ಬ್ರೇಕಿಂಗ್ ನ್ಯೂಸ್
01-06-22 12:07 pm HK News Desk ಕ್ರೈಂ
ತಿರುಚ್ಚಿ, ಜೂ 1: ತಮಿಳುನಾಡಿನ ತಿರುಚ್ಚಿಯಲ್ಲಿ 16 ವರ್ಷದ ಬಾಲಕಿಯೊಬ್ಬಳು ತನ್ನ ಪ್ರೀತಿಯನ್ನು ಒಪ್ಪಿಕೊಳ್ಳಲು ನಿರಾಕರಿಸಿದ್ದಕ್ಕಾಗಿ 22 ವರ್ಷದ ಯುವಕ ಆಕೆಯನ್ನು 14 ಬಾರಿ ಇರಿದು ಪರಾರಿಯಾಗಿದ್ದ.
ಆರೋಪಿ ವ್ಯಕ್ತಿಯನ್ನು ಕೇಶವನ್ ಎಂದು ಗುರುತಿಸಲಾಗಿದ್ದು, ಪೊಲೀಸರು ಆತನನ್ನು ಹುಡುಕುತ್ತಿದ್ದಾಗ ಆತನೂ ಕೂಡ ಶವವಾಗಿ ಪತ್ತೆಯಾಗಿದ್ದಾನೆ.
ತಿರುಚ್ಚಿಯ ಅತಿಕುಲಂ ನಿವಾಸಿಯಾಗಿರುವ ಬಾಲಕಿ 11ನೇ ತರಗತಿಯಲ್ಲಿ ಓದುತ್ತಿದ್ದಳು. ಪರೀಕ್ಷೆ ಮುಗಿಸಿ ಸಂತ್ರಸ್ತೆ ತನ್ನ ಸಂಬಂಧಿಯನ್ನು ಭೇಟಿಯಾಗಲು ತೆರಳುತ್ತಿದ್ದಾಗ ಆರೋಪಿ ಕೇಶವನ್ ರೈಲ್ವೇ ಮೇಲ್ಸೇತುವೆ ಬಳಿ ಆಕೆಯನ್ನು ತಡೆಗಟ್ಟಿ ತನ್ನ ಪ್ರೀತಿ ಒಪ್ಪಿಕೊಳ್ಳುವುದಕ್ಕಾಗಿ ಪೀಡಿಸಿದ್ದಾನೆ.
ಜೂನ್ 2021ರಲ್ಲಿ ಇದೇ ಹುಡುಗಿಯನ್ನು ಅಪಹರಿಸಿದ್ದಕ್ಕಾಗಿ ಕೇಶವನ್ ಮೇಲೆ ಈಗಾಗಲೇ ಪೋಕ್ಸೊ ಅಡಿಯಲ್ಲಿ ಪ್ರಕರಣ ದಾಖಲಿಸಿ ಆತನನ್ನು ಬಂಧಿಸಲಾಗಿತ್ತು ಎಂದು ಸಂತ್ರಸ್ತೆಯ ಸಂಬಂಧಿಯೊಬ್ಬರು ತಿಳಿಸಿದ್ದಾರೆ.

ಬಾಲಕಿಗೆ 14 ಬಾರಿ ಇರಿದ ಕೇಶವನ್ ;
ಚೂರಿ ಇರಿತದ ದಿನ ತಾನು ಆಕೆಯನ್ನು ಪ್ರೀತಿಸುತ್ತಿದ್ದೇನೆ ಎಂದು ಹೇಳಿಕೊಂಡಿದ್ದ ಕೇಶವನ್ ಬಾಲಕಿ ಆತನ ಪ್ರೀತಿ ನಿರಾಕರಿಸಿದಾಗ ಚಾಕುವಿನಿಂದ ಇರಿದಿದ್ದಾನೆ. ಜೊತೆಗೆ ಬಾಲಕಿ ಸಹಾಯಕ್ಕಾಗಿ ಕೂಗುವಾಗ ಕೇಶವನ್ ಆಕೆಗೆ 14 ಬಾರಿ ಇರಿದಿದ್ದಾನೆ. ಬಳಿಕ ಚಾಕುವನ್ನು ಸ್ಥಳದಲ್ಲೇ ಬಿಟ್ಟು ಓಡಿ ಹೋಗಿದ್ದಾನೆ. ಬಾಲಕಿ ಕೆಳಗೆ ಬಿದ್ದಿರುವುದನ್ನು ಕಂಡ ಸ್ಥಳೀಯರು ಆಕೆಯ ದೇಹದಿಂದ ರಕ್ತ ಹರಿಯುತ್ತಿರುವುದನ್ನು ಗಮನಿಸಿದ್ದಾರೆ. ಕೂಡಲೇ ಆಕೆಯನ್ನು ಹತ್ತಿರದ ಆಸ್ಪತ್ರೆಗೆ ಸಾಗಿಸಿದ್ದಾರೆ. ಆಕೆ ಚಿಂತಾಜನಕ ಸ್ಥಿತಿಯಲ್ಲಿದ್ದು ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ವರದಿಯಾಗಿದೆ.
ಶವವಾಗಿ ಪತ್ತೆಯಾದ ಆರೋಪಿ;
ಆರೋಪಿಯನ್ನು ತಲೆಮರೆಸಿಕೊಂಡಿದ್ದು, ಆತನ ಪತ್ತೆಗೆ ಮೂರು ವಿಶೇಷ ತಂಡಗಳು ಶೋಧ ನಡೆಸುತ್ತಿದ್ದವು. ಮಂಗಳವಾರ ರಾತ್ರಿ ರೈಲ್ವೆ ಹಳಿ ಮೇಲೆ ಆರೋಪಿ ಶವವಾಗಿ ಪತ್ತೆಯಾಗಿದ್ದಾನೆ.
A 16-year-old girl in Tamil Nadu’s Trichy was stabbed 14 times by a 22-year-old man for refusing to accept his love. The man was identified as Kesavan and police are hunting him.
27-06-26 08:31 pm
HK News Staffer
ಅಂಬಾನಿ ಕೊಟ್ಟ 900 ಕೋಟಿ ದೇಣಿಗೆಗೂ ಲೆಕ್ಕ ಇಲ್ಲ, ಈಗ...
27-06-26 04:21 pm
ಆರ್ಎಸ್ಎಸ್ ಗಲಿಬಿಲಿಗೊಂಡರೆ ಬಿಜೆಪಿ ಬುಸುಗುಡುತ್ತದ...
26-06-26 08:30 pm
ಬಿಡದಿಯಲ್ಲಿ ರೈತರ ವಿರುದ್ಧವಾಗಿ ಟೌನ್ಶಿಪ್ ಕಟ್ಟುವ...
26-06-26 05:10 pm
ಇಷ್ಟೆಲ್ಲಾ ಅಲ್ಲೋಲ ಕಲ್ಲೋಲಕ್ಕೆ ಶೋಭಾ ಕರಂದ್ಲಾಜೆ ನೇ...
25-06-26 09:10 pm
27-06-26 09:10 pm
HK News Staffer
40 ಸೆಕೆಂಡ್ ನಲ್ಲಿ ಎರಡು ಬಾರಿ ಭೂಕಂಪ ; ತತ್ತರಿಸಿ ಹ...
25-06-26 12:13 pm
ಕೂಲ್ ಸಿಟಿ ಯುರೋಪಿನಲ್ಲೀಗ ಬಿಸಿಲ ಹೊಡೆತ ; ಫ್ರಾನ್ಸ್...
24-06-26 01:51 pm
ಮಾಹಿತಿ ಹಕ್ಕು ನಿಯಮಗಳಿಗೆ ಮಹಾರಾಷ್ಟ್ರ ಸರ್ಕಾರ ತಿದ್...
23-06-26 10:47 pm
ಟಿಎಂಸಿಯಲ್ಲಿ ರಾಜಕೀಯ ಭೂಕಂಪ ; ಮಮತಾ ಬ್ಯಾನರ್ಜಿ ಅಧ...
23-06-26 12:21 pm
27-06-26 02:44 pm
HK News Staffer
Rss ಸಂಘಟನೆಯನ್ನು ರಿಜಿಸ್ಟರ್ ಮಾಡಿದ್ರೆ ಒಳ್ಳೇದು ;...
26-06-26 09:42 pm
ಸಾಂಪ್ರದಾಯಿಕ ಕನ್ನಡ ಎಂಎ ಪದವಿಗೆ ಆಧುನಿಕ ಟಚ್; ಸಂತ...
26-06-26 08:33 pm
ಡಿಕೆಶಿ ಜೊತೆ ಯಾವುದೇ ವ್ಯಾವಹಾರಿಕ ಸಂಬಂಧವಿಲ್ಲ, ಅಪಪ...
26-06-26 02:14 pm
ಮಂಗಳೂರು, ಮೈಸೂರು ಸೇರಿ ರಾಜ್ಯದ 10 ನಗರಗಳಿಗೆ ಇಲೆಕ್...
25-06-26 10:56 pm
27-06-26 08:01 pm
HK News Staffer
ಬೆಂಗಳೂರಿನಿಂದ ಪ್ರಿಯತಮೆಯ ಅಪಹರಣ ; ಅಂಕೋಲಾಕ್ಕೆ ಹೋಗ...
27-06-26 04:23 pm
ಬೆಂಗಳೂರಿನಲ್ಲಿ ಅಕ್ರಮ ಹಣದ ಭಾರಿ ಬೇಟೆ ; ಕುರುಬರಹಳ್...
27-06-26 04:19 pm
ಮಂತ್ರಾಲಯ ಯಾತ್ರೆ ಮಧ್ಯೆ ಯಮನಂತೆ ನುಗ್ಗಿದ ಲಾರಿ! ಡಿ...
27-06-26 11:46 am
Mangalore, Police, criminial escapes: ಪಾಂಡೇಶ್...
27-06-26 10:54 am