ಬ್ರೇಕಿಂಗ್ ನ್ಯೂಸ್
03-06-22 12:36 pm Mangalore Correspondent ಕ್ರೈಂ
ಬೆಳ್ತಂಗಡಿ, ಜೂನ್ 2: ಧರ್ಮಸ್ಥಳ ಬಳಿಯ ಸೌತಡ್ಕ ದೇವಸ್ಥಾನಕ್ಕೆ ದರ್ಶನಕ್ಕೆ ಬಂದಿದ್ದ ಮಹಿಳೆಯ ಕೈಯಲ್ಲಿದ್ದ ಬ್ಯಾಗಿನಿಂದ ಚಿನ್ನಾಭರಣ ಕಳವುಗೈದು ಪರಾರಿಯಾಗಿದ್ದ ಮಹಿಳೆಯನ್ನು ಧರ್ಮಸ್ಥಳ ಠಾಣೆ ಪೊಲೀಸರು ಬಂಧಿಸಿದ್ದಾರೆ.
ಬೆಳ್ತಂಗಡಿ ಮೂಲದ ಮುಂಬೈನಲ್ಲಿ ನೆಲೆಸಿರುವ ಬಾಲಚಂದ್ರ ಡಿ. ಎಂಬವರು ಕಳೆದ ಎಪ್ರಿಲ್ 22ರಂದು ಪತ್ನಿಯೊಂದಿಗೆ ಸೌತಡ್ಕ ದೇವಸ್ಥಾನಕ್ಕೆ ಆಗಮಿಸಿದ್ದರು. ದೇವರ ದರ್ಶನದ ವೇಳೆ ಪತ್ನಿ ಸರತಿ ಸಾಲಿನಲ್ಲಿ ನಿಂತಿದ್ದರು. ಈ ವೇಳೆ, ಯಾರೋ ಹಿಂದೆ ನಿಂತಿದ್ದವರು ಬ್ಯಾಗನ್ನು ಓಪನ್ ಮಾಡಿ ಅದರಲ್ಲಿದ್ದ ಚಿನ್ನದ ಆಭರಣವನ್ನು ಕಳವು ಮಾಡಿದ್ದರು. ಈ ಬಗ್ಗೆ ಬಾಲಚಂದ್ರ ಧರ್ಮಸ್ಥಳ ಠಾಣೆಯಲ್ಲಿ ದೂರು ನೀಡಿದ್ದರು.
ಪೊಲೀಸರು ತನಿಖೆ ನಡೆಸಿ ಆರೋಪಿ ಗದಗ ಜಿಲ್ಲೆಯ ಬೆಟಗೇರಿ ತಾಲೂಕಿನ ಭೀಮವ್ವ ಅಲಿಯಾಸ್ ನಾಗಮ್ಮ (63) ಎಂಬ ಮಹಿಳೆಯನ್ನು ಬಂಧಿಸಿದ್ದಾರೆ. ಕಳವುಗೈದು ತನ್ನ ಊರಿಗೆ ತೆರಳಿ ನೆಲೆಸಿದ್ದ ಮಹಿಳೆಯನ್ನು ಬಂಧಿಸಿ ಕರೆತರಲಾಗಿದೆ. ಆಕೆಯ ಬಳಿಯಿಂದ ಒಂದು ವಜ್ರದ ನೆಕ್ಲೆಸ್, ಎರಡು ಉಂಗುರ, ಕಿವಿಯೋಲೆ ಎರಡು ಜತೆ ಸೇರಿದಂತೆ ಒಟ್ಟು 3 ಲಕ್ಷ ಮೌಲ್ಯದ ಆಭರಣಗಳನ್ನು ವಶಕ್ಕೆ ಪಡೆಯಲಾಗಿದೆ. ಆರೋಪಿ ಮಹಿಳೆ ಭೀಮವ್ವ ಯಾತ್ರಾಸ್ಥಳಗಳಿಂದ ಕಳವುಗೈಯುವ ಪ್ರವೃತ್ತಿಯವಳಾಗಿದ್ದು, ಮುರುಡೇಶ್ವರ, ಭಟ್ಕಳ, ಸುಬ್ರಹ್ಮಣ್ಯ ಮುಂತಾದ ಕಡೆ ಕಳವುಗೈದ ಬಗ್ಗೆ ಕೇಸುಗಳಿವೆ. ಆರೋಪಿಯನ್ನು ಪಿಎಸ್ಐ ಕೃಷ್ಣಕಾಂತ್ ಪಾಟೀಲ್ ನೇತೃತ್ವದ ಪೊಲೀಸರು ಬಂಧಿಸಿದ್ದಾರೆ.
A Belthangady-based Mumbai resident Balachandra D accompanied by his family had visited Ganapathi temple, Kokkada village here to worship the deity. They were standing in the line to receive Theertha prasada. Meanwhile, someone had stolen their purse containing the jewellery of his wife, after opening the zip of her bag. A case under registration No. 30/2022 under IPC section 379 about the theft was registered at Dharmasthala police station on the basis of complaint on April 20 this year.
25-06-25 02:56 pm
Bangalore Correspondent
Assault Case, Anant Kumar Hegde, Accident: ಹಲ...
25-06-25 01:09 pm
Bangalore, Reels, Death: 12 ವರ್ಷದ ಪ್ರೀತಿ ಜಗಳದ...
24-06-25 10:42 pm
Chikkamagaluru Student Suicide, Uniform: ಚಿಕ್...
24-06-25 10:15 pm
Tumakuru Suicide, Instagram Reels: ರೀಲ್ಸ್ ವಿಚ...
24-06-25 08:16 pm
25-06-25 11:10 am
HK News Desk
ಇರಾನ್ –ಇಸ್ರೇಲ್ ಕದನ ವಿರಾಮ ಘೋಷಿಸಿದ ಡೊನಾಲ್ಡ್ ಟ್ರ...
24-06-25 12:03 pm
ಅಮೆರಿಕದ ಮೇಲೆ ತಿರುಗಿಬಿದ್ದ ಇರಾನ್ ! ಕತಾರ್ನಲ್ಲಿರ...
24-06-25 01:02 am
NEET ಪರೀಕ್ಷೆಯಲ್ಲಿ ಮಗಳಿಗೆ ಕಡಿಮೆ ಅಂಕ ; ಕೂಲಿನಿಂದ...
23-06-25 08:54 pm
Rapper Tommy Genesis, Controversy: ಹಿಂದು ದೇವತ...
23-06-25 04:37 pm
24-06-25 09:49 pm
Mangalore Correspondent
Mangalore, College Student Suicide: ಕಲಿಕೆಯಲ್ಲ...
24-06-25 01:36 pm
Iran Qatar, War, Mangalore Flight: ಗಲ್ಫ್ ರಾಷ್...
24-06-25 11:19 am
Zakariya Jokatte, Mangalore: ಮಂಗಳೂರಿನಲ್ಲಿ ಸ್ಕ...
23-06-25 11:01 pm
Udupi BJP, Kishore Kumar: ಉಡುಪಿ ಬಿಜೆಪಿಯಲ್ಲಿ ಬ...
23-06-25 10:28 pm
25-06-25 04:06 pm
HK News Desk
ಸ್ನೇಹಿತನಿಂದ 8 ಲಕ್ಷ ರೂ. ಸಾಲ ; ಕೊಟ್ಟ ಸಾಲ ತೀರಿಸಲ...
24-06-25 09:51 pm
Bangalore Chit Fund Scam, 10 Crore: ಚೀಟಿ ಹೆಸ್...
24-06-25 07:39 pm
Davanagere Rape: ಮನೆಯ ಮುಂದೆ ಆಟವಾಡುತ್ತಿದ್ದ 7 ವ...
23-06-25 08:51 pm
Manipal, Udupi Murder: ಮಣಿಪಾಲ ; ಹೆತ್ತ ತಾಯಿಯನ್...
23-06-25 11:47 am