ಬ್ರೇಕಿಂಗ್ ನ್ಯೂಸ್
04-06-22 06:19 pm Mangalore Correspondent ಕ್ರೈಂ
ಪುತ್ತೂರು, ಜೂನ್ 4: ಹಿಂದು ಜಾಗರಣ ವೇದಿಕೆ ಮುಖಂಡ ಕಾರ್ತಿಕ್ ಮೇರ್ಲ ಹತ್ಯೆ ಪ್ರಕರಣದ ಪ್ರಮುಖ ಆರೋಪಿಯಾಗಿದ್ದ ಚರಣ್ ರಾಜ್ ಎಂಬಾತನನ್ನು ಹಾಡಹಗಲೇ ಬೈಕಿನಲ್ಲಿ ಬಂದ ದುಷ್ಕರ್ಮಿಗಳು ಕಡಿದು ಹತ್ಯೆ ಮಾಡಿದ್ದಾರೆ.
ಸುಳ್ಯ ತಾಲೂಕಿನ ಬೆಳ್ಳಾರೆ ಸಮೀಪದ ಪೆರ್ಲಂಪಾಡಿಯಲ್ಲಿ ಘಟನೆ ನಡೆದಿದೆ. ಪುತ್ತೂರು ತಾಲೂಕಿನ ಆರ್ಯಾಪು ನಿವಾಸಿ ಚರಣ್ ರಾಜ್, ಪೆರ್ಲಂಪಾಡಿಯ ಮೇಲಿನ ಪೇಟೆಯಲ್ಲಿ ಮೆಡಿಕಲ್ ಶಾಪ್ ತೆರೆಯಲು ಸಿದ್ಧತೆ ನಡೆಸುತ್ತಿದ್ದ. ಇಂದು ಮಧ್ಯಾಹ್ನ ಅಂಗಡಿಯಲ್ಲಿದ್ದುಕೊಂಡು ವ್ಯವಸ್ಥೆ ಮಾಡುತ್ತಿದ್ದಾಗಲೇ ಬೈಕಿನಲ್ಲಿ ಬಂದ ಇಬ್ಬರು ತಲವಾರಿನಿಂದ ಕಡಿದು ಹೋಗಿದ್ದಾರೆ. ಸ್ವಲ್ಪ ಹೊತ್ತು ನೆಲದಲ್ಲಿ ಬಿದ್ದು ಹೊರಳಾಡಿದ ಚರಣ್ ರಾಜ್ ಸ್ಥಳದಲ್ಲಿಯೇ ಮೃತಪಟ್ಟಿದ್ದಾನೆ.
2019ರ ಸೆ.4 ರಂದು ರಾತ್ರಿ ಗಣೇಶೋತ್ಸವ ಸಡಗರದಲ್ಲಿದ್ದ ಹಿಂಜಾವೇ ಮುಖಂಡ ಕಾರ್ತಿಕ್ ಮೇರ್ಲ ಅವರನ್ನು ತಂಡವೊಂದು ಹಳೆ ದ್ವೇಷದಿಂದ ಕಡಿದು ಹತ್ಯೆಗೈದಿತ್ತು. ಇದರಲ್ಲಿ ಸೋದರರಾದ ಚರಣ್ ಮತ್ತು ಕಿರಣ್ ಸೇರಿ ಮೂವರನ್ನು ಪೊಲೀಸರು ಬಂಧಿಸಿದ್ದರು. ಒಂದು ವರ್ಷ ಕಾಲ ಜೈಲಿನಲ್ಲಿದ್ದ ಇವರು ಬಳಿಕ ಜಾಮೀನು ಪಡೆದು ಹೊರಬಂದಿದ್ದರು. ಇದೀಗ ತನ್ನ ಪತ್ನಿ ಮನೆಯಿದ್ದ ಪೆರ್ಲಂಪಾಡಿಯಲ್ಲಿ ಮೆಡಿಕಲ್ ವ್ಯವಹಾರ ಆರಂಭಿಸಲು ಚರಣ್ ಸಿದ್ಧತೆ ನಡೆಸಿದ್ದ. ಕಾರ್ತಿಕ್ ಮೇರ್ಲ ಹತ್ಯೆಗೆ ಪ್ರತೀಕಾರಕ್ಕಾಗಿ ಕಾದಿದ್ದ ಹಂತಕರು ಇಂದು ಮಧ್ಯಾಹ್ನ ಶಾಪ್ ನಲ್ಲಿ ಒಬ್ಬಂಟಿಯಾಗಿದ್ದಾಗಲೇ ಬಂದು ಹತ್ಯೆ ಮಾಡಿದ್ದಾರೆ.
Puttur Murder of Hindu Jagaran Vedike leader Karthik Merla, prime accused Charan Raj killed over revenge in broad daylight.
05-08-25 01:45 pm
Bangalore Correspondent
19 Peacocks Dead, Tumkuru: ಹುಲಿಗಳ ಹತ್ಯೆಯಾಯ್ತು...
05-08-25 12:44 pm
Bangalore Suicide, School Boy: ನಾನು ಈಗ ಸ್ವರ್ಗ...
04-08-25 01:00 pm
Veerappa Moily, Kharge: 1980ರಲ್ಲೇ ನಾನು ಸಿಎಂ ಆ...
03-08-25 09:30 pm
Ravi Poojary Aide Kaviraj Arrested, Kolar Pol...
03-08-25 10:52 am
05-08-25 03:23 pm
HK News Desk
ಯೆಮೆನ್ ಬಳಿಯ ಸಮುದ್ರದಲ್ಲಿ ಪ್ಯಾಸೆಂಜರ್ ಹಡಗು ಮುಳುಗ...
04-08-25 05:11 pm
ಗೆಳೆಯನೊಂದಿಗೆ ಪತ್ನಿಯ ಸರಸ ; ಪರಿ ಪರಿ ಬೇಡಿಕೊಂಡರೂ...
04-08-25 02:16 pm
ವಿಮಾನದಲ್ಲಿ ಸಹ ಪ್ರಯಾಣಿಕನಿಗೆ ಕಪಾಳಮೋಕ್ಷ ; ಅಶಿಸ್ತ...
03-08-25 05:44 pm
ಮಾಲೆಗಾಂವ್ ಸ್ಫೋಟ ಪ್ರಕರಣದಲ್ಲಿ ನರೇಂದ್ರ ಮೋದಿ, ಭಾಗ...
03-08-25 04:25 pm
05-08-25 04:29 pm
Mangalore Correspondent
Dcc Bank, Mangalore, Dr Udaya Kumar: ಸಹಕಾರ ಚಳ...
04-08-25 10:58 pm
Dharmasthala Case, Jayan T: ಧರ್ಮಸ್ಥಳ ಕೇಸ್, ಪೊ...
04-08-25 10:34 pm
Mangalore Congress: ಮೆಸ್ಕಾಂ ನೌಕರರ ಪಿಂಚಣಿಗೆ ಗ್...
04-08-25 09:51 pm
Dharmasthala Case, SIT, Body Found: ಬಂಗ್ಲೆಗುಡ...
04-08-25 07:38 pm
03-08-25 10:11 pm
Mangalore Correspondent
ಮುಖ್ಯಶಿಕ್ಷಕನ ವರ್ಗಾವಣೆಗೆ ಸಂಚು ; ಶಾಲೆಯ ವಾಟರ್ ಟ...
03-08-25 08:16 pm
Mangalore Massive Lucky Scheme Fraud: ಸುರತ್ಕಲ...
02-08-25 10:04 pm
ಪ್ರಜ್ವಲ್ ರೇವಣ್ಣ ಅಪರಾಧಿ ; 14 ವರ್ಷ ಅಲ್ಲ, ಜೀವನಪರ...
02-08-25 07:20 pm
Suhas Shetty Murder, NIA Raid Mangalore: ಸುಹಾ...
02-08-25 04:43 pm