ಬ್ರೇಕಿಂಗ್ ನ್ಯೂಸ್
04-06-22 09:31 pm Mangalore Correspondent ಕ್ರೈಂ
ಮಂಗಳೂರು, ಜೂನ್ 4: ಇಎಸ್ಐ ಪಣಂಬೂರು ವಿಭಾಗದ ಡಿಸ್ಪೆನ್ಸರಿ ಘಟಕದಲ್ಲಿ ಫಾರ್ಮಸಿಸ್ಟ್ ಆಗಿದ್ದುಕೊಂಡು ಕಾರ್ಮಿಕರ ಚಿಕಿತ್ಸೆಗೆ ಹಣ ಪಾವತಿಸಲು ಲಂಚ ಕೇಳಿದ ಆರೋಪದಲ್ಲಿ ಅಧಿಕಾರಿಯೊಬ್ಬರನ್ನು ಎಸಿಬಿ ಪೊಲೀಸರು ರೆಡ್ ಹ್ಯಾಂಡ್ ಆಗಿ ಬಂಧಿಸಿದ್ದಾರೆ.
ವಿಷ್ಣುಮೂರ್ತಿ ಭಟ್ ಎಸಿಬಿ ಬಲೆಗೆ ಬಿದ್ದ ಫಾರ್ಮಸಿ ಅಧಿಕಾರಿ. ಪ್ರಕರಣದಲ್ಲಿ ಎಸಿಬಿಗೆ ದೂರು ನೀಡಿದ್ದ ಪ್ರಶಾಂತ್ ಕುಮಾರ್ ಅನಾರೋಗ್ಯಕ್ಕೆ ಒಳಗಾಗಿದ್ದು ಬೇಕರಿ ಒಂದರಲ್ಲಿ ನೌಕರಿಯಾಗಿದ್ದ ಪತ್ನಿಯ ಇಎಸ್ಐ ಸೌಲಭ್ಯ ಬಳಸಿಕೊಂಡು ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದಿದ್ದರು. ಆನಂತರ, ಖಾಸಗಿ ವೈದ್ಯರು ಬರೆದುಕೊಟ್ಟಿದ್ದ ಔಷಧಿ ಚೀಟಿಯಲ್ಲಿದ್ದ ಔಷಧಿಗಳು ಇಎಸ್ಐ ಡಿಸ್ಪೆನ್ಸರಿ ಘಟಕದಲ್ಲಿ ಸಿಕ್ಕಿರಲಿಲ್ಲ. ಹಾಗಾಗಿ ಬೇರೆ ಖಾಸಗಿ ಮೆಡಿಕಲ್ ನಿಂದ ಔಷಧಿಯನ್ನು ಪಡೆದುಕೊಂಡಿದ್ದರು.
ಆನಂತರ, ಔಷಧಿಯ ಬಿಲ್ ಮೊತ್ತವನ್ನು ಇಎಸ್ಐ ಡಿಸ್ಪೆನ್ಸರಿ ವಿಭಾಗಕ್ಕೆ ಕೊಟ್ಟು ಅಲ್ಲಿಂದ ಹಣವನ್ನು ಇಎಸ್ಐ ಸೌಲಭ್ಯ ಹೊಂದಿದ್ದ ಮಹಿಳೆಯ ಬ್ಯಾಂಕ್ ಖಾತೆಗೆ ವರ್ಗಾವಣೆ ಮಾಡಬೇಕಿತ್ತು. ಆದರೆ, ಬಿಲ್ ಮೊತ್ತವನ್ನು ಪಾವತಿ ಮಾಡಬೇಕಿದ್ದಲ್ಲಿ ಎರಡು ಸಾವಿರ ರೂಪಾಯಿ ಲಂಚ ನೀಡುವಂತೆ ಅಲ್ಲಿನ ಅಧಿಕಾರಿ ಕೇಳಿದ್ದರು. ಈ ಬಗ್ಗೆ ಪ್ರಶಾಂತ್ ಕುಮಾರ್ ಎಸಿಬಿಗೆ ದೂರು ನೀಡಿದ್ದು, ಶನಿವಾರ ಮಧ್ಯಾಹ್ನ ಪೊಲೀಸರ ಸೂಚನೆಯಂತೆ ಹಣವನ್ನು ನೀಡುತ್ತಿದ್ದಾಗಲೇ ದಾಳಿ ನಡೆಸಿದ್ದಾರೆ. ಡಿವೈಎಸ್ಪಿ ಕೆ.ಸಿ.ಪ್ರಕಾಶ್, ಇನ್ಸ್ ಪೆಕ್ಟರ್ ಶ್ಯಾಮಸುಂದರ್ ನೇತೃತ್ವದಲ್ಲಿ ದಾಳಿ ನಡೆಸಿದ್ದು, ಆರೋಪಿಯನ್ನು ವಶಕ್ಕೆ ಪಡೆದು ಬಂಧಿಸಿದ್ದಾರೆ.
Sleuths of the Anti-Corruption Bureau (ACB) apprehended a staff of ESI Hospital in Panambur accepting a bribe for releasing money to a patient.
The arrested has been identified as Vishnumurthi, who works as a senior pharmacist at the ESI Hospital in Panambur.
26-05-26 11:03 pm
HK News Desk
ದೈವಕ್ಕೆ ಅಪಮಾನ; ಮೈಸೂರಿನ ಚಾಮುಂಡೇಶ್ವರಿ ಬೆಟ್ಟಕ್ಕೆ...
26-05-26 08:51 pm
ಬರೆದಿಟ್ಕೊಳ್ಳಿ , ಮುಂದೇನೂ ನಮ್ದೇ ಸರ್ಕಾರ ಇರ್ತದೆ ;...
25-05-26 09:38 pm
Student Suicide: ನೀಟ್ ಪರೀಕ್ಷೆ ಪಜೀತಿ ; ಪಿಯುಸಿಯ...
24-05-26 09:03 pm
ಕಪ್ಪೆಚಿಪ್ಪು ತೆಗೆಯಲು ನದಿಗಿಳಿದಿದ್ದ ಏಳು ಮಹಿಳೆಯರು...
24-05-26 05:36 pm
26-05-26 12:54 pm
HK News Staffer
ಗೃಹಲಕ್ಷ್ಮಿ ಪಡೆಯಲು ಬಯೋಮೆಟ್ರಿಕ್ ಕಡ್ಡಾಯ ; ಕೂಡಲೇ...
26-05-26 12:50 pm
ಎಐಎಡಿಎಂಕೆ ಪಕ್ಷದ ಮೂವರು ಶಾಸಕರು ಸ್ಥಾನಕ್ಕೆ ರಾಜಿನಾ...
25-05-26 08:18 pm
ಕಾಕ್ರೋಚ್ ಜನತಾ ಪಾರ್ಟಿ ವಿರುದ್ಧ ಸಿಬಿಐ ತನಿಖೆಗೆ ಸು...
25-05-26 05:29 pm
ಮತ್ತೆ ಇಂಧನ ಶಾಕ್..! 11 ದಿನದಲ್ಲಿ 4ನೇ ಬಾರಿ ಪೆಟ್ರ...
25-05-26 10:19 am
26-05-26 09:02 pm
HK News Staffer
ನೌಕಾಪಡೆ ಸಬ್ ಲೆಫ್ಟಿನೆಂಟ್ ಆಗಿ ನೇಮಕಗೊಂಡ ನಿಶೆಲ್ ಡ...
26-05-26 07:52 pm
ಎಂಆರ್ ಪಿಎಲ್ ಕೋಕ್ ಸಲ್ಫರ್ ಮಾಲಿನ್ಯ ; ಆರು ತಿಂಗಳಲ್...
25-05-26 09:57 pm
‘ಲ್ಯಾಂಡ್ ಲಿಂಕ್ಸ್’ ಸಂಸ್ಥೆಯ ನಾಲ್ಕು ಸಭಾಭವನ ಏಕಕಾ...
25-05-26 04:23 pm
ಅಮೆರಿಕದಲ್ಲಿ ಧರ್ಮಗುರು, ಹುಟ್ಟೂರು ಮಂಗಳೂರಿನಲ್ಲಿ ಸ...
25-05-26 01:08 pm
26-05-26 02:43 pm
HK News Staffer
ಪಿಯುಸಿ ವಿದ್ಯಾರ್ಥಿನಿಯ ಅತ್ಯಾಚಾರ, ಕೊಲೆ ಪ್ರಕರಣ ;...
26-05-26 11:56 am
Tablet Arif Murder: ಟ್ಯಾಬ್ಲೆಟ್ ಆರೀಫ್ ಕೊಲೆ ಪ್ರ...
25-05-26 11:00 pm
ಭಟ್ಕಳದಲ್ಲಿ ಮುರಿದ ಕೋಮು ಸಾಮರಸ್ಯದ ಕಟ್ಟೆ; ರಸ್ತೆ ನ...
25-05-26 09:40 pm
ಮುಸ್ಲಿಂ ಲೀಗ್ ಶಾಸಕನ ಬಗ್ಗೆ ವಾಟ್ಸಾಪ್ ಗ್ರೂಪಿನಲ್ಲಿ...
25-05-26 04:26 pm