳೇ ದ್ವೇಷ ತೀರಿಸಲು ರೌಡಿಗೆ ಇರಿದು ಕೊಲೆಯತ್ನ, ನಾಲ್ವರು ದುಷ್ಕರ್ಮಿಗಳಿಂದ ಕುಕೃತ್ಯ
Rowdy stabbed at Ullal, five arrested by Ullal police in Mangalore. Arif was stabbed by miscreants over old revenge near Uchila. The search for another accused is on.
09-09-25 10:52 pm
Bangalore Correspondent
U T Khader: ಯುಟಿ ಖಾದರ್ ಏಕಪಕ್ಷೀಯ ತೀರ್ಮಾನ ತೆಗೆದ...
09-09-25 09:14 pm
Shivamogga Accident: ಸೆ.25ಕ್ಕೆ ಹಸೆಮಣೆ ಏರಬೇಕಿದ...
08-09-25 08:07 pm
ವೀರಶೈವ ಲಿಂಗಾಯತರು ಹಿಂದು ಬದಲು ಇತರರು ಎಂದು ನಮೂದಿಸ...
08-09-25 06:48 pm
ಮಸೀದಿ ಎದುರಲ್ಲಿ ಗಣೇಶ ವಿಸರ್ಜನೆ ವೇಳೆ ಕಲ್ಲು ತೂರಾಟ...
08-09-25 05:21 pm
10-09-25 04:22 pm
HK News Desk
ನೇಪಾಳದಲ್ಲಿ ಹಿಂಸಾಚಾರ ತೀವ್ರ ; ದೇಶ ಬಿಟ್ಟು ಓಡಿದ ಪ...
09-09-25 11:09 pm
ನೂತನ ಉಪ ರಾಷ್ಟ್ರಪತಿಯಾಗಿ ಎನ್.ಡಿ.ಎ ಮೈತ್ರಿಕೂಟದ ಸಿ...
09-09-25 09:38 pm
ಕಾಸರಗೋಡು ; ರಾಷ್ಟ್ರೀಯ ಹೆದ್ದಾರಿ ದಾಟಲೆತ್ನಿಸಿದ ಮಹ...
08-09-25 11:06 pm
ನೇಪಾಳದಲ್ಲಿ ಸೋಶಿಯಲ್ ಮೀಡಿಯಾ ಬ್ಯಾನ್ ; ದೇಶಾದ್ಯಂತ...
08-09-25 10:59 pm
11-09-25 02:45 pm
Mangalore Correspondent
ಬಿಜೆಪಿ ಬಗ್ಗೆ ಪುತ್ತಿಲ ಪರಿವಾರದ ಅಸಮಾಧಾನ ; ಭರವಸೆ...
11-09-25 01:40 pm
Headline Karnataka, Social Campaigning, Manga...
11-09-25 11:34 am
ಧರ್ಮಸ್ಥಳ ಕೇಸ್ ; ವಿಚಾರಣೆ ಮುಗಿಸಿ ಸತ್ಯಕ್ಕೆ ಜಯ ಎನ...
10-09-25 10:50 pm
Yenepoya Hospital, Mangalore: ಯೆನಪೋಯ ಆಸ್ಪತ್ರೆ...
10-09-25 08:46 pm
11-09-25 02:25 pm
HK STAFF
Mangalore Police, Communial Case, Arrest, Cri...
08-09-25 10:34 pm
ಮಂಗಳೂರು ಏರ್ಪೋರ್ಟ್ ಟರ್ಮಿನಲ್ ಬಿಲ್ಡಿಂಗ್ ಧ್ವಂಸ ಬೆ...
07-09-25 03:34 pm
Mangalore SAF Police Constable, Arrest: ವಕೀಲ...
06-09-25 08:32 pm
60 Crore Fraud, Actress Shilpa Shetty, Raj Ku...
06-09-25 07:45 pm