ಬ್ರೇಕಿಂಗ್ ನ್ಯೂಸ್
04-06-22 06:19 pm Mangalore Correspondent ಕ್ರೈಂ
ಪುತ್ತೂರು, ಜೂನ್ 4: ಹಿಂದು ಜಾಗರಣ ವೇದಿಕೆ ಮುಖಂಡ ಕಾರ್ತಿಕ್ ಮೇರ್ಲ ಹತ್ಯೆ ಪ್ರಕರಣದ ಪ್ರಮುಖ ಆರೋಪಿಯಾಗಿದ್ದ ಚರಣ್ ರಾಜ್ ಎಂಬಾತನನ್ನು ಹಾಡಹಗಲೇ ಬೈಕಿನಲ್ಲಿ ಬಂದ ದುಷ್ಕರ್ಮಿಗಳು ಕಡಿದು ಹತ್ಯೆ ಮಾಡಿದ್ದಾರೆ.
ಸುಳ್ಯ ತಾಲೂಕಿನ ಬೆಳ್ಳಾರೆ ಸಮೀಪದ ಪೆರ್ಲಂಪಾಡಿಯಲ್ಲಿ ಘಟನೆ ನಡೆದಿದೆ. ಪುತ್ತೂರು ತಾಲೂಕಿನ ಆರ್ಯಾಪು ನಿವಾಸಿ ಚರಣ್ ರಾಜ್, ಪೆರ್ಲಂಪಾಡಿಯ ಮೇಲಿನ ಪೇಟೆಯಲ್ಲಿ ಮೆಡಿಕಲ್ ಶಾಪ್ ತೆರೆಯಲು ಸಿದ್ಧತೆ ನಡೆಸುತ್ತಿದ್ದ. ಇಂದು ಮಧ್ಯಾಹ್ನ ಅಂಗಡಿಯಲ್ಲಿದ್ದುಕೊಂಡು ವ್ಯವಸ್ಥೆ ಮಾಡುತ್ತಿದ್ದಾಗಲೇ ಬೈಕಿನಲ್ಲಿ ಬಂದ ಇಬ್ಬರು ತಲವಾರಿನಿಂದ ಕಡಿದು ಹೋಗಿದ್ದಾರೆ. ಸ್ವಲ್ಪ ಹೊತ್ತು ನೆಲದಲ್ಲಿ ಬಿದ್ದು ಹೊರಳಾಡಿದ ಚರಣ್ ರಾಜ್ ಸ್ಥಳದಲ್ಲಿಯೇ ಮೃತಪಟ್ಟಿದ್ದಾನೆ.

2019ರ ಸೆ.4 ರಂದು ರಾತ್ರಿ ಗಣೇಶೋತ್ಸವ ಸಡಗರದಲ್ಲಿದ್ದ ಹಿಂಜಾವೇ ಮುಖಂಡ ಕಾರ್ತಿಕ್ ಮೇರ್ಲ ಅವರನ್ನು ತಂಡವೊಂದು ಹಳೆ ದ್ವೇಷದಿಂದ ಕಡಿದು ಹತ್ಯೆಗೈದಿತ್ತು. ಇದರಲ್ಲಿ ಸೋದರರಾದ ಚರಣ್ ಮತ್ತು ಕಿರಣ್ ಸೇರಿ ಮೂವರನ್ನು ಪೊಲೀಸರು ಬಂಧಿಸಿದ್ದರು. ಒಂದು ವರ್ಷ ಕಾಲ ಜೈಲಿನಲ್ಲಿದ್ದ ಇವರು ಬಳಿಕ ಜಾಮೀನು ಪಡೆದು ಹೊರಬಂದಿದ್ದರು. ಇದೀಗ ತನ್ನ ಪತ್ನಿ ಮನೆಯಿದ್ದ ಪೆರ್ಲಂಪಾಡಿಯಲ್ಲಿ ಮೆಡಿಕಲ್ ವ್ಯವಹಾರ ಆರಂಭಿಸಲು ಚರಣ್ ಸಿದ್ಧತೆ ನಡೆಸಿದ್ದ. ಕಾರ್ತಿಕ್ ಮೇರ್ಲ ಹತ್ಯೆಗೆ ಪ್ರತೀಕಾರಕ್ಕಾಗಿ ಕಾದಿದ್ದ ಹಂತಕರು ಇಂದು ಮಧ್ಯಾಹ್ನ ಶಾಪ್ ನಲ್ಲಿ ಒಬ್ಬಂಟಿಯಾಗಿದ್ದಾಗಲೇ ಬಂದು ಹತ್ಯೆ ಮಾಡಿದ್ದಾರೆ.
Puttur Murder of Hindu Jagaran Vedike leader Karthik Merla, prime accused Charan Raj killed over revenge in broad daylight.
12-09-26 09:40 pm
HK News Staffer
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
14-09-26 10:01 pm
HK News Staffer
ಮಂಗಳೂರಿನಲ್ಲಿ ಎರಡು ದಿನ ಸಿಎಂ ಡಿಕೆಶಿ ವಾಸ್ತವ್ಯ ;...
14-09-26 06:02 pm
100 ವರ್ಷಗಳ ಬಳಿಕವೂ ಸ್ವಂತ ಸೂರಿಗಾಗಿ ಕರಾವಳಿಯಲ್ಲಿ...
14-09-26 05:00 pm
Konkan Catholic Credit Society Inaugurated in...
14-09-26 04:18 pm
Konkan Catholic Credit Society Mangalore: ಹಣಕ...
13-09-26 10:11 pm
12-09-26 07:41 pm
HK News Staffer
ಕ್ರಿಪ್ಟೊ ಕರೆನ್ಸಿ ಹೆಸ್ರಲ್ಲಿ ಡಾಕ್ಟರ್ ಗೆ ಮಹಿಳೆಯಿ...
11-09-26 06:38 pm
ಜಾಮೀನು ಪಡೆಯಲು ನಕಲಿ ಆಧಾರ್ ಕಾರ್ಡ್ ಹಾಜರು ; ಉಡು...
11-09-26 01:09 pm
ಬೈಕ್ಗೆ ಡಿಕ್ಕಿ ಹೊಡೆದ ಕಾರು ; ಚಾಮರಾಜನಗರದಲ್ಲಿ ಮೂ...
11-09-26 10:14 am
ಕುಂದಾಪುರದಲ್ಲಿ 8 ಶಾಲಾ ಮಕ್ಕಳ ಬಲಿ ಪಡೆದ ಭೀಕರ ಅಪಘಾ...
10-09-26 08:16 pm