ಬ್ರೇಕಿಂಗ್ ನ್ಯೂಸ್
28-09-20 05:20 pm Mangalore Correspondent ಕ್ರೈಂ
ಮಂಗಳೂರು, ಸೆಪ್ಟಂಬರ್ 28: ಲೇಡಿಸ್ ಹಾಸ್ಟೆಲ್ ನುಗ್ಗಿ ಮೆಡಿಕಲ್ ವಿದ್ಯಾರ್ಥಿನಿಯ ಅತ್ಯಾಚಾರ ಗೈದು ದರೋಡೆ ನಡೆಸಿದ ಪ್ರಕರಣದಲ್ಲಿ ಆರೋಪಿಗೆ ಮಂಗಳೂರಿನ ಆರನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಲಯದಿಂದ ಏಳು ವರ್ಷಗಳ ಶಿಕ್ಷೆ ನೀಡಿದೆ.
ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ನ್ಯಾಯಾಧೀಶೆ ಸೈದುನ್ನೀಸಾ ಈ ತೀರ್ಪು ನೀಡಿದ್ದಾರೆ. ಅಪರಾಧಿ ಎಂದು ಪರಿಗಣಿಸಲ್ಪಟ್ಟ ನಾಗೇಶ್ (30) ಗೆ ಏಳು ವರ್ಷಗಳ ಕಠಿಣ ಸಜೆ ಮತ್ತು ದಂಡ ವಿಧಿಸಲಾಗಿದೆ.

2007 ರಲ್ಲಿ ಉಳ್ಳಾಲ ಠಾಣಾ ವ್ಯಾಪ್ತಿಯ ದೇರಳಕಟ್ಠೆಯ ಹಾಸ್ಟೇಲ್ ಒಂದರಲ್ಲಿ ಘಟನೆ ನಡೆದಿತ್ತು. ಕೇರಳ ಮೂಲದ 22 ವರ್ಷದ ಎಂಬಿಬಿಎಸ್ ವಿದ್ಯಾರ್ಥಿನಿ ಸಂತ್ರಸ್ತೆಯಾಗಿದ್ದಳು.
ಮುಂಜಾನೆ 4.30 ರ ಸುಮಾರಿಗೆ ಹಾಸ್ಟೆಲ್ ಹಿಂಭಾಗದ ಪೈಪ್ ಮೂಲಕ ಕೊಠಡಿಗೆ ನುಗ್ಗಿದ್ದ ಆರೋಪಿ, ವಿದ್ಯಾರ್ಥಿನಿಯ ಅತ್ಯಾಚಾರಗೈದು ಕೊಲೆ ಬೆದರಿಕೆಯೊಡ್ಡಿ 5 ಲಕ್ಷ ನಗದು ನೀಡುವಂತೆ ಒತ್ತಾಯಿಸಿದ್ದ. ಬಳಿಕ ವಿದ್ಯಾರ್ಥಿನಿಯ ಪರ್ಸ್ ನಿಂದ ಮೂರು ಸಾವಿರ ನಗದು, ಎಟಿಎಂ ಕಾರ್ಡ್ ಸಹಿತ ಪಿನ್ ನಂಬರ್ ಪಡೆದು ಮತ್ತೊಂದು ಕೊಠಡಿಗೆ ನುಗ್ಗಿ ಇನ್ನೊಬ್ಬಳು ವಿದ್ಯಾರ್ಥಿನಿಯ ಮೊಬೈಲ್ ಎಗರಿಸಿ ಪರಾರಿಯಾಗಿದ್ದ.
ಕೃತ್ಯದ ಬಳಿಕ ಆರೋಪಿ, ನಗರದ ಕಂಕನಾಡಿ ಎಟಿಎಂ ನಲ್ಲಿ ವಿದ್ಯಾರ್ಥಿನಿಯ ಕಾರ್ಡ್ ನಿಂದ ಹಣ ವಿತ್ ಡ್ರಾ ಮಾಡಿದ್ದ ಎಂಬುದು ತನಿಖೆಯಲ್ಲಿ ತಿಳಿದುಬಂದಿತ್ತು. ಬೆರಳಚ್ಚು ಮತ್ತು ಎಟಿಎಂ ಸಿಸಿ ಟಿವಿ ಆಧರಿಸಿ ಅಪರಾಧಿಯ ಪತ್ತೆ ಮಾಡಿದ ಪೊಲೀಸರು ಕೋರ್ಟಿಗೆ ಚಾರ್ಜ್ ಶೀಟ್ ಸಲ್ಲಿಸಿದ್ದರು. ವಿಚಾರಣೆ ನಡೆಸಿದ ನ್ಯಾಯಾಲಯ, ಆರೋಪಿಯ ಕೃತ್ಯ ಸಾಬೀತಾಗಿದ್ದರಿಂದ ಶಿಕ್ಷೆ ಘೋಷಣೆ ಮಾಡಿದೆ.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
27-07-26 08:24 pm
HK News Staffer
ಚಿನ್ನದ ರಿಂಗ್, ಡಾಲರ್ ಸಹಿತ ಬೆಲೆಬಾಳುವ ವಸ್ತುಗಳಿದ್...
26-07-26 09:57 pm
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
27-07-26 07:35 pm
HK News Staffer
ಎಪಿಎಂಸಿ ಕಾರ್ಯದರ್ಶಿ ವಿರುದ್ಧ ಲೈಂಗಿಕ ಕಿರುಕುಳ ಆರೋ...
27-07-26 01:09 pm
ಸಮಾಜ ಸೇವೆಯ ಹೆಸರಲ್ಲಿ ಡ್ರಗ್ಸ್ ದಂಧೆ ; ಜಲೀಲ್ ಬಾಬಾ...
27-07-26 11:47 am
ಡೆಲ್ಲಿ ಟು ಮಂಗಳೂರು ಡ್ರಗ್ ನೆಟ್ವರ್ಕ್ ; ಪೊಲೀಸರ ಕಣ...
26-07-26 04:30 pm
ಶಾಲಾ ಬಸ್ಸಿಗೆ ಮರ ಬಿದ್ದು ಮಗು ಸಾವು ಪ್ರಕರಣ ; ಬಸ್ಸ...
25-07-26 07:36 pm