ಬ್ರೇಕಿಂಗ್ ನ್ಯೂಸ್
28-09-20 05:20 pm Mangalore Correspondent ಕ್ರೈಂ
ಮಂಗಳೂರು, ಸೆಪ್ಟಂಬರ್ 28: ಲೇಡಿಸ್ ಹಾಸ್ಟೆಲ್ ನುಗ್ಗಿ ಮೆಡಿಕಲ್ ವಿದ್ಯಾರ್ಥಿನಿಯ ಅತ್ಯಾಚಾರ ಗೈದು ದರೋಡೆ ನಡೆಸಿದ ಪ್ರಕರಣದಲ್ಲಿ ಆರೋಪಿಗೆ ಮಂಗಳೂರಿನ ಆರನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಲಯದಿಂದ ಏಳು ವರ್ಷಗಳ ಶಿಕ್ಷೆ ನೀಡಿದೆ.
ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ನ್ಯಾಯಾಧೀಶೆ ಸೈದುನ್ನೀಸಾ ಈ ತೀರ್ಪು ನೀಡಿದ್ದಾರೆ. ಅಪರಾಧಿ ಎಂದು ಪರಿಗಣಿಸಲ್ಪಟ್ಟ ನಾಗೇಶ್ (30) ಗೆ ಏಳು ವರ್ಷಗಳ ಕಠಿಣ ಸಜೆ ಮತ್ತು ದಂಡ ವಿಧಿಸಲಾಗಿದೆ.

2007 ರಲ್ಲಿ ಉಳ್ಳಾಲ ಠಾಣಾ ವ್ಯಾಪ್ತಿಯ ದೇರಳಕಟ್ಠೆಯ ಹಾಸ್ಟೇಲ್ ಒಂದರಲ್ಲಿ ಘಟನೆ ನಡೆದಿತ್ತು. ಕೇರಳ ಮೂಲದ 22 ವರ್ಷದ ಎಂಬಿಬಿಎಸ್ ವಿದ್ಯಾರ್ಥಿನಿ ಸಂತ್ರಸ್ತೆಯಾಗಿದ್ದಳು.
ಮುಂಜಾನೆ 4.30 ರ ಸುಮಾರಿಗೆ ಹಾಸ್ಟೆಲ್ ಹಿಂಭಾಗದ ಪೈಪ್ ಮೂಲಕ ಕೊಠಡಿಗೆ ನುಗ್ಗಿದ್ದ ಆರೋಪಿ, ವಿದ್ಯಾರ್ಥಿನಿಯ ಅತ್ಯಾಚಾರಗೈದು ಕೊಲೆ ಬೆದರಿಕೆಯೊಡ್ಡಿ 5 ಲಕ್ಷ ನಗದು ನೀಡುವಂತೆ ಒತ್ತಾಯಿಸಿದ್ದ. ಬಳಿಕ ವಿದ್ಯಾರ್ಥಿನಿಯ ಪರ್ಸ್ ನಿಂದ ಮೂರು ಸಾವಿರ ನಗದು, ಎಟಿಎಂ ಕಾರ್ಡ್ ಸಹಿತ ಪಿನ್ ನಂಬರ್ ಪಡೆದು ಮತ್ತೊಂದು ಕೊಠಡಿಗೆ ನುಗ್ಗಿ ಇನ್ನೊಬ್ಬಳು ವಿದ್ಯಾರ್ಥಿನಿಯ ಮೊಬೈಲ್ ಎಗರಿಸಿ ಪರಾರಿಯಾಗಿದ್ದ.
ಕೃತ್ಯದ ಬಳಿಕ ಆರೋಪಿ, ನಗರದ ಕಂಕನಾಡಿ ಎಟಿಎಂ ನಲ್ಲಿ ವಿದ್ಯಾರ್ಥಿನಿಯ ಕಾರ್ಡ್ ನಿಂದ ಹಣ ವಿತ್ ಡ್ರಾ ಮಾಡಿದ್ದ ಎಂಬುದು ತನಿಖೆಯಲ್ಲಿ ತಿಳಿದುಬಂದಿತ್ತು. ಬೆರಳಚ್ಚು ಮತ್ತು ಎಟಿಎಂ ಸಿಸಿ ಟಿವಿ ಆಧರಿಸಿ ಅಪರಾಧಿಯ ಪತ್ತೆ ಮಾಡಿದ ಪೊಲೀಸರು ಕೋರ್ಟಿಗೆ ಚಾರ್ಜ್ ಶೀಟ್ ಸಲ್ಲಿಸಿದ್ದರು. ವಿಚಾರಣೆ ನಡೆಸಿದ ನ್ಯಾಯಾಲಯ, ಆರೋಪಿಯ ಕೃತ್ಯ ಸಾಬೀತಾಗಿದ್ದರಿಂದ ಶಿಕ್ಷೆ ಘೋಷಣೆ ಮಾಡಿದೆ.
24-06-26 05:55 pm
HK News Staffer
ಅಡ್ಡ ಮತದಾನ ; ರಾಜ್ಯ ನಾಯಕತ್ವದ ನಿರ್ಲಕ್ಷ್ಯವೇ ಕಾರಣ...
23-06-26 05:58 pm
ಅಡ್ಡ ಮತದಾನ; ಧರ್ಮಸ್ಥಳದಲ್ಲಿ ಶಾಸಕರು ಬಂದು ಆಣೆ ಮಾಡ...
22-06-26 08:18 pm
ವಿಧಾನ ಪರಿಷತ್ ಚುನಾವಣೆಗೂ ಮುನ್ನ ರಹಸ್ಯ ಸಭೆ ; ಬಿಜೆ...
22-06-26 03:44 pm
ಆಸ್ಪತ್ರೆ ಸಿಬ್ಬಂದಿ ಸ್ಪಂದಿಸದಿದ್ದರೆ ಚಿಂತೆ ಬೇಡ ;...
22-06-26 12:51 pm
24-06-26 01:51 pm
HK News Staffer
ಮಾಹಿತಿ ಹಕ್ಕು ನಿಯಮಗಳಿಗೆ ಮಹಾರಾಷ್ಟ್ರ ಸರ್ಕಾರ ತಿದ್...
23-06-26 10:47 pm
ಟಿಎಂಸಿಯಲ್ಲಿ ರಾಜಕೀಯ ಭೂಕಂಪ ; ಮಮತಾ ಬ್ಯಾನರ್ಜಿ ಅಧ...
23-06-26 12:21 pm
ಕತಾರ್ ಕೈಗಾರಿಕಾ ಪ್ರದೇಶದಲ್ಲಿ ಭಾರೀ ಸ್ಫೋಟ ; 54 ಜನ...
22-06-26 12:55 pm
ಮರಳು ಮಾಫಿಯಾ ಅಟ್ಟಹಾಸಕ್ಕೆ ಬಿಜೆಪಿ ನಾಯಕ ಸಜೀವ ದಹನ;...
18-06-26 07:17 pm
23-06-26 06:02 pm
HK News Staffer
ಬಸ್ ಚಲಿಸುತ್ತಿದ್ದಾಗಲೇ ಬಿಪಿ ಲೋ ಆಗಿ ಕುಸಿದ ಚಾಲಕ !...
23-06-26 03:18 pm
ಮುಸ್ಲಿಮರಿಗೆ ಸಚಿವ ಸ್ಥಾನ ; ಕಾಂಗ್ರೆಸಿಗೆ ಓಟ್ ಹಾಕದ...
23-06-26 11:49 am
ಉಡುಪಿ ಕೋರ್ಟ್ಗೆ ಇ-ಮೇಲ್ ಮೂಲಕ ಬಾಂಬ್ ಬೆದರಿಕೆ; ಕೆ...
22-06-26 05:23 pm
Dr Kakkillaya News: ಕೊರಾನಾ ಮಾಸ್ಕ್ ಹಾಕಿಲ್ಲವೆಂದ...
21-06-26 08:59 pm
24-06-26 09:28 pm
HK News Desk
30 ಲಕ್ಷ ಸಾಲ, ಲಿವ್-ಇನ್ ಸಂಬಂಧಕ್ಕೆ ಪೋಷಕರ ವಿರೋಧ ;...
24-06-26 08:53 pm
ರಾಮ ಮಂದಿರವನ್ನ ಸ್ಫೋಟಿಸಲು ಪ್ಲಾನ್ ಮಾಡಿದ್ವಿ ! ;...
24-06-26 07:53 pm
ಅಯೋಧ್ಯೆ ರಾಮ ಮಂದಿರ ಹೆಸರಲ್ಲಿ ದೇಣಿಗೆ ; 200 ಕೋಟಿ...
24-06-26 05:57 pm
Mangalore Minor student Suicide: ಅಪ್ರಾಪ್ತೆಗೆ...
24-06-26 02:25 pm