ಬ್ರೇಕಿಂಗ್ ನ್ಯೂಸ್
28-09-20 05:20 pm Mangalore Correspondent ಕ್ರೈಂ
ಮಂಗಳೂರು, ಸೆಪ್ಟಂಬರ್ 28: ಲೇಡಿಸ್ ಹಾಸ್ಟೆಲ್ ನುಗ್ಗಿ ಮೆಡಿಕಲ್ ವಿದ್ಯಾರ್ಥಿನಿಯ ಅತ್ಯಾಚಾರ ಗೈದು ದರೋಡೆ ನಡೆಸಿದ ಪ್ರಕರಣದಲ್ಲಿ ಆರೋಪಿಗೆ ಮಂಗಳೂರಿನ ಆರನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಲಯದಿಂದ ಏಳು ವರ್ಷಗಳ ಶಿಕ್ಷೆ ನೀಡಿದೆ.
ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ನ್ಯಾಯಾಧೀಶೆ ಸೈದುನ್ನೀಸಾ ಈ ತೀರ್ಪು ನೀಡಿದ್ದಾರೆ. ಅಪರಾಧಿ ಎಂದು ಪರಿಗಣಿಸಲ್ಪಟ್ಟ ನಾಗೇಶ್ (30) ಗೆ ಏಳು ವರ್ಷಗಳ ಕಠಿಣ ಸಜೆ ಮತ್ತು ದಂಡ ವಿಧಿಸಲಾಗಿದೆ.

2007 ರಲ್ಲಿ ಉಳ್ಳಾಲ ಠಾಣಾ ವ್ಯಾಪ್ತಿಯ ದೇರಳಕಟ್ಠೆಯ ಹಾಸ್ಟೇಲ್ ಒಂದರಲ್ಲಿ ಘಟನೆ ನಡೆದಿತ್ತು. ಕೇರಳ ಮೂಲದ 22 ವರ್ಷದ ಎಂಬಿಬಿಎಸ್ ವಿದ್ಯಾರ್ಥಿನಿ ಸಂತ್ರಸ್ತೆಯಾಗಿದ್ದಳು.
ಮುಂಜಾನೆ 4.30 ರ ಸುಮಾರಿಗೆ ಹಾಸ್ಟೆಲ್ ಹಿಂಭಾಗದ ಪೈಪ್ ಮೂಲಕ ಕೊಠಡಿಗೆ ನುಗ್ಗಿದ್ದ ಆರೋಪಿ, ವಿದ್ಯಾರ್ಥಿನಿಯ ಅತ್ಯಾಚಾರಗೈದು ಕೊಲೆ ಬೆದರಿಕೆಯೊಡ್ಡಿ 5 ಲಕ್ಷ ನಗದು ನೀಡುವಂತೆ ಒತ್ತಾಯಿಸಿದ್ದ. ಬಳಿಕ ವಿದ್ಯಾರ್ಥಿನಿಯ ಪರ್ಸ್ ನಿಂದ ಮೂರು ಸಾವಿರ ನಗದು, ಎಟಿಎಂ ಕಾರ್ಡ್ ಸಹಿತ ಪಿನ್ ನಂಬರ್ ಪಡೆದು ಮತ್ತೊಂದು ಕೊಠಡಿಗೆ ನುಗ್ಗಿ ಇನ್ನೊಬ್ಬಳು ವಿದ್ಯಾರ್ಥಿನಿಯ ಮೊಬೈಲ್ ಎಗರಿಸಿ ಪರಾರಿಯಾಗಿದ್ದ.
ಕೃತ್ಯದ ಬಳಿಕ ಆರೋಪಿ, ನಗರದ ಕಂಕನಾಡಿ ಎಟಿಎಂ ನಲ್ಲಿ ವಿದ್ಯಾರ್ಥಿನಿಯ ಕಾರ್ಡ್ ನಿಂದ ಹಣ ವಿತ್ ಡ್ರಾ ಮಾಡಿದ್ದ ಎಂಬುದು ತನಿಖೆಯಲ್ಲಿ ತಿಳಿದುಬಂದಿತ್ತು. ಬೆರಳಚ್ಚು ಮತ್ತು ಎಟಿಎಂ ಸಿಸಿ ಟಿವಿ ಆಧರಿಸಿ ಅಪರಾಧಿಯ ಪತ್ತೆ ಮಾಡಿದ ಪೊಲೀಸರು ಕೋರ್ಟಿಗೆ ಚಾರ್ಜ್ ಶೀಟ್ ಸಲ್ಲಿಸಿದ್ದರು. ವಿಚಾರಣೆ ನಡೆಸಿದ ನ್ಯಾಯಾಲಯ, ಆರೋಪಿಯ ಕೃತ್ಯ ಸಾಬೀತಾಗಿದ್ದರಿಂದ ಶಿಕ್ಷೆ ಘೋಷಣೆ ಮಾಡಿದೆ.
17-02-26 10:33 pm
HK News Desk
Mohan Das Pai: ಕೋಮುವಾದದಿಂದ ಮಂಗಳೂರಿಗೆ ಹೂಡಿಕೆದಾ...
17-02-26 09:12 pm
ಫೇಲಾದವರನ್ನು ಪಾಸು ಮಾಡುವುದೇ ತಪ್ಪು ; ಕೇರಳದಲ್ಲಿ ಶ...
17-02-26 08:56 pm
ಕಾಪಿರೈಟ್ ಕದನದಲ್ಲಿ ಖ್ಯಾತ ಸಂಗೀತ ನಿರ್ದೇಶಕ ಇಳಯರಾಜ...
17-02-26 02:53 pm
ದಂಪತಿಗೆ ಎರಡನೇ ಪ್ರೆಗ್ನೆನ್ಸಿ ಫೋಟೋಶೂಟ್ ಸಡಗರ ; ಮೂ...
15-02-26 10:38 pm
17-02-26 08:50 pm
HK Desk
ಸೋಶಿಯಲ್ ಮೀಡಿಯಾ ಸ್ಟಾರ್ ಚಿನ್ನು ಪಾಪು ಸಾವಿನ ಬೆನ್ನ...
16-02-26 12:53 pm
ಮಗನಿಲ್ಲದ ಮೇಲೆ ದುಬಾರಿ ಕಾರು ಯಾಕೆ ? ಆತನ ಸಮಾಧಿ ಪಕ...
15-02-26 04:01 pm
ಖಲಿಸ್ತಾನಿ ಉಗ್ರನ ಹತ್ಯೆಗೆ ಸಂಚು ; ತಪ್ಪೊಪ್ಪಿಕೊಂಡ...
14-02-26 10:55 pm
ಬಾಂಗ್ಲಾದಲ್ಲಿ ಚುನಾವಣೆ ; ಒಂದು ಸ್ಥಾನ ಗೆದ್ದ ಬಿಜೆಪ...
14-02-26 08:13 pm
18-02-26 11:19 am
Mangaluru Staffer
Parameshwara in Mangalore: ಶಾಸಕರು ವಿದೇಶಕ್ಕೆ ತ...
17-02-26 12:42 pm
Mangalore Ullal Accident: ಉಳ್ಳಾಲ ; ಅತಿ ವೇಗದಿಂ...
16-02-26 11:13 pm
ಬಿಕರ್ನಕಟ್ಟೆ ಸರ್ಕಾರಿ ಶಾಲೆಯಲ್ಲಿ ರಂಗಮಂಟಪ ಲೋಕಾರ್ಪ...
16-02-26 11:06 pm
ಹಂಪಿಯ ಮರ್ಯಾದೆ ಹರಾಜು ಹಾಕಿದ್ದ ಪ್ರಕರಣ ; ಪ್ರವಾಸಿ...
16-02-26 11:02 pm
18-02-26 01:52 pm
Udupi Staffer
ಬೆಚ್ಚಿಬೀಳಿಸಿದ ಎಂಬಿಎ ವಿದ್ಯಾರ್ಥಿನಿ ಹತ್ಯೆ ಪ್ರಕರಣ...
17-02-26 03:03 pm
ದಾವಣಗೆರೆ ಬೆನ್ನಲ್ಲೇ ಮಂಗಳೂರು ಕೋರ್ಟಿಗೂ ಬೆದರಿಕೆ ಸ...
16-02-26 04:01 pm
Manish kottary, Marriage Fraud, Mangalore: ಮ್...
15-02-26 05:08 pm
ಪ್ರೇಮಿಗಳ ದಿನವೇ ದುರಂತ ಅಂತ್ಯ ಕಂಡ ಜೋಡಿ ; ಪ್ರೀತಿಗ...
14-02-26 10:47 pm