ಬ್ರೇಕಿಂಗ್ ನ್ಯೂಸ್
09-06-22 03:09 pm HK News Desk ಕ್ರೈಂ
ಮೈಸೂರು, ಜೂನ್ 9: ಮೈಸೂರಿನ ಕಾನ್ವೆಂಟ್ ಶಾಲೆಯ ನನ್ ಒಬ್ಬರ ಮೇಲೆ ಲೈಂಗಿಕ ಕಿರುಕುಳ ನೀಡಿರುವ ಬಗ್ಗೆ ಆರೋಪ ಕೇಳಿಬಂದಿದೆ. ಈ ಬಗ್ಗೆ ನನ್ ಆಗಿರುವ ಯುವತಿಯೇ ಸ್ವತಃ ವಿಡಿಯೋ ಮಾಡಿ ಜಾಲತಾಣದಲ್ಲಿ ಹರಿಯಬಿಟ್ಟಿದ್ದಾರೆ. ತನ್ನ ಶವ ಏನಾದ್ರೂ ಸಿಕ್ಕರೆ ಕೊಲೆಯೆಂದು ಕೇಸು ದಾಖಲಿಸುವಂತೆ ಕೋರಿದ್ದಾರೆ.
ವಿಕಲ ಚೇತನ ಮಕ್ಕಳನ್ನು ಸಾಕುವ ಕಾನ್ವೆಂಟ್ ಶಾಲೆಯಲ್ಲಿ ನನ್ ಟೀಚರ್ ಆಗಿದ್ದು, ಅಲ್ಲಿನ ಸಿಬಂದಿಯೇ ತನ್ನ ಮೇಲೆ ಕಿರುಕುಳ ನೀಡಿದ್ದಾರೆ. ಈ ಹಿಂದೆ ಅಲ್ಲಿ ಎರಡು ಕೊಲೆ ಆಗಿದೆ. ಅಮಾಯಕರಿಗೆ ಲೈಂಗಿಕ ಕಿರುಕುಳ ನೀಡಲಾಗ್ತಿದೆ. ಭಾರೀ ಭ್ರಷ್ಟಾಚಾರವೂ ನಡೆಯುತ್ತಿರುವುದಾಗಿ ವಿಡಿಯೋದಲ್ಲಿ ಹೇಳಿಕೊಂಡಿದ್ದಾರೆ.
ಅಲ್ಲದೆ, ತನ್ನನ್ನು ಮಾನಸಿಕ ರೋಗಿಯೆಂದು ತೋರಿಸಿ ಆಸ್ಪತ್ರೆಗೆ ದಾಖಲಿಸಲು ಯತ್ನಿಸುತ್ತಿದ್ದಾರೆ. ಇದರಲ್ಲಿ ಕಾನ್ವೆಂಟ್ ಶಾಲೆಯ ಮೂವರು ಮಹಿಳಾ ಸಹೋದ್ಯೋಗಿಗಳ ಪಾತ್ರ ಇದೆಯೆಂದು ಹೇಳಿ, ಹೆಸರನ್ನು ಉಲ್ಲೇಖಿಸಿ ಆರೋಪ ಮಾಡಿದ್ದಾರೆ. ನನಗೆ ಮಾನಸಿಕ ಕಿರುಕುಳವನ್ನೂ ನೀಡುತ್ತಿದ್ದು, ನನ್ನ ಶವ ಎಲ್ಲಿಯಾದರೂ ಸಿಕ್ಕರೆ ಅದನ್ನು ಪೊಲೀಸರು ಕೊಲೆಯೆಂದು ಪರಿಗಣಿಸಬೇಕು ಎಂದು ವಿಡಿಯೋದಲ್ಲಿ ಹೇಳಿದ್ದಾರೆ.
ರಾಜ್ಯ ಮಾನವ ಹಕ್ಕು ಆಯೋಗಕ್ಕೂ ಈ ಬಗ್ಗೆ ಪತ್ರ ಬರೆದಿದ್ದೇನೆ ಎಂದು ಹೇಳಿರುವ ಆಕೆ, ತನ್ನ ಮೇಲೆ ನಾಲ್ವರು ಸೇರಿ ಹಲ್ಲೆ, ಕಿರುಕುಳ ನೀಡಿದ್ದು ಆನಂತರ ಆಸ್ಪತ್ರೆಗೆ ದಾಖಲಿಸಿದ್ದರು. ಅಲ್ಲಿಂದ ಹೇಗೋ ಪಾರಾಗಿ ಬಂದು ಪೊಲೀಸರಿಗೆ ದೂರು ನೀಡಿದ್ದೇನೆ ಎಂದು ಹೇಳುತ್ತಿರುವುದು ವಿಡಿಯೋದಲ್ಲಿದೆ. ಕಾನ್ವೆಂಟ್ ಶಾಲೆಯ ಆಡಳಿತ ಈ ಆರೋಪಗಳನ್ನು ನಿರಾಕರಿಸಿದ್ದು, ಆಕೆ ಮಾನಸಿಕ ಅಸ್ವಸ್ಥಳಾಗಿದ್ದು, ಎರಡು ತಿಂಗಳಿಂದ ವಿಪರೀತವಾಗಿ ವರ್ತಿಸುತ್ತಿದ್ದಾಳೆ ಎಂದು ಹೇಳಿಕೆ ನೀಡಿದೆ.
A nun working in Mercy convent in Sri Rampura in Karnataka's Mysuru has sought protection from her colleagues, alleging that her life is in danger and that she was forcibly admitted to a psychiatric hospital for calling out sexual harassment in the convent.
01-05-26 08:33 pm
HK News Staffer
ರಾಜ್ಯದಲ್ಲಿ ಸದ್ಯಕ್ಕೆ ಸಿಎಂ ಬದಲಾವಣೆ ಇಲ್ಲ, ನಾನು ಸ...
30-04-26 08:16 pm
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
ಸದ್ಯಕ್ಕಿಲ್ಲ ಡಿಕೆಶಿಗೆ ಸಿಎಂ ಭಾಗ್ಯ ; ರಾಜ್ಯಸಭೆ- ಏ...
29-04-26 10:36 am
ನಾಯಕತ್ವ ಬದಲಾವಣೆ ಮಾತೇ ಇಲ್ಲ, ಮೇ 20ರೊಳಗೆ ಸಂಪುಟ ವ...
26-04-26 08:05 pm
29-04-26 11:18 pm
HK News Staffer
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:54 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:53 pm
29-04-26 11:05 pm
HK News Staffer
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
ನೂತನ ಮನೆಯ ಔತಣಕೂಟ ದಿನವೇ ಮೃತಪಟ್ಟ ಯಜಮಾನ ; ಬಂಟ್ವಾ...
28-04-26 01:26 pm
ಮಂಗಳೂರು- ಬೆಂಗಳೂರು ರೈಲಿನಲ್ಲಿ ಮಗುವಿಗೆ ಜನ್ಮವಿತ್ತ...
27-04-26 10:29 am
01-05-26 09:24 pm
HK News Staffer
ಸಹೋದ್ಯೋಗಿ ಮೇಲೆ ಆಸಿಡ್ ದಾಳಿ ; ಕೇರಳ ಮೂಲದ ವ್ಯಕ್...
01-05-26 07:18 pm
Rakesh Gladson Dsouza: ಮಂಗಳೂರಿನ ಯುವ ಉದ್ಯಮಿ ರಾ...
01-05-26 06:36 pm
ಮಕ್ಕಳ ಆಯೋಗ ಸಮಿತಿ ಸದಸ್ಯನಿಂದಲೇ ಹಲವು ಮಹಿಳೆಯರಿಗೆ...
01-05-26 01:45 pm
ಬೆಂಗಳೂರಿನ ಜ್ಯುವೆಲ್ಲರಿ ಶಾಪ್ ಗೋಡೆ ಕೊರೆದು ಕೋಟ್ಯಂ...
01-05-26 11:48 am