ಬ್ರೇಕಿಂಗ್ ನ್ಯೂಸ್
09-06-22 09:20 pm HK News Desk ಕ್ರೈಂ
ಕಾರವಾರ, ಜೂನ್ 9: ಮುಂಬೈನಿಂದ ಮಂಗಳೂರಿಗೆ ರೈಲಿನಲ್ಲಿ ಹವಾಲಾ ರೂಪದಲ್ಲಿ ತರುತ್ತಿದ್ದ ಎರಡು ಕೋಟಿ ರೂ. ನಗದನ್ನು ರೈಲ್ವೇ ಪೊಲೀಸರು ಕಾರವಾರದಲ್ಲಿ ಪತ್ತೆ ಮಾಡಿದ್ದಾರೆ.
ರೈಲು ಸಂಖ್ಯೆ - 12133 ಮುಂಬೈ ಛತ್ರಪತಿ ಶಿವಾಜಿ ಟರ್ಮಿನಲ್- ಮಂಗಳೂರು ಜಂಕ್ಷನ್ ಎಕ್ಸ್ಪ್ರೆಸ್ನಲ್ಲಿ ಟಿಕೆಟ್ ಇಲ್ಲದೆ ಪ್ರಯಾಣಿಸುತ್ತಿದ್ದ ಕಾರಣಕ್ಕೆ ವ್ಯಕ್ತಿಯನ್ನು ತಪಾಸಣೆಗೆ ಒಳಪಡಿಸಲಾಗಿತ್ತು. ರೈಲ್ವೇ ಟಿಕೆಟ್ ಪರೀಕ್ಷಕರು ವಿಚಾರಿಸಿದರೂ ಸರಿಯಾಗಿ ಉತ್ತರಿಸದೇ ಇದ್ದಾಗ ರೈಲ್ವೇ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ರೈಲು ಕಾರವಾರ ನಿಲ್ದಾಣಕ್ಕೆ ಬಂದಾಗ ವ್ಯಕ್ತಿಯ ಜೊತೆಗಿದ್ದ ಬ್ಯಾಗ್ ತಪಾಸಣೆ ನಡೆಸಿದ್ದು, ಅದರಲ್ಲಿ ಬರೋಬ್ಬರಿ 2 ಕೋಟಿ ರೂ. ಭಾರತೀಯ ಕರೆನ್ಸಿ ನೋಟುಗಳು ಪತ್ತೆಯಾಗಿವೆ.
ಪ್ರಕರಣಕ್ಕೆ ಸಂಬಂಧಿಸಿ 22 ವರ್ಷದ ಚೇನ್ ಸಿಂಗ್ ಎಂಬಾತನನ್ನು ಬಂಧಿಸಲಾಗಿದ್ದು, ಈತ ರಾಜಸ್ಥಾನದ ಜಲೋರ್ ನಗರದ ನಿವಾಸಿ ಎಂದು ಪೊಲೀಸರು ಗುರುತಿಸಿದ್ದಾರೆ. ಬ್ಯಾಗ್ ತೆರೆಯಲು ಹೇಳಿದಾಗ, ಮೊದಲು ನಿರಾಕರಿಸಿದ್ದು ನಂತರ ಬ್ಯಾಗಿನಲ್ಲಿ ದುಡ್ಡಿರುವುದಾಗಿ ಒಪ್ಪಿಕೊಂಡಿದ್ದಾನೆ. ವಿಚಾರಣೆ ವೇಳೆ, ಮುಂಬೈನ ಭರತ್ ಭಾಯ್ ಅಲಿಯಾಸ್ ಪಿಂಟು ಎಂಬಾತನ ಬಳಿ ರೂ.15,000 ಮಾಸಿಕ ವೇತನಕ್ಕೆ ಕೆಲಸ ಮಾಡುತ್ತಿದ್ದು, ಹಣವನ್ನು ಮಂಗಳೂರಿನ ರಾಜ್ ಎನ್ನುವವರಿಗೆ ತಲುಪಿಸಲು ಒಯ್ಯುತ್ತಿದ್ದೇನೆ ಎಂದು ತಿಳಿಸಿದ್ದಾನೆ.
ಜಪ್ತಿಪಡಿಸಿದ ರೂ. 2 ಕೋಟಿ ರೂಪಾಯಿ ನಗದನ್ನು ಅಗತ್ಯ ಕ್ರಮಕ್ಕಾಗಿ ಆದಾಯ ತೆರಿಗೆ ಇಲಾಖೆಯ ನಿರ್ದೇಶನದಂತೆ ಕಾರವಾರ ಗ್ರಾಮೀಣ ಠಾಣೆಗೆ ಹಸ್ತಾಂತರಿಸಲಾಗಿದೆ. ಪೊಲೀಸರು ಅದೇ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದು ಆರೋಪಿಯನ್ನು ಅದೇ ಠಾಣೆಗೆ ಹಸ್ತಾಂತರ ಮಾಡಲಾಗಿದೆ.
Karwar Hawala via train from Mumbai to Mangalore, two crores money seized, youth arrested. The arrested has been identified as Chin Sing (22).
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
27-07-26 09:48 pm
HK News Staffer
ಕ್ಯಾನ್ಸರ್ ವಿರುದ್ಧ ಹೋರಾಟದ ನಡುವೆಯೇ ಸೇವಾ ಕೈಂಕರ್ಯ...
27-07-26 08:24 pm
ಚಿನ್ನದ ರಿಂಗ್, ಡಾಲರ್ ಸಹಿತ ಬೆಲೆಬಾಳುವ ವಸ್ತುಗಳಿದ್...
26-07-26 09:57 pm
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
27-07-26 11:07 pm
Mangaluru Staffer
ಕಾಪುವಿನಲ್ಲಿ ಎಕ್ಸ್ಪ್ರೆಸ್ ಬಸ್ಗಳ ದರ್ಪ! ಟೈಮಿಂಗ್...
27-07-26 10:21 pm
ಸಚಿವ ಸ್ಥಾನ ಕೊಡಿಸಲು ಮೂರು ಕೋಟಿ ಬೇಡಿಕೆ ; ಕೇರಳದ ಶ...
27-07-26 09:04 pm
ಬೆಂಗಳೂರು ಗ್ಯಾರೇಜ್ ನಲ್ಲಿ ಅಗ್ನಿ ಅವಘಡ ; ಜಾಗ್ವಾರ...
27-07-26 07:35 pm
ಎಪಿಎಂಸಿ ಕಾರ್ಯದರ್ಶಿ ವಿರುದ್ಧ ಲೈಂಗಿಕ ಕಿರುಕುಳ ಆರೋ...
27-07-26 01:09 pm