ಬ್ರೇಕಿಂಗ್ ನ್ಯೂಸ್
09-06-22 03:09 pm HK News Desk ಕ್ರೈಂ
ಮೈಸೂರು, ಜೂನ್ 9: ಮೈಸೂರಿನ ಕಾನ್ವೆಂಟ್ ಶಾಲೆಯ ನನ್ ಒಬ್ಬರ ಮೇಲೆ ಲೈಂಗಿಕ ಕಿರುಕುಳ ನೀಡಿರುವ ಬಗ್ಗೆ ಆರೋಪ ಕೇಳಿಬಂದಿದೆ. ಈ ಬಗ್ಗೆ ನನ್ ಆಗಿರುವ ಯುವತಿಯೇ ಸ್ವತಃ ವಿಡಿಯೋ ಮಾಡಿ ಜಾಲತಾಣದಲ್ಲಿ ಹರಿಯಬಿಟ್ಟಿದ್ದಾರೆ. ತನ್ನ ಶವ ಏನಾದ್ರೂ ಸಿಕ್ಕರೆ ಕೊಲೆಯೆಂದು ಕೇಸು ದಾಖಲಿಸುವಂತೆ ಕೋರಿದ್ದಾರೆ.
ವಿಕಲ ಚೇತನ ಮಕ್ಕಳನ್ನು ಸಾಕುವ ಕಾನ್ವೆಂಟ್ ಶಾಲೆಯಲ್ಲಿ ನನ್ ಟೀಚರ್ ಆಗಿದ್ದು, ಅಲ್ಲಿನ ಸಿಬಂದಿಯೇ ತನ್ನ ಮೇಲೆ ಕಿರುಕುಳ ನೀಡಿದ್ದಾರೆ. ಈ ಹಿಂದೆ ಅಲ್ಲಿ ಎರಡು ಕೊಲೆ ಆಗಿದೆ. ಅಮಾಯಕರಿಗೆ ಲೈಂಗಿಕ ಕಿರುಕುಳ ನೀಡಲಾಗ್ತಿದೆ. ಭಾರೀ ಭ್ರಷ್ಟಾಚಾರವೂ ನಡೆಯುತ್ತಿರುವುದಾಗಿ ವಿಡಿಯೋದಲ್ಲಿ ಹೇಳಿಕೊಂಡಿದ್ದಾರೆ.
ಅಲ್ಲದೆ, ತನ್ನನ್ನು ಮಾನಸಿಕ ರೋಗಿಯೆಂದು ತೋರಿಸಿ ಆಸ್ಪತ್ರೆಗೆ ದಾಖಲಿಸಲು ಯತ್ನಿಸುತ್ತಿದ್ದಾರೆ. ಇದರಲ್ಲಿ ಕಾನ್ವೆಂಟ್ ಶಾಲೆಯ ಮೂವರು ಮಹಿಳಾ ಸಹೋದ್ಯೋಗಿಗಳ ಪಾತ್ರ ಇದೆಯೆಂದು ಹೇಳಿ, ಹೆಸರನ್ನು ಉಲ್ಲೇಖಿಸಿ ಆರೋಪ ಮಾಡಿದ್ದಾರೆ. ನನಗೆ ಮಾನಸಿಕ ಕಿರುಕುಳವನ್ನೂ ನೀಡುತ್ತಿದ್ದು, ನನ್ನ ಶವ ಎಲ್ಲಿಯಾದರೂ ಸಿಕ್ಕರೆ ಅದನ್ನು ಪೊಲೀಸರು ಕೊಲೆಯೆಂದು ಪರಿಗಣಿಸಬೇಕು ಎಂದು ವಿಡಿಯೋದಲ್ಲಿ ಹೇಳಿದ್ದಾರೆ.
ರಾಜ್ಯ ಮಾನವ ಹಕ್ಕು ಆಯೋಗಕ್ಕೂ ಈ ಬಗ್ಗೆ ಪತ್ರ ಬರೆದಿದ್ದೇನೆ ಎಂದು ಹೇಳಿರುವ ಆಕೆ, ತನ್ನ ಮೇಲೆ ನಾಲ್ವರು ಸೇರಿ ಹಲ್ಲೆ, ಕಿರುಕುಳ ನೀಡಿದ್ದು ಆನಂತರ ಆಸ್ಪತ್ರೆಗೆ ದಾಖಲಿಸಿದ್ದರು. ಅಲ್ಲಿಂದ ಹೇಗೋ ಪಾರಾಗಿ ಬಂದು ಪೊಲೀಸರಿಗೆ ದೂರು ನೀಡಿದ್ದೇನೆ ಎಂದು ಹೇಳುತ್ತಿರುವುದು ವಿಡಿಯೋದಲ್ಲಿದೆ. ಕಾನ್ವೆಂಟ್ ಶಾಲೆಯ ಆಡಳಿತ ಈ ಆರೋಪಗಳನ್ನು ನಿರಾಕರಿಸಿದ್ದು, ಆಕೆ ಮಾನಸಿಕ ಅಸ್ವಸ್ಥಳಾಗಿದ್ದು, ಎರಡು ತಿಂಗಳಿಂದ ವಿಪರೀತವಾಗಿ ವರ್ತಿಸುತ್ತಿದ್ದಾಳೆ ಎಂದು ಹೇಳಿಕೆ ನೀಡಿದೆ.
A nun working in Mercy convent in Sri Rampura in Karnataka's Mysuru has sought protection from her colleagues, alleging that her life is in danger and that she was forcibly admitted to a psychiatric hospital for calling out sexual harassment in the convent.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
27-07-26 09:48 pm
HK News Staffer
ಕ್ಯಾನ್ಸರ್ ವಿರುದ್ಧ ಹೋರಾಟದ ನಡುವೆಯೇ ಸೇವಾ ಕೈಂಕರ್ಯ...
27-07-26 08:24 pm
ಚಿನ್ನದ ರಿಂಗ್, ಡಾಲರ್ ಸಹಿತ ಬೆಲೆಬಾಳುವ ವಸ್ತುಗಳಿದ್...
26-07-26 09:57 pm
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
27-07-26 11:07 pm
Mangaluru Staffer
ಕಾಪುವಿನಲ್ಲಿ ಎಕ್ಸ್ಪ್ರೆಸ್ ಬಸ್ಗಳ ದರ್ಪ! ಟೈಮಿಂಗ್...
27-07-26 10:21 pm
ಸಚಿವ ಸ್ಥಾನ ಕೊಡಿಸಲು ಮೂರು ಕೋಟಿ ಬೇಡಿಕೆ ; ಕೇರಳದ ಶ...
27-07-26 09:04 pm
ಬೆಂಗಳೂರು ಗ್ಯಾರೇಜ್ ನಲ್ಲಿ ಅಗ್ನಿ ಅವಘಡ ; ಜಾಗ್ವಾರ...
27-07-26 07:35 pm
ಎಪಿಎಂಸಿ ಕಾರ್ಯದರ್ಶಿ ವಿರುದ್ಧ ಲೈಂಗಿಕ ಕಿರುಕುಳ ಆರೋ...
27-07-26 01:09 pm