ಬ್ರೇಕಿಂಗ್ ನ್ಯೂಸ್
02-06-22 10:27 pm Mangalore Correspondent ಕ್ರೈಂ
ಮಂಗಳೂರು, ಜೂನ್ 2: ಅರಣ್ಯ ಅಧಿಕಾರಿಗಳ ಮಹತ್ವದ ಕಾರ್ಯಾಚರಣೆ ಒಂದರಲ್ಲಿ ಆಂಧ್ರ ಪ್ರದೇಶ ಮೂಲದ ಈಚರ್ ಲಾರಿಯಲ್ಲಿ ಸಾಗಿಸುತ್ತಿದ್ದ ಭಾರೀ ಪ್ರಮಾಣದ ರಕ್ತಚಂದನ ಮರದ ದಿಮ್ಮಿಗಳನ್ನು ಕಿನ್ನಿಗೋಳಿ ಸಮೀಪದ ಕಿಲ್ಪಾಡಿ ಎಂಬಲ್ಲಿ ವಶಕ್ಕೆ ಪಡೆಯಲಾಗಿದ್ದು ಏಳು ಮಂದಿಯನ್ನು ಬಂಧಿಸಲಾಗಿದೆ.
ಆಂಧ್ರಪ್ರದೇಶ ರಿಜಿಸ್ಟರ್ ಸಂಖ್ಯೆ ಹೊಂದಿರುವ ಈಚರ್ ಲಾರಿಯಲ್ಲಿ ಬರೋಬ್ಬರಿ 8308 ಕೇಜಿ ತೂಕದ ರಕ್ತಚಂದನ ಮರದ ದಿಮ್ಮಿಗಳನ್ನು ಹುಲ್ಲಿನ ಚೀಲದಲ್ಲಿ ಮುಚ್ಚಿ ಸಾಗಿಸಲಾಗುತ್ತಿತ್ತು. ಅದಕ್ಕೆ ಬೆಂಗಾವಲಾಗಿದ್ದ ತಮಿಳುನಾಡು ರಿಜಿಸ್ಟರ್ ಸಂಖ್ಯೆ ಹೊಂದಿದ್ದ ಮಹೀಂದ್ರಾ ಮೊರಾಜೊ ವಾಹನವನ್ನೂ ವಶಕ್ಕೆ ಪಡೆಯಲಾಗಿದ್ದು, ಎರಡೂ ವಾಹನದಲ್ಲಿದ್ದ ಒಟ್ಟು ಏಳು ಮಂದಿಯನ್ನು ಬಂಧಿಸಲಾಗಿದೆ. ವಶಕ್ಕೆ ಪಡೆದ ರಕ್ತಚಂದನದ ಮೌಲ್ಯ 4.15 ಕೋಟಿ ಆಗಿರುತ್ತದೆ.
ಬಂಧಿತರನ್ನು ಆಲಾಡಿ ರಾಜೇಶ್ ರೆಡ್ಡಿ, ಅನಿಲ್ ಕುಮಾರ್, ಪಾಲ್ ರಾಜ್, ದಿನೇಶ್ ಕುಮಾರ್, ಕುಂಞ ಮಹಮದ್, ಅನಿಲ್ ಕುಮಾರ್, ಶಮೀರ್ ಎಸ್. ಎಂದು ಗುರುತಿಸಲಾಗಿದ್ದು ಒಬ್ಬ ಆರೋಪಿ ಕಾರ್ಯಾಚರಣೆ ಸಂದರ್ಭದಲ್ಲಿ ಪರಾರಿಯಾಗಿದ್ದಾನೆ. ಅರಣ್ಯ ಸಂಚಾರಿ ಅಧಿಕಾರಿಗಳು ಖಚಿತ ಮಾಹಿತಿ ಮೇರೆಗೆ ಕಾರ್ಯಾಚರಣೆ ನಡೆಸಿದ್ದು, ಜೂನ್ 1ರಂದು ಕಿಲ್ಪಾಡಿ ಮೂಲಕ ಕೆಂಚನಕೆರೆ ಎಂಬಲ್ಲಿಂದ ಲಾರಿ ಬರುತ್ತಿದ್ದಾಗ ಅಡ್ಡಹಾಕಿದ್ದಾರೆ. ಮರದ ದಿಮ್ಮಿಯನ್ನು ಆಂಧ್ರಪ್ರದೇಶದಿಂದ ಮಂಗಳೂರಿಗೆ ತರಲಾಗುತ್ತಿತ್ತು ಎನ್ನುವ ಮಾಹಿತಿ ಇದೆ. ಅರಣ್ಯಾಧಿಕಾರಿಗಳ ಅಪರೂಪದ ಕಾರ್ಯಾಚರಣೆ ಬಗ್ಗೆ ಮೇಲಧಿಕಾರಿಗಳು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.
Officials of the forest department have arrested seven people while illegally transporting the red sanders worth Rs 4.15 crore in Kenchana Kere of Kilpadi village of Mangaluru taluk. Officials seized 315 logs of red sanders from the possession of the accused on June 1 at 6 pm.
12-09-26 09:40 pm
HK News Staffer
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
14-09-26 10:01 pm
HK News Staffer
ಮಂಗಳೂರಿನಲ್ಲಿ ಎರಡು ದಿನ ಸಿಎಂ ಡಿಕೆಶಿ ವಾಸ್ತವ್ಯ ;...
14-09-26 06:02 pm
100 ವರ್ಷಗಳ ಬಳಿಕವೂ ಸ್ವಂತ ಸೂರಿಗಾಗಿ ಕರಾವಳಿಯಲ್ಲಿ...
14-09-26 05:00 pm
Konkan Catholic Credit Society Inaugurated in...
14-09-26 04:18 pm
Konkan Catholic Credit Society Mangalore: ಹಣಕ...
13-09-26 10:11 pm
12-09-26 07:41 pm
HK News Staffer
ಕ್ರಿಪ್ಟೊ ಕರೆನ್ಸಿ ಹೆಸ್ರಲ್ಲಿ ಡಾಕ್ಟರ್ ಗೆ ಮಹಿಳೆಯಿ...
11-09-26 06:38 pm
ಜಾಮೀನು ಪಡೆಯಲು ನಕಲಿ ಆಧಾರ್ ಕಾರ್ಡ್ ಹಾಜರು ; ಉಡು...
11-09-26 01:09 pm
ಬೈಕ್ಗೆ ಡಿಕ್ಕಿ ಹೊಡೆದ ಕಾರು ; ಚಾಮರಾಜನಗರದಲ್ಲಿ ಮೂ...
11-09-26 10:14 am
ಕುಂದಾಪುರದಲ್ಲಿ 8 ಶಾಲಾ ಮಕ್ಕಳ ಬಲಿ ಪಡೆದ ಭೀಕರ ಅಪಘಾ...
10-09-26 08:16 pm