ಬ್ರೇಕಿಂಗ್ ನ್ಯೂಸ್
04-06-22 06:19 pm Mangalore Correspondent ಕ್ರೈಂ
ಪುತ್ತೂರು, ಜೂನ್ 4: ಹಿಂದು ಜಾಗರಣ ವೇದಿಕೆ ಮುಖಂಡ ಕಾರ್ತಿಕ್ ಮೇರ್ಲ ಹತ್ಯೆ ಪ್ರಕರಣದ ಪ್ರಮುಖ ಆರೋಪಿಯಾಗಿದ್ದ ಚರಣ್ ರಾಜ್ ಎಂಬಾತನನ್ನು ಹಾಡಹಗಲೇ ಬೈಕಿನಲ್ಲಿ ಬಂದ ದುಷ್ಕರ್ಮಿಗಳು ಕಡಿದು ಹತ್ಯೆ ಮಾಡಿದ್ದಾರೆ.
ಸುಳ್ಯ ತಾಲೂಕಿನ ಬೆಳ್ಳಾರೆ ಸಮೀಪದ ಪೆರ್ಲಂಪಾಡಿಯಲ್ಲಿ ಘಟನೆ ನಡೆದಿದೆ. ಪುತ್ತೂರು ತಾಲೂಕಿನ ಆರ್ಯಾಪು ನಿವಾಸಿ ಚರಣ್ ರಾಜ್, ಪೆರ್ಲಂಪಾಡಿಯ ಮೇಲಿನ ಪೇಟೆಯಲ್ಲಿ ಮೆಡಿಕಲ್ ಶಾಪ್ ತೆರೆಯಲು ಸಿದ್ಧತೆ ನಡೆಸುತ್ತಿದ್ದ. ಇಂದು ಮಧ್ಯಾಹ್ನ ಅಂಗಡಿಯಲ್ಲಿದ್ದುಕೊಂಡು ವ್ಯವಸ್ಥೆ ಮಾಡುತ್ತಿದ್ದಾಗಲೇ ಬೈಕಿನಲ್ಲಿ ಬಂದ ಇಬ್ಬರು ತಲವಾರಿನಿಂದ ಕಡಿದು ಹೋಗಿದ್ದಾರೆ. ಸ್ವಲ್ಪ ಹೊತ್ತು ನೆಲದಲ್ಲಿ ಬಿದ್ದು ಹೊರಳಾಡಿದ ಚರಣ್ ರಾಜ್ ಸ್ಥಳದಲ್ಲಿಯೇ ಮೃತಪಟ್ಟಿದ್ದಾನೆ.

2019ರ ಸೆ.4 ರಂದು ರಾತ್ರಿ ಗಣೇಶೋತ್ಸವ ಸಡಗರದಲ್ಲಿದ್ದ ಹಿಂಜಾವೇ ಮುಖಂಡ ಕಾರ್ತಿಕ್ ಮೇರ್ಲ ಅವರನ್ನು ತಂಡವೊಂದು ಹಳೆ ದ್ವೇಷದಿಂದ ಕಡಿದು ಹತ್ಯೆಗೈದಿತ್ತು. ಇದರಲ್ಲಿ ಸೋದರರಾದ ಚರಣ್ ಮತ್ತು ಕಿರಣ್ ಸೇರಿ ಮೂವರನ್ನು ಪೊಲೀಸರು ಬಂಧಿಸಿದ್ದರು. ಒಂದು ವರ್ಷ ಕಾಲ ಜೈಲಿನಲ್ಲಿದ್ದ ಇವರು ಬಳಿಕ ಜಾಮೀನು ಪಡೆದು ಹೊರಬಂದಿದ್ದರು. ಇದೀಗ ತನ್ನ ಪತ್ನಿ ಮನೆಯಿದ್ದ ಪೆರ್ಲಂಪಾಡಿಯಲ್ಲಿ ಮೆಡಿಕಲ್ ವ್ಯವಹಾರ ಆರಂಭಿಸಲು ಚರಣ್ ಸಿದ್ಧತೆ ನಡೆಸಿದ್ದ. ಕಾರ್ತಿಕ್ ಮೇರ್ಲ ಹತ್ಯೆಗೆ ಪ್ರತೀಕಾರಕ್ಕಾಗಿ ಕಾದಿದ್ದ ಹಂತಕರು ಇಂದು ಮಧ್ಯಾಹ್ನ ಶಾಪ್ ನಲ್ಲಿ ಒಬ್ಬಂಟಿಯಾಗಿದ್ದಾಗಲೇ ಬಂದು ಹತ್ಯೆ ಮಾಡಿದ್ದಾರೆ.
Puttur Murder of Hindu Jagaran Vedike leader Karthik Merla, prime accused Charan Raj killed over revenge in broad daylight.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
27-07-26 09:48 pm
HK News Staffer
ಕ್ಯಾನ್ಸರ್ ವಿರುದ್ಧ ಹೋರಾಟದ ನಡುವೆಯೇ ಸೇವಾ ಕೈಂಕರ್ಯ...
27-07-26 08:24 pm
ಚಿನ್ನದ ರಿಂಗ್, ಡಾಲರ್ ಸಹಿತ ಬೆಲೆಬಾಳುವ ವಸ್ತುಗಳಿದ್...
26-07-26 09:57 pm
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
27-07-26 11:07 pm
Mangaluru Staffer
ಕಾಪುವಿನಲ್ಲಿ ಎಕ್ಸ್ಪ್ರೆಸ್ ಬಸ್ಗಳ ದರ್ಪ! ಟೈಮಿಂಗ್...
27-07-26 10:21 pm
ಸಚಿವ ಸ್ಥಾನ ಕೊಡಿಸಲು ಮೂರು ಕೋಟಿ ಬೇಡಿಕೆ ; ಕೇರಳದ ಶ...
27-07-26 09:04 pm
ಬೆಂಗಳೂರು ಗ್ಯಾರೇಜ್ ನಲ್ಲಿ ಅಗ್ನಿ ಅವಘಡ ; ಜಾಗ್ವಾರ...
27-07-26 07:35 pm
ಎಪಿಎಂಸಿ ಕಾರ್ಯದರ್ಶಿ ವಿರುದ್ಧ ಲೈಂಗಿಕ ಕಿರುಕುಳ ಆರೋ...
27-07-26 01:09 pm