ಬ್ರೇಕಿಂಗ್ ನ್ಯೂಸ್
04-06-22 06:19 pm Mangalore Correspondent ಕ್ರೈಂ
ಪುತ್ತೂರು, ಜೂನ್ 4: ಹಿಂದು ಜಾಗರಣ ವೇದಿಕೆ ಮುಖಂಡ ಕಾರ್ತಿಕ್ ಮೇರ್ಲ ಹತ್ಯೆ ಪ್ರಕರಣದ ಪ್ರಮುಖ ಆರೋಪಿಯಾಗಿದ್ದ ಚರಣ್ ರಾಜ್ ಎಂಬಾತನನ್ನು ಹಾಡಹಗಲೇ ಬೈಕಿನಲ್ಲಿ ಬಂದ ದುಷ್ಕರ್ಮಿಗಳು ಕಡಿದು ಹತ್ಯೆ ಮಾಡಿದ್ದಾರೆ.
ಸುಳ್ಯ ತಾಲೂಕಿನ ಬೆಳ್ಳಾರೆ ಸಮೀಪದ ಪೆರ್ಲಂಪಾಡಿಯಲ್ಲಿ ಘಟನೆ ನಡೆದಿದೆ. ಪುತ್ತೂರು ತಾಲೂಕಿನ ಆರ್ಯಾಪು ನಿವಾಸಿ ಚರಣ್ ರಾಜ್, ಪೆರ್ಲಂಪಾಡಿಯ ಮೇಲಿನ ಪೇಟೆಯಲ್ಲಿ ಮೆಡಿಕಲ್ ಶಾಪ್ ತೆರೆಯಲು ಸಿದ್ಧತೆ ನಡೆಸುತ್ತಿದ್ದ. ಇಂದು ಮಧ್ಯಾಹ್ನ ಅಂಗಡಿಯಲ್ಲಿದ್ದುಕೊಂಡು ವ್ಯವಸ್ಥೆ ಮಾಡುತ್ತಿದ್ದಾಗಲೇ ಬೈಕಿನಲ್ಲಿ ಬಂದ ಇಬ್ಬರು ತಲವಾರಿನಿಂದ ಕಡಿದು ಹೋಗಿದ್ದಾರೆ. ಸ್ವಲ್ಪ ಹೊತ್ತು ನೆಲದಲ್ಲಿ ಬಿದ್ದು ಹೊರಳಾಡಿದ ಚರಣ್ ರಾಜ್ ಸ್ಥಳದಲ್ಲಿಯೇ ಮೃತಪಟ್ಟಿದ್ದಾನೆ.
2019ರ ಸೆ.4 ರಂದು ರಾತ್ರಿ ಗಣೇಶೋತ್ಸವ ಸಡಗರದಲ್ಲಿದ್ದ ಹಿಂಜಾವೇ ಮುಖಂಡ ಕಾರ್ತಿಕ್ ಮೇರ್ಲ ಅವರನ್ನು ತಂಡವೊಂದು ಹಳೆ ದ್ವೇಷದಿಂದ ಕಡಿದು ಹತ್ಯೆಗೈದಿತ್ತು. ಇದರಲ್ಲಿ ಸೋದರರಾದ ಚರಣ್ ಮತ್ತು ಕಿರಣ್ ಸೇರಿ ಮೂವರನ್ನು ಪೊಲೀಸರು ಬಂಧಿಸಿದ್ದರು. ಒಂದು ವರ್ಷ ಕಾಲ ಜೈಲಿನಲ್ಲಿದ್ದ ಇವರು ಬಳಿಕ ಜಾಮೀನು ಪಡೆದು ಹೊರಬಂದಿದ್ದರು. ಇದೀಗ ತನ್ನ ಪತ್ನಿ ಮನೆಯಿದ್ದ ಪೆರ್ಲಂಪಾಡಿಯಲ್ಲಿ ಮೆಡಿಕಲ್ ವ್ಯವಹಾರ ಆರಂಭಿಸಲು ಚರಣ್ ಸಿದ್ಧತೆ ನಡೆಸಿದ್ದ. ಕಾರ್ತಿಕ್ ಮೇರ್ಲ ಹತ್ಯೆಗೆ ಪ್ರತೀಕಾರಕ್ಕಾಗಿ ಕಾದಿದ್ದ ಹಂತಕರು ಇಂದು ಮಧ್ಯಾಹ್ನ ಶಾಪ್ ನಲ್ಲಿ ಒಬ್ಬಂಟಿಯಾಗಿದ್ದಾಗಲೇ ಬಂದು ಹತ್ಯೆ ಮಾಡಿದ್ದಾರೆ.
Puttur Murder of Hindu Jagaran Vedike leader Karthik Merla, prime accused Charan Raj killed over revenge in broad daylight.
15-10-25 10:59 pm
Bangalore Correspondent
ದೀಪಾವಳಿಗೆ ಹೆಚ್ಚುವರಿ ರೈಲು ; ಮಂಗಳೂರು- ಬೆಂಗಳೂರು,...
15-10-25 03:35 pm
ರಘು ದೀಕ್ಷಿತ್ ಜೀವನದಲ್ಲಿ ಎರಡನೇ ಇನ್ನಿಂಗ್ಸ್ ; 50ರ...
15-10-25 03:32 pm
ಕಾರ್ಕಳ ಮಾಜಿ ಶಾಸಕ ಗೋಪಾಲ ಭಂಡಾರಿ ಪುತ್ರ ರೈಲಿನಡಿಗೆ...
14-10-25 11:24 am
CM Siddaramaiah, DK Shivakumar:ಶಾಸಕರ ಬೆಂಬಲವಿಲ...
13-10-25 10:09 pm
15-10-25 11:02 pm
HK News Desk
ರಾಜಸ್ಥಾನದಲ್ಲಿ ಭೀಕರ ಬಸ್ ದುರಂತ ; ಮಕ್ಕಳು, ಮಹಿಳೆಯ...
15-10-25 12:09 pm
ಟ್ರಂಪ್ ಒತ್ತಡ ನಡುವೆಯೇ ಭಾರತದಲ್ಲಿ ಗೂಗಲ್ ಸಂಸ್ಥೆ ಭ...
14-10-25 10:33 pm
ಹಮಾಸ್ - ಇಸ್ರೇಲ್ ಶಾಂತಿ ಒಪ್ಪಂದ ; ಎರಡು ವರ್ಷಗಳ ಅಕ...
14-10-25 11:22 am
ಕರೂರು ಕಾಲ್ತುಳಿತ ಪ್ರಕರಣ ; ಸಿಬಿಐ ತನಿಖೆಗೆ ಒಪ್ಪಿಸ...
14-10-25 11:11 am
16-10-25 01:11 pm
Mangalore Correspondent
Pumpwell Kankandy Road close: ಪಂಪ್ವೆಲ್ - ಕಂಕ...
15-10-25 05:36 pm
ಬೈಂದೂರಿನಲ್ಲಿ ಮೂವರು ವಿದ್ಯಾರ್ಥಿಗಳು ಸಮುದ್ರಪಾಲು ;...
15-10-25 12:12 pm
ಮೈಸೂರು, ಬೆಂಗಳೂರು, ಶಿವಮೊಗ್ಗ ಕಂಬಳಕ್ಕೆ ಹೈಕೋರ್ಟ್...
14-10-25 10:36 pm
ಸುಳ್ಯ ಮೂಲದ ಯುವಕ ಮಾರಿಷಸ್ ನಲ್ಲಿ ಜಲಪಾತಕ್ಕೆ ಬಿದ್ದ...
14-10-25 10:13 pm
15-10-25 04:51 pm
Bangalore Correspondent
ನಿಡ್ಡೋಡಿ ಮನೆಯಲ್ಲಿ ಗ್ಯಾಂಗ್ ರೇಪ್ ಸಂಚು ; ನಾಲ್ವರು...
15-10-25 12:00 pm
ಅಮಲಿಗಾಗಿ ಯುವಕರಿಗೆ ಕಫ್ ಸಿರಪ್ ಮಾರಾಟ ದಂಧೆ ; ದಾವಣ...
14-10-25 04:44 pm
ರುಪಾಯಿಗೆ ನಾಲ್ಕು ಪಟ್ಟು ಯುಕೆ ಪೌಂಡ್ ಕರೆನ್ಸಿಯ ಆಮಿ...
14-10-25 11:19 am
Vitla, Honey Trap, Mangalore Crime: ಗಲ್ಫ್ ಉದ್...
13-10-25 10:04 pm