ಬ್ರೇಕಿಂಗ್ ನ್ಯೂಸ್
08-06-22 11:20 am HK News Desk ಕ್ರೈಂ
ಲಕ್ನೋ, ಜೂನ್ 8: ಉತ್ತರ ಪ್ರದೇಶ ಮತ್ತು ಕರ್ನಾಟಕದ ಆರೆಸ್ಸೆಸ್ ಕಚೇರಿಗಳ ಮೇಲೆ ಬಾಂಬ್ ದಾಳಿ ನಡೆಸುವುದಾಗಿ ವಾಟ್ಸಪ್ ಮೆಸೇಜ್ ಕಳಿಸಿ, ಬೆದರಿಕೆ ಒಡ್ಡಿದ ಪ್ರಕರಣದಲ್ಲಿ ಉತ್ತರ ಪ್ರದೇಶದ ಎಟಿಎಸ್ ಪೊಲೀಸರು ತಮಿಳುನಾಡಿನಲ್ಲಿ ಆರೋಪಿಯನ್ನು ಬಂಧಿಸಿದ್ದಾರೆ.
ತಮಿಳುನಾಡಿನ ಪುದುಕೋಟೈ ಜಿಲ್ಲೆಯ ನಿವಾಸಿ ರಾಜ್ ಮೊಹಮ್ಮದ್ ಬಂಧಿತ ವ್ಯಕ್ತಿಯಾಗಿದ್ದು, ಉತ್ತರ ಪ್ರದೇಶ ಎಟಿಎಸ್ ಪೊಲೀಸರ ಸೂಚನೆಯಂತೆ ತಮಿಳುನಾಡು ಪೊಲೀಸರು ಬಂಧಿಸಿದ್ದಾರೆ. ಬಂಧಿತನನ್ನು ಉತ್ತರ ಪ್ರದೇಶ ಪೊಲೀಸರು ಟ್ರಾನ್ಸಿಟ್ ರಿಮ್ಯಾಂಡ್ ಪಡೆದು ತನಿಖೆಗೆ ಕರೆದೊಯ್ಯಲಿದ್ದಾರೆ. ವಾಟ್ಸಪ್ ಮೆಸೇಜ್ ಮೂಲಕ ಉತ್ತರ ಪ್ರದೇಶದಲ್ಲಿ ಎರಡು ಮತ್ತು ಕರ್ನಾಟಕದ ನಾಲ್ಕು ಕಡೆ ಆರೆಸ್ಸೆಸ್ ಕಚೇರಿಗಳನ್ನು ಸ್ಫೋಟಿಸುವುದಾಗಿ ಯುಪಿಯಲ್ಲಿರುವ ಕಚೇರಿಯೊಂದಕ್ಕೆ ಮೆಸೇಜ್ ರವಾನಿಸಿದ್ದ. ವಾಟ್ಸಪ್ ನಂಬರ್ ಆಧರಿಸಿ ಬೆನ್ನತ್ತಿದ ಪೊಲೀಸರು ಆರೋಪಿಯನ್ನು ತಮಿಳುನಾಡಿನಲ್ಲಿ ಸೆರೆ ಹಿಡಿದಿದ್ದಾರೆ.
ಉತ್ತರ ಪ್ರದೇಶದ ಲಕ್ನೋ ಮತ್ತು ಉನ್ನಾವೋದಲ್ಲಿನ ಆರೆಸ್ಸೆಸ್ ಕಚೇರಿ ಬ್ಲಾಸ್ಟ್ ಮಾಡುವುದಾಗಿ ಸಂದೇಶದಲ್ಲಿ ಉಲ್ಲೇಖ ಇತ್ತು. ಈ ಬಗ್ಗೆ ಲಕ್ನೋ ನಗರದ ಮಡಿಯಾಂವ್ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿತ್ತು. ಆರೆಸ್ಸೆಸ್ ಕಾರ್ಯಕರ್ತ ನೀಲಕಂಠ ತಿವಾರಿ ಎಂಬವರ ಮೊಬೈಲಿಗೆ ಹಿಂದಿ, ಇಂಗ್ಲಿಷ್ ಮತ್ತು ಕನ್ನಡದಲ್ಲಿ ಈ ಮೆಸೇಜ್ ಬಂದಿತ್ತು. ಅಂತಾರಾಷ್ಟ್ರೀಯ ಮೊಬೈಲ್ ಸಂಖ್ಯೆಯಿಂದ ಜೂನ್ 6ರಂದು ರಾತ್ರಿ 8 ಗಂಟೆಗೆ ಮೆಸೇಜ್ ಬಂದಿದ್ದು ಸೈಬರ್ ಸೆಲ್ ಪೊಲೀಸರು ಅದರ ಜಾಡು ಹಿಡಿದು ಒಂದೇ ದಿನದಲ್ಲಿ ಒಬ್ಬ ಆರೋಪಿಯನ್ನು ಬಂಧಿಸಿದ್ದಾರೆ.
ಬೆದರಿಕೆ ಹಿನ್ನೆಲೆಯಲ್ಲಿ ಉತ್ತರ ಪ್ರದೇಶ, ಕರ್ನಾಟಕ ಸೇರಿದಂತೆ ವಿವಿಧ ಕಡೆಗಳಲ್ಲಿ ಆರೆಸ್ಸೆಸ್ ಕಚೇರಿಗಳಿಗೆ ಪೊಲೀಸ್ ಭದ್ರತೆ ಒದಗಿಸಲಾಗಿತ್ತು.
The Tamil Nadu police have nabbed a man named Raj Mohammed who had, on Monday, June 6, reportedly sent Whatapp messages threatening to blow up 6 RSS offices including two in Uttar Pradesh and 4 offices in Karnataka. Mohammad, a resident of the Pudukodi district of Tamil Nadu, was arrested by the state police based on the information provided by the Uttar Pradesh ATS. The UP ATS team will now be bringing the suspect to Lucknow on transit remand.
14-05-25 05:16 pm
Bangalore Correspondent
Hassan Kidnap: ಅಪ್ಪನ ಎದುರೇ ಮಗಳ ಅಪಹರಣ ; ಬೇಲೂರಿ...
13-05-25 09:50 pm
Davangere Accident, police constable death: ಲ...
13-05-25 09:37 pm
ಅರ್ಧದಲ್ಲಿ ಕದನ ನಿಲ್ಲಿಸಿದ್ದು ಯಾಕೆ? ಇಷ್ಟಕ್ಕೆ ನಮ್...
13-05-25 01:14 pm
Dr Subbanna Ayyappan Dead, Mandya: ಪದ್ಮಶ್ರೀ ಪ...
11-05-25 01:21 pm
14-05-25 11:08 pm
HK News Desk
Masood Azhar; ಐಎಂಎಫ್ ಸಾಲದ ಹಣವನ್ನೂ ಉಗ್ರರಿಗೆ ಹಂ...
14-05-25 11:08 pm
ಪಾಕ್ ವಶದಲ್ಲಿದ್ದ ಬಿಎಸ್ಎಫ್ ಯೋಧ ಕೊನೆಗೂ ಬಿಡುಗಡೆ ;...
14-05-25 07:33 pm
ಆಪರೇಷನ್ ಸಿಂಧೂರ ಬಗ್ಗೆ ಹೇಳಿಕೆ, ದೇಶವಿರೋಧಿ ಪೋಸ್ಟ್...
14-05-25 04:45 pm
ಆದಂಪುರ ವಾಯುನೆಲೆ ಧ್ವಂಸ ಮಾಡಿದ್ದೇವೆಂದ ಪಾಕಿಗಳಿಗೆ...
13-05-25 08:47 pm
14-05-25 08:05 pm
Mangalore Correspondent
Lokayuta, Arrest, Bantwal, Mangalore: ಗಂಡನ ಪಿ...
14-05-25 06:33 pm
Harish Injadi, President of Kukke Subrahmanya...
14-05-25 01:42 pm
Agumbe, Accident, Yakshagana: ಆಗುಂಬೆ ; ಭಾರೀ ಮ...
14-05-25 01:28 pm
ಪ್ರಧಾನಿ ಮೋದಿ ಆದಂಪುರ ವಾಯುನೆಲೆಗೆ ದಿಢೀರ್ ಭೇಟಿ ;...
13-05-25 10:33 pm
14-05-25 10:22 pm
HK News Desk
Suhas Shetty Murder, Arrest, CCB Police: ಸುಹಾ...
14-05-25 09:23 pm
Hubballi Schoolboy Murder, Crime, Minor: ಹುಬ್...
13-05-25 07:55 pm
Abdul Rauf Azhar; ಕಂದಹಾರ್ ವಿಮಾನ ಹೈಜಾಕ್ ಮಾಸ್ಟರ...
08-05-25 05:32 pm
Mangalore Suhas Shetty Murder, Eight Arrested...
03-05-25 02:16 pm