ಬ್ರೇಕಿಂಗ್ ನ್ಯೂಸ್
08-06-22 10:33 pm Bengalore Correspondent ಕ್ರೈಂ
ಬೆಂಗಳೂರು, ಜೂನ್ 8 : ಕಿಡ್ನ್ಯಾಪ್ ಆಗಿದ್ದ ಮಗುವನ್ನು ಕೆಲವೇ ಗಂಟೆಗಳಲ್ಲಿ ಬೆಂಗಳೂರಿನ ಹೆಣ್ಣೂರು ಠಾಣೆ ಪೊಲೀಸರು ಮಿಂಚಿನ ಕಾರ್ಯಾಚರಣೆ ನಡೆಸಿ ರಕ್ಷಣೆ ಮಾಡಿದ್ದಾರೆ.
ಜೂನ್ 7 ರಂದು ಸಂಜೆ ವೇಳೆಗೆ 11 ವರ್ಷದ ಮಗು ಹೆಣ್ಣೂರಿನಲ್ಲಿ ಕಿಡ್ನ್ಯಾಪ್ ಆಗಿತ್ತು. ಕಿಡ್ನಾಪ್ ಆಗಿದ್ದ ಮಗು ಹೊರಮಾವು ನಿವಾಸಿಯಾಗಿರುವ ಬಿಎಂಟಿಸಿ ಚಾಲಕ ಸುಭಾಷ್ ಎಂಬುವವರ ಪುತ್ರನಾಗಿದ್ದು ಅಪಹರಣಕಾರರು 50 ಲಕ್ಷ ಬೇಡಿಕೆ ಇಟ್ಟಿದ್ದರು.
ಆರೋಪಿಗಳು ಕರೆ ಮಾಡಿ ಸುಮಾರು 50 ಲಕ್ಷ ರೂ. ಹಣಕ್ಕೆ ಬೇಡಿಕೆ ಇಟ್ಟಿದ್ದರಿಂದ ಪೋಷಕರು ರಾತ್ರಿ 9 ಗಂಟೆ ಹೊತ್ತಿಗೆ ಪೊಲೀಸ್ ಠಾಣೆಗೆ ಬಂದು ದೂರು ನೀಡಿದ್ದರು. ದೂರು ದಾಖಲಿಸಿಕೊಂಡಿದ್ದ ಪೊಲೀಸರು ನಂಬರ್ ಟ್ರೇಸ್ ಮಾಡಿದ್ದರು.
ಹಣಕ್ಕೆ ಬೇಡಿಕೆ ಇಟ್ಟಿದ್ದ ಆರೋಪಿಗಳ ಫೋನ್ ನಂಬರ್ ಹೆಣ್ಣೂರು ಠಾಣೆ ಪೊಲೀಸರು ತಕ್ಷಣ ಟ್ರೇಸ್ ಮಾಡಿದ್ದಾರೆ. ಈ ವೇಳೆ ಜಿಗಣಿ ಬಳಿ ಫಾರ್ಮ್ಹೌಸ್ನಲ್ಲಿ ಮಗು ಜತೆ ಆರೋಪಿಗಳು ಇದ್ದರು. ಸಿನಿಮೀಯ ರೀತಿ ಕಾಂಪೌಂಡ್ ಹಾರಿ ಒಳನುಗ್ಗಿ ಮಗುವನ್ನು ರಕ್ಷಣೆ ಮಾಡಿದ್ದು, ನೇಪಾಳ ಮೂಲದ ಆರೋಪಿಯನ್ನ ಬಂಧಿಸಿದ್ದಾರೆ. ಮಹಿಳೆಯೊಬ್ಬರು ಮಗುವನ್ನು ಅಪಹರಿಸಿ ನೇಪಾಳ ಮೂಲದ ವ್ಯಕ್ತಿಗೆ ನೀಡಿದ್ದಾಳೆ ಎಂದು ಹೇಳಲಾಗುತ್ತಿದೆ. ಸದ್ಯ ಮಗು ಕಿಡ್ನ್ಯಾಪ್ ಮಾಡಿದ್ದ ಮಹಿಳೆಗಾಗಿ ಪೊಲೀಸರು ಹುಡುಕಾಟ ನಡೆಸಿದ್ದಾರೆ.
ಹೊರಮಾವು ನಿವಾಸಿ ಸುಭಾಷ್ ಅವರ ಮಗ ಐದನೇ ಕ್ಲಾಸ್ ಓದುತ್ತಿದ್ದ. ಶಾಲೆಯಿಂದ ಮನೆಗೆ ತೆರಳುತ್ತಿದ್ದಾಗಲೇ ಮಹಿಳೆ ಬಾಲಕನನ್ನು ಅಪಹರಿಸಿದ್ದಳು.
11 year old boy kidnapped, demand 50 lakhs as ransom, police nab accused within hours.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
27-07-26 09:48 pm
HK News Staffer
ಕ್ಯಾನ್ಸರ್ ವಿರುದ್ಧ ಹೋರಾಟದ ನಡುವೆಯೇ ಸೇವಾ ಕೈಂಕರ್ಯ...
27-07-26 08:24 pm
ಚಿನ್ನದ ರಿಂಗ್, ಡಾಲರ್ ಸಹಿತ ಬೆಲೆಬಾಳುವ ವಸ್ತುಗಳಿದ್...
26-07-26 09:57 pm
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
27-07-26 11:07 pm
Mangaluru Staffer
ಕಾಪುವಿನಲ್ಲಿ ಎಕ್ಸ್ಪ್ರೆಸ್ ಬಸ್ಗಳ ದರ್ಪ! ಟೈಮಿಂಗ್...
27-07-26 10:21 pm
ಸಚಿವ ಸ್ಥಾನ ಕೊಡಿಸಲು ಮೂರು ಕೋಟಿ ಬೇಡಿಕೆ ; ಕೇರಳದ ಶ...
27-07-26 09:04 pm
ಬೆಂಗಳೂರು ಗ್ಯಾರೇಜ್ ನಲ್ಲಿ ಅಗ್ನಿ ಅವಘಡ ; ಜಾಗ್ವಾರ...
27-07-26 07:35 pm
ಎಪಿಎಂಸಿ ಕಾರ್ಯದರ್ಶಿ ವಿರುದ್ಧ ಲೈಂಗಿಕ ಕಿರುಕುಳ ಆರೋ...
27-07-26 01:09 pm