ಬ್ರೇಕಿಂಗ್ ನ್ಯೂಸ್
02-06-22 10:27 pm Mangalore Correspondent ಕ್ರೈಂ
ಮಂಗಳೂರು, ಜೂನ್ 2: ಅರಣ್ಯ ಅಧಿಕಾರಿಗಳ ಮಹತ್ವದ ಕಾರ್ಯಾಚರಣೆ ಒಂದರಲ್ಲಿ ಆಂಧ್ರ ಪ್ರದೇಶ ಮೂಲದ ಈಚರ್ ಲಾರಿಯಲ್ಲಿ ಸಾಗಿಸುತ್ತಿದ್ದ ಭಾರೀ ಪ್ರಮಾಣದ ರಕ್ತಚಂದನ ಮರದ ದಿಮ್ಮಿಗಳನ್ನು ಕಿನ್ನಿಗೋಳಿ ಸಮೀಪದ ಕಿಲ್ಪಾಡಿ ಎಂಬಲ್ಲಿ ವಶಕ್ಕೆ ಪಡೆಯಲಾಗಿದ್ದು ಏಳು ಮಂದಿಯನ್ನು ಬಂಧಿಸಲಾಗಿದೆ.
ಆಂಧ್ರಪ್ರದೇಶ ರಿಜಿಸ್ಟರ್ ಸಂಖ್ಯೆ ಹೊಂದಿರುವ ಈಚರ್ ಲಾರಿಯಲ್ಲಿ ಬರೋಬ್ಬರಿ 8308 ಕೇಜಿ ತೂಕದ ರಕ್ತಚಂದನ ಮರದ ದಿಮ್ಮಿಗಳನ್ನು ಹುಲ್ಲಿನ ಚೀಲದಲ್ಲಿ ಮುಚ್ಚಿ ಸಾಗಿಸಲಾಗುತ್ತಿತ್ತು. ಅದಕ್ಕೆ ಬೆಂಗಾವಲಾಗಿದ್ದ ತಮಿಳುನಾಡು ರಿಜಿಸ್ಟರ್ ಸಂಖ್ಯೆ ಹೊಂದಿದ್ದ ಮಹೀಂದ್ರಾ ಮೊರಾಜೊ ವಾಹನವನ್ನೂ ವಶಕ್ಕೆ ಪಡೆಯಲಾಗಿದ್ದು, ಎರಡೂ ವಾಹನದಲ್ಲಿದ್ದ ಒಟ್ಟು ಏಳು ಮಂದಿಯನ್ನು ಬಂಧಿಸಲಾಗಿದೆ. ವಶಕ್ಕೆ ಪಡೆದ ರಕ್ತಚಂದನದ ಮೌಲ್ಯ 4.15 ಕೋಟಿ ಆಗಿರುತ್ತದೆ.
ಬಂಧಿತರನ್ನು ಆಲಾಡಿ ರಾಜೇಶ್ ರೆಡ್ಡಿ, ಅನಿಲ್ ಕುಮಾರ್, ಪಾಲ್ ರಾಜ್, ದಿನೇಶ್ ಕುಮಾರ್, ಕುಂಞ ಮಹಮದ್, ಅನಿಲ್ ಕುಮಾರ್, ಶಮೀರ್ ಎಸ್. ಎಂದು ಗುರುತಿಸಲಾಗಿದ್ದು ಒಬ್ಬ ಆರೋಪಿ ಕಾರ್ಯಾಚರಣೆ ಸಂದರ್ಭದಲ್ಲಿ ಪರಾರಿಯಾಗಿದ್ದಾನೆ. ಅರಣ್ಯ ಸಂಚಾರಿ ಅಧಿಕಾರಿಗಳು ಖಚಿತ ಮಾಹಿತಿ ಮೇರೆಗೆ ಕಾರ್ಯಾಚರಣೆ ನಡೆಸಿದ್ದು, ಜೂನ್ 1ರಂದು ಕಿಲ್ಪಾಡಿ ಮೂಲಕ ಕೆಂಚನಕೆರೆ ಎಂಬಲ್ಲಿಂದ ಲಾರಿ ಬರುತ್ತಿದ್ದಾಗ ಅಡ್ಡಹಾಕಿದ್ದಾರೆ. ಮರದ ದಿಮ್ಮಿಯನ್ನು ಆಂಧ್ರಪ್ರದೇಶದಿಂದ ಮಂಗಳೂರಿಗೆ ತರಲಾಗುತ್ತಿತ್ತು ಎನ್ನುವ ಮಾಹಿತಿ ಇದೆ. ಅರಣ್ಯಾಧಿಕಾರಿಗಳ ಅಪರೂಪದ ಕಾರ್ಯಾಚರಣೆ ಬಗ್ಗೆ ಮೇಲಧಿಕಾರಿಗಳು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.
Officials of the forest department have arrested seven people while illegally transporting the red sanders worth Rs 4.15 crore in Kenchana Kere of Kilpadi village of Mangaluru taluk. Officials seized 315 logs of red sanders from the possession of the accused on June 1 at 6 pm.
17-12-25 10:30 pm
HK News Desk
ಯಶವಂತಪುರ - ಕಾರವಾರ ಗೋಮಟೇಶ್ವರ ಎಕ್ಸ್ ಪ್ರೆಸ್ ರೈಲು...
17-12-25 12:45 pm
ಶೃಂಗೇರಿ ; ಬಿಕಾಂ ಓದುತ್ತಿದ್ದ ವಿದ್ಯಾರ್ಥಿನಿ ಹಠಾತ್...
17-12-25 12:42 pm
ಶಿವಮೊಗ್ಗ, ಧಾರವಾಡ ಸೇರಿ ಹಲವೆಡೆ ಲೋಕಾಯುಕ್ತ ದಾಳಿ ;...
16-12-25 03:08 pm
ಮಂಗಳೂರು ಬೆನ್ನಲ್ಲೇ ತುಮಕೂರು ಜಿಲ್ಲಾಧಿಕಾರಿ ಕಚೇರಿಗ...
16-12-25 12:57 pm
17-12-25 10:27 pm
HK News Desk
ಆಸ್ಟ್ರೇಲಿಯಾ ಬೋಂಡಿ ಬೀಚ್ ದಾಳಿ ; ಹೈದ್ರಾಬಾದ್ ಮೂಲದ...
17-12-25 01:38 pm
ಯುಕೆಯ ಮಿಡ್ಲಾಂಡ್ಸ್ ನಲ್ಲಿ ಕನ್ನಡ ರಾಜ್ಯೋತ್ಸವ ; ಬರ...
16-12-25 06:33 pm
ಭಟ್ಕಳ ತಹಸೀಲ್ದಾರ್ ಕಚೇರಿಗೂ ಸ್ಫೋಟದ ಬೆದರಿಕೆ ; ತಮಿ...
16-12-25 01:56 pm
ಪಾಕಿಸ್ತಾನದ ಎರಡು ವಿವಿಗಳಲ್ಲಿ ಸಂಸ್ಕೃತ ಕಲಿಯಲು ಕೋರ...
15-12-25 08:12 pm
17-12-25 08:54 pm
Mangalore Correspondent
New year 2026, Mangalore Rules: ಹೊಸ ವರ್ಷಾಚರಣೆ...
17-12-25 08:19 pm
Udupi, Baby death: ಉಡುಪಿ ; ತಾಯಿ ಕೈಯಿಂದ ಜಾರಿ ಬ...
17-12-25 05:23 pm
Mangalore Jail, Fight, Ccb Police: ಮಂಗಳೂರು ಜೈ...
17-12-25 05:05 pm
Mangalore Landslide, Death: ಗುಡ್ಡ ಕುಸಿದು ಕಾರ್...
16-12-25 10:25 pm
17-12-25 11:14 am
Bangalore Correspondent
ಕದ್ರಿಯಲ್ಲಿ ಬೈಕ್ ಕದ್ದು ಭಟ್ಕಳದಲ್ಲಿ ಮಹಿಳೆಯ ಸರ ಕಸ...
16-12-25 10:35 pm
Mangalore Crime, Robbery, Mukka: 'ಬಂಗಾರ್ ಒಲ್ಪ...
15-12-25 10:26 pm
Udupi Murder, Brahmavar, Update: ಕುಡಿದ ಮತ್ತಿನ...
15-12-25 05:37 pm
Brahmavar Murder, Udupi Crime: ಎಣ್ಣೆ ಪಾರ್ಟಿಯಲ...
15-12-25 12:19 pm