ಬ್ರೇಕಿಂಗ್ ನ್ಯೂಸ್
04-06-22 09:31 pm Mangalore Correspondent ಕ್ರೈಂ
ಮಂಗಳೂರು, ಜೂನ್ 4: ಇಎಸ್ಐ ಪಣಂಬೂರು ವಿಭಾಗದ ಡಿಸ್ಪೆನ್ಸರಿ ಘಟಕದಲ್ಲಿ ಫಾರ್ಮಸಿಸ್ಟ್ ಆಗಿದ್ದುಕೊಂಡು ಕಾರ್ಮಿಕರ ಚಿಕಿತ್ಸೆಗೆ ಹಣ ಪಾವತಿಸಲು ಲಂಚ ಕೇಳಿದ ಆರೋಪದಲ್ಲಿ ಅಧಿಕಾರಿಯೊಬ್ಬರನ್ನು ಎಸಿಬಿ ಪೊಲೀಸರು ರೆಡ್ ಹ್ಯಾಂಡ್ ಆಗಿ ಬಂಧಿಸಿದ್ದಾರೆ.
ವಿಷ್ಣುಮೂರ್ತಿ ಭಟ್ ಎಸಿಬಿ ಬಲೆಗೆ ಬಿದ್ದ ಫಾರ್ಮಸಿ ಅಧಿಕಾರಿ. ಪ್ರಕರಣದಲ್ಲಿ ಎಸಿಬಿಗೆ ದೂರು ನೀಡಿದ್ದ ಪ್ರಶಾಂತ್ ಕುಮಾರ್ ಅನಾರೋಗ್ಯಕ್ಕೆ ಒಳಗಾಗಿದ್ದು ಬೇಕರಿ ಒಂದರಲ್ಲಿ ನೌಕರಿಯಾಗಿದ್ದ ಪತ್ನಿಯ ಇಎಸ್ಐ ಸೌಲಭ್ಯ ಬಳಸಿಕೊಂಡು ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದಿದ್ದರು. ಆನಂತರ, ಖಾಸಗಿ ವೈದ್ಯರು ಬರೆದುಕೊಟ್ಟಿದ್ದ ಔಷಧಿ ಚೀಟಿಯಲ್ಲಿದ್ದ ಔಷಧಿಗಳು ಇಎಸ್ಐ ಡಿಸ್ಪೆನ್ಸರಿ ಘಟಕದಲ್ಲಿ ಸಿಕ್ಕಿರಲಿಲ್ಲ. ಹಾಗಾಗಿ ಬೇರೆ ಖಾಸಗಿ ಮೆಡಿಕಲ್ ನಿಂದ ಔಷಧಿಯನ್ನು ಪಡೆದುಕೊಂಡಿದ್ದರು.
ಆನಂತರ, ಔಷಧಿಯ ಬಿಲ್ ಮೊತ್ತವನ್ನು ಇಎಸ್ಐ ಡಿಸ್ಪೆನ್ಸರಿ ವಿಭಾಗಕ್ಕೆ ಕೊಟ್ಟು ಅಲ್ಲಿಂದ ಹಣವನ್ನು ಇಎಸ್ಐ ಸೌಲಭ್ಯ ಹೊಂದಿದ್ದ ಮಹಿಳೆಯ ಬ್ಯಾಂಕ್ ಖಾತೆಗೆ ವರ್ಗಾವಣೆ ಮಾಡಬೇಕಿತ್ತು. ಆದರೆ, ಬಿಲ್ ಮೊತ್ತವನ್ನು ಪಾವತಿ ಮಾಡಬೇಕಿದ್ದಲ್ಲಿ ಎರಡು ಸಾವಿರ ರೂಪಾಯಿ ಲಂಚ ನೀಡುವಂತೆ ಅಲ್ಲಿನ ಅಧಿಕಾರಿ ಕೇಳಿದ್ದರು. ಈ ಬಗ್ಗೆ ಪ್ರಶಾಂತ್ ಕುಮಾರ್ ಎಸಿಬಿಗೆ ದೂರು ನೀಡಿದ್ದು, ಶನಿವಾರ ಮಧ್ಯಾಹ್ನ ಪೊಲೀಸರ ಸೂಚನೆಯಂತೆ ಹಣವನ್ನು ನೀಡುತ್ತಿದ್ದಾಗಲೇ ದಾಳಿ ನಡೆಸಿದ್ದಾರೆ. ಡಿವೈಎಸ್ಪಿ ಕೆ.ಸಿ.ಪ್ರಕಾಶ್, ಇನ್ಸ್ ಪೆಕ್ಟರ್ ಶ್ಯಾಮಸುಂದರ್ ನೇತೃತ್ವದಲ್ಲಿ ದಾಳಿ ನಡೆಸಿದ್ದು, ಆರೋಪಿಯನ್ನು ವಶಕ್ಕೆ ಪಡೆದು ಬಂಧಿಸಿದ್ದಾರೆ.
Sleuths of the Anti-Corruption Bureau (ACB) apprehended a staff of ESI Hospital in Panambur accepting a bribe for releasing money to a patient.
The arrested has been identified as Vishnumurthi, who works as a senior pharmacist at the ESI Hospital in Panambur.
07-02-26 05:09 pm
HK News Desk
ಸಿದ್ದರಾಮಯ್ಯರೇ ಐದು ವರ್ಷ ಸಿಎಂ ; ಪುತ್ರ ಯತೀಂದ್ರ ಪ...
07-02-26 02:58 pm
Sanjana Bus Fire Accident, Nelamangala: ಮತ್ತೊ...
06-02-26 12:30 pm
ಭವಿಷ್ಯ ಹೇಳುವ ನೆಪದಲ್ಲಿ ಬೇಟೆ? ರೀಲ್ಸ್ ರಾಣಿಯ ಹಿಂದ...
05-02-26 05:52 pm
ಗದಗದಲ್ಲಿ ಭೀಕರ ರಸ್ತೆ ಅಪಘಾತ ; ಕ್ರೂಸರ್ - ಕ್ಯಾಂಟರ...
05-02-26 03:11 pm
08-02-26 10:18 pm
HK News Desk
25 ವರ್ಷಗಳ ಬಳಿಕ ಮುಂಬೈ ಪಾಲಿಕೆ ಬಿಜೆಪಿ ತೆಕ್ಕೆಗೆ ;...
07-02-26 10:53 pm
ಕಣ್ಣೆದುರೇ ನಡೆದ ಅಚ್ಚರಿ ; 1 ಲಕ್ಷ ರೂ. ಮೌಲ್ಯದ ಚಿನ...
06-02-26 10:58 pm
ಕೊರಿಯನ್ ವೆಬ್ ಸಿರೀಸ್ ವ್ಯಸನ, ತಂದೆಯ ಎರಡು ಕೋಟಿ ಸಾ...
06-02-26 08:47 pm
SBI ಬ್ಯಾಂಕ್ ಕಿತಾಪತಿ ; 2 ಕೋಟಿ ಮೌಲ್ಯದ ಚಿನ್ನ–ಬೆಳ...
06-02-26 08:17 pm
08-02-26 11:17 pm
HK News Desk
ಜಾಗತಿಕ ಪ್ರವಾಸಿ ತಾಣಗಳ ಅಭಿವೃದ್ಧಿ ; ಕೋಡಿ- ಕನ್ಯಾನ...
08-02-26 10:10 pm
ಬೈಂದೂರು ಕ್ಷೇತ್ರದ ಮಾಜಿ ಶಾಸಕ, ಜನತಾ ಪರಿವಾರದ ಹಿರಿ...
07-02-26 12:55 pm
DK Shivakumar, Puttur: ಪಕ್ಷ ಏನು ಹೇಳುತ್ತೋ ಅದೇ...
07-02-26 11:53 am
ಬಿಜೆಪಿಯವರು ತಿಪ್ಪರಲಾಗ ಹೊಡೆದ್ರೂ ಅಧಿಕಾರಕ್ಕೆ ಬರಲ್...
06-02-26 10:56 pm
08-02-26 02:07 pm
Mangalore Correspondent
MDMA ಮಾದಕ ವಸ್ತು ಮಾರಾಟ ಮಾಡುತ್ತಿದ್ದಾಗ ಪೊಲೀಸ್ ದಾ...
08-02-26 12:59 pm
Mangalore Robbery, Crime: ಕಳವಾರಿಗೆ ಮೆಹಂದಿ ಹೋಗ...
08-02-26 12:37 pm
ಫ್ರೀ ಫೈರ್ ಗೇಮ್ ಚಟ ; ಅಕ್ಕನ ಮಗನ ಕೊಂದಿದ್ದ ಮಾವ, ಪ...
07-02-26 10:48 pm
ಡಿಜಿಟಲ್ ಅರೆಸ್ಟ್ ; ಮಹಿಳೆಗೆ 15 ನಿಮಿಷದಲ್ಲಿ 50 ಲಕ...
07-02-26 10:07 pm