ಬ್ರೇಕಿಂಗ್ ನ್ಯೂಸ್
27-05-22 08:59 pm Mangalore Correspondent ಕ್ರೈಂ
ಉಳ್ಳಾಲ, ಮೇ 27: ಹಣಕಾಸಿನ ವಿಚಾರಕ್ಕೆ ಸಂಬಂಧಿಸಿ ಉಚ್ಚಿಲ ಸಮೀಪ ನಸುಕಿನ ಜಾವ ನಡೆದಿರುವ ರೌಡಿಶೀಟರ್ ಅಜ್ಜಿನಡ್ಕ , ಮುಳ್ಳುಗುಡ್ಡೆ ನಿವಾಸಿ ಆರೀಫ್ (37) ಕೊಲೆಯತ್ನ ಪ್ರಕರಣದ ಐವರು ಆರೋಪಿಗಳನ್ನು ಉಳ್ಳಾಲ ಪೊಲೀಸರು ಬಂಧಿಸಿದ್ದಾರೆ.
ಉಳ್ಳಾಲ ಮೇಲಂಗಡಿ ನಿವಾಸಿ ಅಬ್ದುಲ್ ಕರೀಂ(46), ಪೈಝಲ್ನಗರ ನಿವಾಸಿಗಳಾದ ಪುಚ್ಚ ನಿಶಾಕ್(25), ಮೊಹಮ್ಮದ್ ಅಶ್ಪಾಕ್(26), ಕಾಟಿಪಳ್ಳ ನಿವಾಸಿ ಉಮ್ಮರ್ ಫಾರೂಕ್(25), ಮಾರ್ನಮಿಕಟ್ಟೆ ನಿವಾಸಿ ರಿಫಾತ್ (27) ಬಂಧಿತ ಆರೋಪಿಗಳು. ರೌಡಿಶೀಟರ್ ಆರೀಫ್ ಮತ್ತು ಅಬ್ದುಲ್ ಕರೀಂ ಜತೆಯಾಗಿ ವ್ಯವಹಾರ ಮಾಡುತ್ತಿದ್ದು, ಕರೀಂ ಎಂಬಾತ ಆರೀಫ್ ನಿಂದ ಸಾಲ ಪಡೆದುಕೊಂಡಿದ್ದ ಎನ್ನಲಾಗಿದೆ.


ಕೆಲವು ದಿನಗಳ ಹಿಂದೆ ಆರೀಫ್ ಸಾಲ ನೀಡಿದ ಹಣ ವಾಪಸ್ ನೀಡುವಂತೆ ಕರೀಂನಲ್ಲಿ ಕೇಳಿದ್ದ. ಈ ವಿಚಾರವನ್ನು ಕರೀಂ ನೌಫಾಲ್ ಬಳಿ ತಿಳಿಸಿದ್ದ ಎನ್ನಲಾಗಿದೆ. ನೌಫಾಲ್ ಆರೀಫ್ಗೆ ಕರೆ ಮಾಡಿ ಎಲ್ಲಾ ಹಣ ವಾಪಸ್ ನೀಡಲು ಸಾಧ್ಯವಿಲ್ಲ ಎಂದು ತಿಳಿಸಿದ್ದ. ಇದೇ ವಿಚಾರದಲ್ಲಿ ಅವರ ಮಧ್ಯೆ ಸಂಘರ್ಷ ನಡೆದಿದ್ದು, ನೌಫಾಲ್ ತನ್ನ ಸ್ನೇಹಿತರಾದ ನಿಶಾಕ್, ಅಶ್ಪಾಕ್, ಫಾರೂಕ್ ಮತ್ತು ರಿಫಾತ್ ಗೆ ಕೊಲೆ ಮಾಡಲು ಸುಫಾರಿ ನೀಡಿದ್ದ ಎಂಬುದು ತನಿಖೆಯ ವೇಳೆ ತಿಳಿದುಬಂದಿದೆ.

ಮಂಗಳವಾರ ನಸುಕಿನ ಜಾವ ಆರೋಪಿಗಳು ಆರೀಫ್ ನನ್ನು ಉಚ್ಚಿಲ ಬಳಿ ತಡೆದು ನಿಲ್ಲಿಸಿ ಮಚ್ಚಿನಿಂದ ದಾಳಿ ನಡೆಸಿ ಕೊಲೆಯತ್ನ ನಡೆಸಿದ್ದರು. ಗಂಭೀರ ಗಾಯಗೊಂಡ ಆರೀಫ್ ಆರೋಪಿಗಳ ಕೈಯಿಂದ ತಪ್ಪಿಸಿಕೊಂಡಿದ್ದು, ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ದಾಖಲಾಗಿದ್ದರು. ಬಂಧಿತ ಆರೋಪಿಗಳನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ನ್ಯಾಯಾಂಗ ಬಂಧನ ವಿಧಿಸಲಾಗಿದೆ. ತಲೆಮರೆಸಿಕೊಂಡಿರುವ ಆರೋಪಿಗಳಾದ ನೌಫಾಲ್ , ತಲ್ಹತ್ ಬಂಧನಕ್ಕೆ ಶೋಧ ಮುಂದುವರಿದಿದೆ.
ಉಳ್ಳಾಲ ; ಹಳೇ ದ್ವೇಷ ತೀರಿಸಲು ರೌಡಿಗೆ ಇರಿದು ಕೊಲೆಯತ್ನ, ನಾಲ್ವರು ದುಷ್ಕರ್ಮಿಗಳಿಂದ ಕುಕೃತ್ಯ
Rowdy stabbed at Ullal, five arrested by Ullal police in Mangalore. Arif was stabbed by miscreants over old revenge near Uchila. The search for another accused is on.
01-05-26 08:33 pm
HK News Staffer
ರಾಜ್ಯದಲ್ಲಿ ಸದ್ಯಕ್ಕೆ ಸಿಎಂ ಬದಲಾವಣೆ ಇಲ್ಲ, ನಾನು ಸ...
30-04-26 08:16 pm
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
ಸದ್ಯಕ್ಕಿಲ್ಲ ಡಿಕೆಶಿಗೆ ಸಿಎಂ ಭಾಗ್ಯ ; ರಾಜ್ಯಸಭೆ- ಏ...
29-04-26 10:36 am
ನಾಯಕತ್ವ ಬದಲಾವಣೆ ಮಾತೇ ಇಲ್ಲ, ಮೇ 20ರೊಳಗೆ ಸಂಪುಟ ವ...
26-04-26 08:05 pm
29-04-26 11:18 pm
HK News Staffer
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:54 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:53 pm
29-04-26 11:05 pm
HK News Staffer
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
ನೂತನ ಮನೆಯ ಔತಣಕೂಟ ದಿನವೇ ಮೃತಪಟ್ಟ ಯಜಮಾನ ; ಬಂಟ್ವಾ...
28-04-26 01:26 pm
ಮಂಗಳೂರು- ಬೆಂಗಳೂರು ರೈಲಿನಲ್ಲಿ ಮಗುವಿಗೆ ಜನ್ಮವಿತ್ತ...
27-04-26 10:29 am
01-05-26 09:24 pm
HK News Staffer
ಸಹೋದ್ಯೋಗಿ ಮೇಲೆ ಆಸಿಡ್ ದಾಳಿ ; ಕೇರಳ ಮೂಲದ ವ್ಯಕ್...
01-05-26 07:18 pm
Rakesh Gladson Dsouza: ಮಂಗಳೂರಿನ ಯುವ ಉದ್ಯಮಿ ರಾ...
01-05-26 06:36 pm
ಮಕ್ಕಳ ಆಯೋಗ ಸಮಿತಿ ಸದಸ್ಯನಿಂದಲೇ ಹಲವು ಮಹಿಳೆಯರಿಗೆ...
01-05-26 01:45 pm
ಬೆಂಗಳೂರಿನ ಜ್ಯುವೆಲ್ಲರಿ ಶಾಪ್ ಗೋಡೆ ಕೊರೆದು ಕೋಟ್ಯಂ...
01-05-26 11:48 am