ಬ್ರೇಕಿಂಗ್ ನ್ಯೂಸ್
08-06-22 11:20 am HK News Desk ಕ್ರೈಂ
ಲಕ್ನೋ, ಜೂನ್ 8: ಉತ್ತರ ಪ್ರದೇಶ ಮತ್ತು ಕರ್ನಾಟಕದ ಆರೆಸ್ಸೆಸ್ ಕಚೇರಿಗಳ ಮೇಲೆ ಬಾಂಬ್ ದಾಳಿ ನಡೆಸುವುದಾಗಿ ವಾಟ್ಸಪ್ ಮೆಸೇಜ್ ಕಳಿಸಿ, ಬೆದರಿಕೆ ಒಡ್ಡಿದ ಪ್ರಕರಣದಲ್ಲಿ ಉತ್ತರ ಪ್ರದೇಶದ ಎಟಿಎಸ್ ಪೊಲೀಸರು ತಮಿಳುನಾಡಿನಲ್ಲಿ ಆರೋಪಿಯನ್ನು ಬಂಧಿಸಿದ್ದಾರೆ.
ತಮಿಳುನಾಡಿನ ಪುದುಕೋಟೈ ಜಿಲ್ಲೆಯ ನಿವಾಸಿ ರಾಜ್ ಮೊಹಮ್ಮದ್ ಬಂಧಿತ ವ್ಯಕ್ತಿಯಾಗಿದ್ದು, ಉತ್ತರ ಪ್ರದೇಶ ಎಟಿಎಸ್ ಪೊಲೀಸರ ಸೂಚನೆಯಂತೆ ತಮಿಳುನಾಡು ಪೊಲೀಸರು ಬಂಧಿಸಿದ್ದಾರೆ. ಬಂಧಿತನನ್ನು ಉತ್ತರ ಪ್ರದೇಶ ಪೊಲೀಸರು ಟ್ರಾನ್ಸಿಟ್ ರಿಮ್ಯಾಂಡ್ ಪಡೆದು ತನಿಖೆಗೆ ಕರೆದೊಯ್ಯಲಿದ್ದಾರೆ. ವಾಟ್ಸಪ್ ಮೆಸೇಜ್ ಮೂಲಕ ಉತ್ತರ ಪ್ರದೇಶದಲ್ಲಿ ಎರಡು ಮತ್ತು ಕರ್ನಾಟಕದ ನಾಲ್ಕು ಕಡೆ ಆರೆಸ್ಸೆಸ್ ಕಚೇರಿಗಳನ್ನು ಸ್ಫೋಟಿಸುವುದಾಗಿ ಯುಪಿಯಲ್ಲಿರುವ ಕಚೇರಿಯೊಂದಕ್ಕೆ ಮೆಸೇಜ್ ರವಾನಿಸಿದ್ದ. ವಾಟ್ಸಪ್ ನಂಬರ್ ಆಧರಿಸಿ ಬೆನ್ನತ್ತಿದ ಪೊಲೀಸರು ಆರೋಪಿಯನ್ನು ತಮಿಳುನಾಡಿನಲ್ಲಿ ಸೆರೆ ಹಿಡಿದಿದ್ದಾರೆ.
ಉತ್ತರ ಪ್ರದೇಶದ ಲಕ್ನೋ ಮತ್ತು ಉನ್ನಾವೋದಲ್ಲಿನ ಆರೆಸ್ಸೆಸ್ ಕಚೇರಿ ಬ್ಲಾಸ್ಟ್ ಮಾಡುವುದಾಗಿ ಸಂದೇಶದಲ್ಲಿ ಉಲ್ಲೇಖ ಇತ್ತು. ಈ ಬಗ್ಗೆ ಲಕ್ನೋ ನಗರದ ಮಡಿಯಾಂವ್ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿತ್ತು. ಆರೆಸ್ಸೆಸ್ ಕಾರ್ಯಕರ್ತ ನೀಲಕಂಠ ತಿವಾರಿ ಎಂಬವರ ಮೊಬೈಲಿಗೆ ಹಿಂದಿ, ಇಂಗ್ಲಿಷ್ ಮತ್ತು ಕನ್ನಡದಲ್ಲಿ ಈ ಮೆಸೇಜ್ ಬಂದಿತ್ತು. ಅಂತಾರಾಷ್ಟ್ರೀಯ ಮೊಬೈಲ್ ಸಂಖ್ಯೆಯಿಂದ ಜೂನ್ 6ರಂದು ರಾತ್ರಿ 8 ಗಂಟೆಗೆ ಮೆಸೇಜ್ ಬಂದಿದ್ದು ಸೈಬರ್ ಸೆಲ್ ಪೊಲೀಸರು ಅದರ ಜಾಡು ಹಿಡಿದು ಒಂದೇ ದಿನದಲ್ಲಿ ಒಬ್ಬ ಆರೋಪಿಯನ್ನು ಬಂಧಿಸಿದ್ದಾರೆ.
ಬೆದರಿಕೆ ಹಿನ್ನೆಲೆಯಲ್ಲಿ ಉತ್ತರ ಪ್ರದೇಶ, ಕರ್ನಾಟಕ ಸೇರಿದಂತೆ ವಿವಿಧ ಕಡೆಗಳಲ್ಲಿ ಆರೆಸ್ಸೆಸ್ ಕಚೇರಿಗಳಿಗೆ ಪೊಲೀಸ್ ಭದ್ರತೆ ಒದಗಿಸಲಾಗಿತ್ತು.
The Tamil Nadu police have nabbed a man named Raj Mohammed who had, on Monday, June 6, reportedly sent Whatapp messages threatening to blow up 6 RSS offices including two in Uttar Pradesh and 4 offices in Karnataka. Mohammad, a resident of the Pudukodi district of Tamil Nadu, was arrested by the state police based on the information provided by the Uttar Pradesh ATS. The UP ATS team will now be bringing the suspect to Lucknow on transit remand.
17-12-25 10:30 pm
HK News Desk
ಯಶವಂತಪುರ - ಕಾರವಾರ ಗೋಮಟೇಶ್ವರ ಎಕ್ಸ್ ಪ್ರೆಸ್ ರೈಲು...
17-12-25 12:45 pm
ಶೃಂಗೇರಿ ; ಬಿಕಾಂ ಓದುತ್ತಿದ್ದ ವಿದ್ಯಾರ್ಥಿನಿ ಹಠಾತ್...
17-12-25 12:42 pm
ಶಿವಮೊಗ್ಗ, ಧಾರವಾಡ ಸೇರಿ ಹಲವೆಡೆ ಲೋಕಾಯುಕ್ತ ದಾಳಿ ;...
16-12-25 03:08 pm
ಮಂಗಳೂರು ಬೆನ್ನಲ್ಲೇ ತುಮಕೂರು ಜಿಲ್ಲಾಧಿಕಾರಿ ಕಚೇರಿಗ...
16-12-25 12:57 pm
17-12-25 10:27 pm
HK News Desk
ಆಸ್ಟ್ರೇಲಿಯಾ ಬೋಂಡಿ ಬೀಚ್ ದಾಳಿ ; ಹೈದ್ರಾಬಾದ್ ಮೂಲದ...
17-12-25 01:38 pm
ಯುಕೆಯ ಮಿಡ್ಲಾಂಡ್ಸ್ ನಲ್ಲಿ ಕನ್ನಡ ರಾಜ್ಯೋತ್ಸವ ; ಬರ...
16-12-25 06:33 pm
ಭಟ್ಕಳ ತಹಸೀಲ್ದಾರ್ ಕಚೇರಿಗೂ ಸ್ಫೋಟದ ಬೆದರಿಕೆ ; ತಮಿ...
16-12-25 01:56 pm
ಪಾಕಿಸ್ತಾನದ ಎರಡು ವಿವಿಗಳಲ್ಲಿ ಸಂಸ್ಕೃತ ಕಲಿಯಲು ಕೋರ...
15-12-25 08:12 pm
17-12-25 08:54 pm
Mangalore Correspondent
New year 2026, Mangalore Rules: ಹೊಸ ವರ್ಷಾಚರಣೆ...
17-12-25 08:19 pm
Udupi, Baby death: ಉಡುಪಿ ; ತಾಯಿ ಕೈಯಿಂದ ಜಾರಿ ಬ...
17-12-25 05:23 pm
Mangalore Jail, Fight, Ccb Police: ಮಂಗಳೂರು ಜೈ...
17-12-25 05:05 pm
Mangalore Landslide, Death: ಗುಡ್ಡ ಕುಸಿದು ಕಾರ್...
16-12-25 10:25 pm
17-12-25 11:14 am
Bangalore Correspondent
ಕದ್ರಿಯಲ್ಲಿ ಬೈಕ್ ಕದ್ದು ಭಟ್ಕಳದಲ್ಲಿ ಮಹಿಳೆಯ ಸರ ಕಸ...
16-12-25 10:35 pm
Mangalore Crime, Robbery, Mukka: 'ಬಂಗಾರ್ ಒಲ್ಪ...
15-12-25 10:26 pm
Udupi Murder, Brahmavar, Update: ಕುಡಿದ ಮತ್ತಿನ...
15-12-25 05:37 pm
Brahmavar Murder, Udupi Crime: ಎಣ್ಣೆ ಪಾರ್ಟಿಯಲ...
15-12-25 12:19 pm