ಬ್ರೇಕಿಂಗ್ ನ್ಯೂಸ್
03-06-22 08:25 pm HK News Desk ಕ್ರೈಂ
ಹೈದರಾಬಾದ್, ಜೂನ್ 3: ಹೈದರಾಬಾದ್ ನಗರದಲ್ಲಿ ಅಪ್ರಾಪ್ತ ಯುವತಿಯನ್ನು ಐಷಾರಾಮಿ ಮರ್ಸಿಡಿಸ್ ಬೆಂಜ್ ಕಾರಿನಲ್ಲಿ ಕೂಡಿಹಾಕಿ ಶಾಸಕರ ಮಗ ಸೇರಿದಂತೆ ಪ್ರಭಾವಿಗಳ ಮಕ್ಕಳು ಸೇರಿ ಗ್ಯಾಂಗ್ ರೇಪ್ ನಡೆಸಿರುವ ಬಗ್ಗೆ ಪ್ರಕರಣ ದಾಖಲಾಗಿದೆ.
ಮೇ 28ರಂದು ಘಟನೆ ನಡೆದಿದ್ದು, ಈ ಬಗ್ಗೆ ಸಂತ್ರಸ್ತ ಯುವತಿಯ ತಂದೆ ಪೊಲೀಸ್ ದೂರು ನೀಡಿದ್ದಾರೆ. ಜುಬಿಲಿ ಹಿಲ್ಸ್ ನ ಪಬ್ ಒಂದರಲ್ಲಿ ಗೆಳೆಯರೊಂದಿಗೆ ಮದ್ಯ ರಹಿತ ಪಾರ್ಟಿಗೆ ತೆರಳಿದ್ದ 17 ವರ್ಷದ ಯುವತಿಯನ್ನು ಮನೆಗೆ ಬಿಡುವುದಾಗಿ ಹೇಳಿ ಕಾರಿನಲ್ಲಿ ಕರೆದುಕೊಂಡು ಬಂದಿದ್ದರು. ಈ ವೇಳೆ, ಕಾರಿನ ಒಳಗಡೆಯೇ ಯುವತಿಯನ್ನು ಅತ್ಯಾಚಾರ ನಡೆಸಿದ್ದಾರೆ ಎನ್ನುವ ಆರೋಪ ಕೇಳಿಬಂದಿದೆ.
ಎಐಎಂಐಎಂ ಪಕ್ಷದ ಶಾಸಕರೊಬ್ಬರ ಮಗ, ವಕ್ಫ್ ಬೋರ್ಡ್ ಅಧ್ಯಕ್ಷನ ಮಗ ಮತ್ತು ಟಿಆರ್ ಎಸ್ ನಾಯಕರ ಮಗ ಸೇರಿದಂತೆ ಒಟ್ಟು ಐದು ಮಂದಿ ಪ್ರಭಾವಿಗಳ ಮಕ್ಕಳು ಸೇರಿ ಕೃತ್ಯ ಎಸಗಿದ್ದಾರೆ ಎನ್ನಲಾಗುತ್ತಿದೆ. ಯುವತಿಯನ್ನು ಪಬ್ ನಲ್ಲಿ ಪರಿಚಯ ಮಾಡಿಕೊಂಡ ಹುಡುಗರು ಸಂಜೆ ಹೊತ್ತಿಗೆ ಮನೆ ವರೆಗೆ ಬಿಡುತ್ತೇವೆ ಎಂದು ಹೇಳಿ ಮರ್ಸಿಡಿಸ್ ಬೆಂಜ್ ಕಾರಿನಲ್ಲಿ ಕರೆದೊಯ್ದಿದ್ದರು. ಇದರ ನಡುವೆ ಬೇಕರಿ ಒಂದರಲ್ಲಿ ಕಾರನ್ನು ನಿಲ್ಲಿಸಿದ್ದು ಅಲ್ಲಿ ಸ್ನಾಕ್ಸ್ ತಿಂದಿದ್ದಾರೆ. ಆನಂತರ ಕಾರನ್ನು ತಿರುಗಿ ಪಬ್ ಇರುವಲ್ಲಿಗೇ ತಿರುಗಿಸಿದ್ದು ಪಾರ್ಕಿಂಗ್ ನಲ್ಲಿ ಪಾರ್ಕ್ ಮಾಡಿ ಲೈಂಗಿಕ ಕಿರುಕುಳ ನೀಡಿದ್ದಾರೆ. ಬೆಂಜ್ ಮತ್ತು ಇನ್ನೋವಾ ಕಾರಿನಲ್ಲಿದ್ದ ಐವರು ಸೇರಿ ಕೃತ್ಯ ನಡೆಸಿದ್ದಾರೆ ಎನ್ನಲಾಗುತ್ತಿದೆ.
ಕೊನೆಗೆ ಯುವತಿ ಅವರಿಂದ ತಪ್ಪಿಸಿಕೊಂಡು ಪಬ್ ಪಾರ್ಟಿ ನಡೆಯುತ್ತಿದ್ದಲ್ಲಿಗೆ ಹೋಗಿದ್ದು, ತನ್ನ ತಂದೆಗೆ ಫೋನ್ ಮಾಡಿದ್ದಾಳೆ. ನಡೆದ ಘಟನೆ ಬಗ್ಗೆಯೂ ತಂದೆಗೆ ತಿಳಿಸಿದ್ದಾಳೆ. 17 ವರ್ಷದ ಯುವತಿ ಘಟನೆಯಿಂದ ಶಾಕ್ ಗೆ ಒಳಗಾಗಿದ್ದು, ಕುತ್ತಿಗೆ, ಮುಖದಲ್ಲಿ ಗಾಯದ ಗುರುತು ಕಂಡು ತಂದೆ ಪೊಲೀಸ್ ದೂರು ನೀಡಿದ್ದಾರೆ. ದೂರು ದಾಖಲಾದರೂ, ಪೊಲೀಸರು ಆರೋಪಿಗಳನ್ನು ಬಂಧಿಸಿಲ್ಲ. ತೆಲಂಗಾಣ ಬಿಜೆಪಿ ನಾಯಕರು, ರಾಜ್ಯ ಸರಕಾರದ ಬಗ್ಗೆ ಆರೋಪ ಮಾಡಿದ್ದು, ಪೊಲೀಸರು ಪ್ರಭಾವಿಗಳ ಮಕ್ಕಳನ್ನು ರಕ್ಷಿಸುತ್ತಿದ್ದಾರೆ ಎಂದು ಆರೋಪಿಸಿದ್ದಾರೆ. ಪೊಲೀಸರು ಪೋಕ್ಸೋ ಕಾಯ್ದೆ ಮತ್ತು ಅತ್ಯಾಚಾರ ಕಾಯ್ದೆಯಡಿ ಪ್ರಕರಣ ದಾಖಲಿಸಿದ್ದು, ಶಾಸಕರ ಮಗನೂ ಕೃತ್ಯದಲ್ಲಿ ಪಾಲ್ಗೊಂಡಿದ್ದಾನೆ ಅನ್ನುವುದನ್ನು ದೃಢಪಡಿಸಿದ್ದಾರೆ. ಕೃತ್ಯ ನಡೆಸಿರುವ ಐವರು ಆರೋಪಿಗಳು ಕೂಡ 18 ವರ್ಷದ ಒಳಗಿನವರೆಂದು ಪೊಲೀಸರು ತಿಳಿಸಿದ್ದಾರೆ.
The BJP has accused the Telangana police of attempting to hush up the case, as "the suspects include the son of an AIMIM MLA, a Waqf official and a TRS leader." The girl had gone to a pub in the upscale Road no 36 of Jubilee Hills on Saturday afternoon along with her friends for an “alcohol-free” party. The boys under question befriended the girl at the pub. They then left the pub and spent some time at a bakery in Banjara Hills.
12-11-25 11:10 pm
Bangalore Correspondent
ಧರ್ಮಸ್ಥಳ ಶವ ಹೂತ ಪ್ರಕರಣದಲ್ಲಿ ಎಸ್ಐಟಿ ತನಿಖೆಯ ತಡ...
12-11-25 11:06 pm
ಯಾರೂ ಗೂಟ ಹೊಡೆದು ಇರಕ್ಕಾಗಲ್ಲ, ಬಿಹಾರ ಚುನಾವಣೆ ಟೈಮ...
12-11-25 09:03 pm
ವಿಮಾನ ನಿಲ್ದಾಣದಲ್ಲಿ ನಮಾಜ್ ; ಅವರು ಎಲ್ಲಾದ್ರೂ ಶ್ರ...
10-11-25 07:17 pm
54 ಹೆಕ್ಟೇರ್ ಅರಣ್ಯ ನಾಶ ಭೀತಿ ; ಶರಾವತಿ ಪಂಪ್ಡ್ ಸ್...
10-11-25 02:58 pm
12-11-25 02:54 pm
HK News Desk
ದೆಹಲಿ ಘಟನೆ, ಆತ್ಮಹತ್ಯಾ ಬಾಂಬರ್ ಆಗಿರಲಿಲ್ಲ, ಆಕಸ್ಮ...
11-11-25 10:56 pm
Mangaluru Kasaragod Highway: ಮಂಗಳೂರು- ಕಾಸರಗೋಡ...
11-11-25 10:20 pm
ಕೆಂಪುಕೋಟೆ ಕಾರು ಬ್ಲಾಸ್ಟ್ ಪ್ರಕರಣ ; ಜೈಶ್ ಉಗ್ರರ ಲ...
11-11-25 03:28 pm
ಐ-20 ಕಾರು ಕೆಂಪುಕೋಟೆ ಸಿಗ್ನಲ್ ನಲ್ಲಿದ್ದಾಗ ಬ್ಲಾಸ್...
10-11-25 11:07 pm
12-11-25 06:56 pm
Mangalore Correspondent
Ullal Dargah Committee: ಉಳ್ಳಾಲ ದರ್ಗಾ ಕಮಿಟಿಯಲ್...
11-11-25 10:42 pm
Bomb blast in New Delhi, High Alert in Dakshi...
11-11-25 10:15 pm
Bhagvati Prem Ship, Mangalore: ಸುರತ್ಕಲ್ ; ಮರಳ...
08-11-25 08:31 pm
ಬೆಂಗಳೂರು- ಮಂಗಳೂರು ಹೈಸ್ಪೀಡ್ ಕಾರಿಡಾರ್ ; ಶಿರಾಡ...
07-11-25 10:58 pm
12-11-25 12:32 pm
Mangalore Correspondent
ಬೆಳ್ತಂಗಡಿ ಶ್ರೀರಾಮ ಕ್ರೆಡಿಟ್ ಸೊಸೈಟಿಯಲ್ಲಿ ಭಾರೀ ಅ...
11-11-25 06:33 pm
Fraud Dream Deal Mangalore, KSRTC: ತಿಂಗಳಿಗೆ ಒ...
09-11-25 10:27 pm
ಬಹುಕೋಟಿ ವಂಚಕ ರೋಷನ್ ಸಲ್ದಾನಗೆ ಸೇರಿದ 2.85 ಕೋಟಿ ಮ...
09-11-25 03:50 pm
ಕೋಮುದ್ವೇಷದ ಕೊಲೆ ; ಪ್ರತೀಕಾರಕ್ಕೆ ಪ್ರಚೋದಿಸಿ ಇನ್...
08-11-25 11:15 pm