ಬ್ರೇಕಿಂಗ್ ನ್ಯೂಸ್
02-06-22 10:27 pm Mangalore Correspondent ಕ್ರೈಂ
ಮಂಗಳೂರು, ಜೂನ್ 2: ಅರಣ್ಯ ಅಧಿಕಾರಿಗಳ ಮಹತ್ವದ ಕಾರ್ಯಾಚರಣೆ ಒಂದರಲ್ಲಿ ಆಂಧ್ರ ಪ್ರದೇಶ ಮೂಲದ ಈಚರ್ ಲಾರಿಯಲ್ಲಿ ಸಾಗಿಸುತ್ತಿದ್ದ ಭಾರೀ ಪ್ರಮಾಣದ ರಕ್ತಚಂದನ ಮರದ ದಿಮ್ಮಿಗಳನ್ನು ಕಿನ್ನಿಗೋಳಿ ಸಮೀಪದ ಕಿಲ್ಪಾಡಿ ಎಂಬಲ್ಲಿ ವಶಕ್ಕೆ ಪಡೆಯಲಾಗಿದ್ದು ಏಳು ಮಂದಿಯನ್ನು ಬಂಧಿಸಲಾಗಿದೆ.
ಆಂಧ್ರಪ್ರದೇಶ ರಿಜಿಸ್ಟರ್ ಸಂಖ್ಯೆ ಹೊಂದಿರುವ ಈಚರ್ ಲಾರಿಯಲ್ಲಿ ಬರೋಬ್ಬರಿ 8308 ಕೇಜಿ ತೂಕದ ರಕ್ತಚಂದನ ಮರದ ದಿಮ್ಮಿಗಳನ್ನು ಹುಲ್ಲಿನ ಚೀಲದಲ್ಲಿ ಮುಚ್ಚಿ ಸಾಗಿಸಲಾಗುತ್ತಿತ್ತು. ಅದಕ್ಕೆ ಬೆಂಗಾವಲಾಗಿದ್ದ ತಮಿಳುನಾಡು ರಿಜಿಸ್ಟರ್ ಸಂಖ್ಯೆ ಹೊಂದಿದ್ದ ಮಹೀಂದ್ರಾ ಮೊರಾಜೊ ವಾಹನವನ್ನೂ ವಶಕ್ಕೆ ಪಡೆಯಲಾಗಿದ್ದು, ಎರಡೂ ವಾಹನದಲ್ಲಿದ್ದ ಒಟ್ಟು ಏಳು ಮಂದಿಯನ್ನು ಬಂಧಿಸಲಾಗಿದೆ. ವಶಕ್ಕೆ ಪಡೆದ ರಕ್ತಚಂದನದ ಮೌಲ್ಯ 4.15 ಕೋಟಿ ಆಗಿರುತ್ತದೆ.
ಬಂಧಿತರನ್ನು ಆಲಾಡಿ ರಾಜೇಶ್ ರೆಡ್ಡಿ, ಅನಿಲ್ ಕುಮಾರ್, ಪಾಲ್ ರಾಜ್, ದಿನೇಶ್ ಕುಮಾರ್, ಕುಂಞ ಮಹಮದ್, ಅನಿಲ್ ಕುಮಾರ್, ಶಮೀರ್ ಎಸ್. ಎಂದು ಗುರುತಿಸಲಾಗಿದ್ದು ಒಬ್ಬ ಆರೋಪಿ ಕಾರ್ಯಾಚರಣೆ ಸಂದರ್ಭದಲ್ಲಿ ಪರಾರಿಯಾಗಿದ್ದಾನೆ. ಅರಣ್ಯ ಸಂಚಾರಿ ಅಧಿಕಾರಿಗಳು ಖಚಿತ ಮಾಹಿತಿ ಮೇರೆಗೆ ಕಾರ್ಯಾಚರಣೆ ನಡೆಸಿದ್ದು, ಜೂನ್ 1ರಂದು ಕಿಲ್ಪಾಡಿ ಮೂಲಕ ಕೆಂಚನಕೆರೆ ಎಂಬಲ್ಲಿಂದ ಲಾರಿ ಬರುತ್ತಿದ್ದಾಗ ಅಡ್ಡಹಾಕಿದ್ದಾರೆ. ಮರದ ದಿಮ್ಮಿಯನ್ನು ಆಂಧ್ರಪ್ರದೇಶದಿಂದ ಮಂಗಳೂರಿಗೆ ತರಲಾಗುತ್ತಿತ್ತು ಎನ್ನುವ ಮಾಹಿತಿ ಇದೆ. ಅರಣ್ಯಾಧಿಕಾರಿಗಳ ಅಪರೂಪದ ಕಾರ್ಯಾಚರಣೆ ಬಗ್ಗೆ ಮೇಲಧಿಕಾರಿಗಳು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.
Officials of the forest department have arrested seven people while illegally transporting the red sanders worth Rs 4.15 crore in Kenchana Kere of Kilpadi village of Mangaluru taluk. Officials seized 315 logs of red sanders from the possession of the accused on June 1 at 6 pm.
14-05-25 05:16 pm
Bangalore Correspondent
Hassan Kidnap: ಅಪ್ಪನ ಎದುರೇ ಮಗಳ ಅಪಹರಣ ; ಬೇಲೂರಿ...
13-05-25 09:50 pm
Davangere Accident, police constable death: ಲ...
13-05-25 09:37 pm
ಅರ್ಧದಲ್ಲಿ ಕದನ ನಿಲ್ಲಿಸಿದ್ದು ಯಾಕೆ? ಇಷ್ಟಕ್ಕೆ ನಮ್...
13-05-25 01:14 pm
Dr Subbanna Ayyappan Dead, Mandya: ಪದ್ಮಶ್ರೀ ಪ...
11-05-25 01:21 pm
14-05-25 11:08 pm
HK News Desk
Masood Azhar; ಐಎಂಎಫ್ ಸಾಲದ ಹಣವನ್ನೂ ಉಗ್ರರಿಗೆ ಹಂ...
14-05-25 11:08 pm
ಪಾಕ್ ವಶದಲ್ಲಿದ್ದ ಬಿಎಸ್ಎಫ್ ಯೋಧ ಕೊನೆಗೂ ಬಿಡುಗಡೆ ;...
14-05-25 07:33 pm
ಆಪರೇಷನ್ ಸಿಂಧೂರ ಬಗ್ಗೆ ಹೇಳಿಕೆ, ದೇಶವಿರೋಧಿ ಪೋಸ್ಟ್...
14-05-25 04:45 pm
ಆದಂಪುರ ವಾಯುನೆಲೆ ಧ್ವಂಸ ಮಾಡಿದ್ದೇವೆಂದ ಪಾಕಿಗಳಿಗೆ...
13-05-25 08:47 pm
14-05-25 08:05 pm
Mangalore Correspondent
Lokayuta, Arrest, Bantwal, Mangalore: ಗಂಡನ ಪಿ...
14-05-25 06:33 pm
Harish Injadi, President of Kukke Subrahmanya...
14-05-25 01:42 pm
Agumbe, Accident, Yakshagana: ಆಗುಂಬೆ ; ಭಾರೀ ಮ...
14-05-25 01:28 pm
ಪ್ರಧಾನಿ ಮೋದಿ ಆದಂಪುರ ವಾಯುನೆಲೆಗೆ ದಿಢೀರ್ ಭೇಟಿ ;...
13-05-25 10:33 pm
14-05-25 10:22 pm
HK News Desk
Suhas Shetty Murder, Arrest, CCB Police: ಸುಹಾ...
14-05-25 09:23 pm
Hubballi Schoolboy Murder, Crime, Minor: ಹುಬ್...
13-05-25 07:55 pm
Abdul Rauf Azhar; ಕಂದಹಾರ್ ವಿಮಾನ ಹೈಜಾಕ್ ಮಾಸ್ಟರ...
08-05-25 05:32 pm
Mangalore Suhas Shetty Murder, Eight Arrested...
03-05-25 02:16 pm