ಬ್ರೇಕಿಂಗ್ ನ್ಯೂಸ್
03-06-22 12:36 pm Mangalore Correspondent ಕ್ರೈಂ
ಬೆಳ್ತಂಗಡಿ, ಜೂನ್ 2: ಧರ್ಮಸ್ಥಳ ಬಳಿಯ ಸೌತಡ್ಕ ದೇವಸ್ಥಾನಕ್ಕೆ ದರ್ಶನಕ್ಕೆ ಬಂದಿದ್ದ ಮಹಿಳೆಯ ಕೈಯಲ್ಲಿದ್ದ ಬ್ಯಾಗಿನಿಂದ ಚಿನ್ನಾಭರಣ ಕಳವುಗೈದು ಪರಾರಿಯಾಗಿದ್ದ ಮಹಿಳೆಯನ್ನು ಧರ್ಮಸ್ಥಳ ಠಾಣೆ ಪೊಲೀಸರು ಬಂಧಿಸಿದ್ದಾರೆ.
ಬೆಳ್ತಂಗಡಿ ಮೂಲದ ಮುಂಬೈನಲ್ಲಿ ನೆಲೆಸಿರುವ ಬಾಲಚಂದ್ರ ಡಿ. ಎಂಬವರು ಕಳೆದ ಎಪ್ರಿಲ್ 22ರಂದು ಪತ್ನಿಯೊಂದಿಗೆ ಸೌತಡ್ಕ ದೇವಸ್ಥಾನಕ್ಕೆ ಆಗಮಿಸಿದ್ದರು. ದೇವರ ದರ್ಶನದ ವೇಳೆ ಪತ್ನಿ ಸರತಿ ಸಾಲಿನಲ್ಲಿ ನಿಂತಿದ್ದರು. ಈ ವೇಳೆ, ಯಾರೋ ಹಿಂದೆ ನಿಂತಿದ್ದವರು ಬ್ಯಾಗನ್ನು ಓಪನ್ ಮಾಡಿ ಅದರಲ್ಲಿದ್ದ ಚಿನ್ನದ ಆಭರಣವನ್ನು ಕಳವು ಮಾಡಿದ್ದರು. ಈ ಬಗ್ಗೆ ಬಾಲಚಂದ್ರ ಧರ್ಮಸ್ಥಳ ಠಾಣೆಯಲ್ಲಿ ದೂರು ನೀಡಿದ್ದರು.
ಪೊಲೀಸರು ತನಿಖೆ ನಡೆಸಿ ಆರೋಪಿ ಗದಗ ಜಿಲ್ಲೆಯ ಬೆಟಗೇರಿ ತಾಲೂಕಿನ ಭೀಮವ್ವ ಅಲಿಯಾಸ್ ನಾಗಮ್ಮ (63) ಎಂಬ ಮಹಿಳೆಯನ್ನು ಬಂಧಿಸಿದ್ದಾರೆ. ಕಳವುಗೈದು ತನ್ನ ಊರಿಗೆ ತೆರಳಿ ನೆಲೆಸಿದ್ದ ಮಹಿಳೆಯನ್ನು ಬಂಧಿಸಿ ಕರೆತರಲಾಗಿದೆ. ಆಕೆಯ ಬಳಿಯಿಂದ ಒಂದು ವಜ್ರದ ನೆಕ್ಲೆಸ್, ಎರಡು ಉಂಗುರ, ಕಿವಿಯೋಲೆ ಎರಡು ಜತೆ ಸೇರಿದಂತೆ ಒಟ್ಟು 3 ಲಕ್ಷ ಮೌಲ್ಯದ ಆಭರಣಗಳನ್ನು ವಶಕ್ಕೆ ಪಡೆಯಲಾಗಿದೆ. ಆರೋಪಿ ಮಹಿಳೆ ಭೀಮವ್ವ ಯಾತ್ರಾಸ್ಥಳಗಳಿಂದ ಕಳವುಗೈಯುವ ಪ್ರವೃತ್ತಿಯವಳಾಗಿದ್ದು, ಮುರುಡೇಶ್ವರ, ಭಟ್ಕಳ, ಸುಬ್ರಹ್ಮಣ್ಯ ಮುಂತಾದ ಕಡೆ ಕಳವುಗೈದ ಬಗ್ಗೆ ಕೇಸುಗಳಿವೆ. ಆರೋಪಿಯನ್ನು ಪಿಎಸ್ಐ ಕೃಷ್ಣಕಾಂತ್ ಪಾಟೀಲ್ ನೇತೃತ್ವದ ಪೊಲೀಸರು ಬಂಧಿಸಿದ್ದಾರೆ.
A Belthangady-based Mumbai resident Balachandra D accompanied by his family had visited Ganapathi temple, Kokkada village here to worship the deity. They were standing in the line to receive Theertha prasada. Meanwhile, someone had stolen their purse containing the jewellery of his wife, after opening the zip of her bag. A case under registration No. 30/2022 under IPC section 379 about the theft was registered at Dharmasthala police station on the basis of complaint on April 20 this year.
05-08-25 01:45 pm
Bangalore Correspondent
19 Peacocks Dead, Tumkuru: ಹುಲಿಗಳ ಹತ್ಯೆಯಾಯ್ತು...
05-08-25 12:44 pm
Bangalore Suicide, School Boy: ನಾನು ಈಗ ಸ್ವರ್ಗ...
04-08-25 01:00 pm
Veerappa Moily, Kharge: 1980ರಲ್ಲೇ ನಾನು ಸಿಎಂ ಆ...
03-08-25 09:30 pm
Ravi Poojary Aide Kaviraj Arrested, Kolar Pol...
03-08-25 10:52 am
05-08-25 03:23 pm
HK News Desk
ಯೆಮೆನ್ ಬಳಿಯ ಸಮುದ್ರದಲ್ಲಿ ಪ್ಯಾಸೆಂಜರ್ ಹಡಗು ಮುಳುಗ...
04-08-25 05:11 pm
ಗೆಳೆಯನೊಂದಿಗೆ ಪತ್ನಿಯ ಸರಸ ; ಪರಿ ಪರಿ ಬೇಡಿಕೊಂಡರೂ...
04-08-25 02:16 pm
ವಿಮಾನದಲ್ಲಿ ಸಹ ಪ್ರಯಾಣಿಕನಿಗೆ ಕಪಾಳಮೋಕ್ಷ ; ಅಶಿಸ್ತ...
03-08-25 05:44 pm
ಮಾಲೆಗಾಂವ್ ಸ್ಫೋಟ ಪ್ರಕರಣದಲ್ಲಿ ನರೇಂದ್ರ ಮೋದಿ, ಭಾಗ...
03-08-25 04:25 pm
05-08-25 04:29 pm
Mangalore Correspondent
Dcc Bank, Mangalore, Dr Udaya Kumar: ಸಹಕಾರ ಚಳ...
04-08-25 10:58 pm
Dharmasthala Case, Jayan T: ಧರ್ಮಸ್ಥಳ ಕೇಸ್, ಪೊ...
04-08-25 10:34 pm
Mangalore Congress: ಮೆಸ್ಕಾಂ ನೌಕರರ ಪಿಂಚಣಿಗೆ ಗ್...
04-08-25 09:51 pm
Dharmasthala Case, SIT, Body Found: ಬಂಗ್ಲೆಗುಡ...
04-08-25 07:38 pm
03-08-25 10:11 pm
Mangalore Correspondent
ಮುಖ್ಯಶಿಕ್ಷಕನ ವರ್ಗಾವಣೆಗೆ ಸಂಚು ; ಶಾಲೆಯ ವಾಟರ್ ಟ...
03-08-25 08:16 pm
Mangalore Massive Lucky Scheme Fraud: ಸುರತ್ಕಲ...
02-08-25 10:04 pm
ಪ್ರಜ್ವಲ್ ರೇವಣ್ಣ ಅಪರಾಧಿ ; 14 ವರ್ಷ ಅಲ್ಲ, ಜೀವನಪರ...
02-08-25 07:20 pm
Suhas Shetty Murder, NIA Raid Mangalore: ಸುಹಾ...
02-08-25 04:43 pm