ಬ್ರೇಕಿಂಗ್ ನ್ಯೂಸ್
09-06-22 09:20 pm HK News Desk ಕ್ರೈಂ
ಕಾರವಾರ, ಜೂನ್ 9: ಮುಂಬೈನಿಂದ ಮಂಗಳೂರಿಗೆ ರೈಲಿನಲ್ಲಿ ಹವಾಲಾ ರೂಪದಲ್ಲಿ ತರುತ್ತಿದ್ದ ಎರಡು ಕೋಟಿ ರೂ. ನಗದನ್ನು ರೈಲ್ವೇ ಪೊಲೀಸರು ಕಾರವಾರದಲ್ಲಿ ಪತ್ತೆ ಮಾಡಿದ್ದಾರೆ.
ರೈಲು ಸಂಖ್ಯೆ - 12133 ಮುಂಬೈ ಛತ್ರಪತಿ ಶಿವಾಜಿ ಟರ್ಮಿನಲ್- ಮಂಗಳೂರು ಜಂಕ್ಷನ್ ಎಕ್ಸ್ಪ್ರೆಸ್ನಲ್ಲಿ ಟಿಕೆಟ್ ಇಲ್ಲದೆ ಪ್ರಯಾಣಿಸುತ್ತಿದ್ದ ಕಾರಣಕ್ಕೆ ವ್ಯಕ್ತಿಯನ್ನು ತಪಾಸಣೆಗೆ ಒಳಪಡಿಸಲಾಗಿತ್ತು. ರೈಲ್ವೇ ಟಿಕೆಟ್ ಪರೀಕ್ಷಕರು ವಿಚಾರಿಸಿದರೂ ಸರಿಯಾಗಿ ಉತ್ತರಿಸದೇ ಇದ್ದಾಗ ರೈಲ್ವೇ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ರೈಲು ಕಾರವಾರ ನಿಲ್ದಾಣಕ್ಕೆ ಬಂದಾಗ ವ್ಯಕ್ತಿಯ ಜೊತೆಗಿದ್ದ ಬ್ಯಾಗ್ ತಪಾಸಣೆ ನಡೆಸಿದ್ದು, ಅದರಲ್ಲಿ ಬರೋಬ್ಬರಿ 2 ಕೋಟಿ ರೂ. ಭಾರತೀಯ ಕರೆನ್ಸಿ ನೋಟುಗಳು ಪತ್ತೆಯಾಗಿವೆ.
ಪ್ರಕರಣಕ್ಕೆ ಸಂಬಂಧಿಸಿ 22 ವರ್ಷದ ಚೇನ್ ಸಿಂಗ್ ಎಂಬಾತನನ್ನು ಬಂಧಿಸಲಾಗಿದ್ದು, ಈತ ರಾಜಸ್ಥಾನದ ಜಲೋರ್ ನಗರದ ನಿವಾಸಿ ಎಂದು ಪೊಲೀಸರು ಗುರುತಿಸಿದ್ದಾರೆ. ಬ್ಯಾಗ್ ತೆರೆಯಲು ಹೇಳಿದಾಗ, ಮೊದಲು ನಿರಾಕರಿಸಿದ್ದು ನಂತರ ಬ್ಯಾಗಿನಲ್ಲಿ ದುಡ್ಡಿರುವುದಾಗಿ ಒಪ್ಪಿಕೊಂಡಿದ್ದಾನೆ. ವಿಚಾರಣೆ ವೇಳೆ, ಮುಂಬೈನ ಭರತ್ ಭಾಯ್ ಅಲಿಯಾಸ್ ಪಿಂಟು ಎಂಬಾತನ ಬಳಿ ರೂ.15,000 ಮಾಸಿಕ ವೇತನಕ್ಕೆ ಕೆಲಸ ಮಾಡುತ್ತಿದ್ದು, ಹಣವನ್ನು ಮಂಗಳೂರಿನ ರಾಜ್ ಎನ್ನುವವರಿಗೆ ತಲುಪಿಸಲು ಒಯ್ಯುತ್ತಿದ್ದೇನೆ ಎಂದು ತಿಳಿಸಿದ್ದಾನೆ.
ಜಪ್ತಿಪಡಿಸಿದ ರೂ. 2 ಕೋಟಿ ರೂಪಾಯಿ ನಗದನ್ನು ಅಗತ್ಯ ಕ್ರಮಕ್ಕಾಗಿ ಆದಾಯ ತೆರಿಗೆ ಇಲಾಖೆಯ ನಿರ್ದೇಶನದಂತೆ ಕಾರವಾರ ಗ್ರಾಮೀಣ ಠಾಣೆಗೆ ಹಸ್ತಾಂತರಿಸಲಾಗಿದೆ. ಪೊಲೀಸರು ಅದೇ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದು ಆರೋಪಿಯನ್ನು ಅದೇ ಠಾಣೆಗೆ ಹಸ್ತಾಂತರ ಮಾಡಲಾಗಿದೆ.
Karwar Hawala via train from Mumbai to Mangalore, two crores money seized, youth arrested. The arrested has been identified as Chin Sing (22).
12-01-26 08:20 pm
Mangaluru
ಮನೆ ಕಟ್ಟಲು ಅಡಿಪಾಯ ತೆಗೆಯುವ ವೇಳೆ 1 ಕೆಜಿಯಷ್ಟು ನಿ...
10-01-26 10:28 pm
"ಡ್ಯಾಡಿ ಈಸ್ ಹೋಮ್" ಎಐ ವಿಡಿಯೋ ರಿಲೀಸ್ ; ರಾಜ್ಯ ರಾ...
10-01-26 04:29 pm
ಚಾರ್ಮಾಡಿ ಘಾಟಿಯಲ್ಲಿ ರಸ್ತೆಗೆ ಅಡ್ಡ ನಿಂತ ಒಂಟಿ ಸಲಗ...
10-01-26 03:00 pm
Purushottam Bilimale, Legal Battle Against Ma...
10-01-26 01:17 pm
12-01-26 11:00 pm
HK staffer
ಕುಂಬಳೆ ಟೋಲ್ ಗೇಟ್ ವಿರುದ್ಧ ರಸ್ತೆ ತಡೆದು ಪ್ರತಿಭಟನ...
12-01-26 05:01 pm
ಎಕ್ಸ್ ನಲ್ಲಿ ಅಶ್ಲೀಲ ಕಂಟೆಂಟ್ ; ಐಟಿ ಸಚಿವಾಲಯದ ಒತ್...
11-01-26 06:07 pm
ವೆನಿಜುವೆಲಾ ತೈಲದ ನಿಯಂತ್ರಣಕ್ಕೆ ಮುಂದಾದ ಅಮೆರಿಕ ;...
10-01-26 03:22 pm
ಶಬರಿಮಲೆ ಚಿನ್ನ ಕಳವು ಪ್ರಕರಣ ; ಪ್ರಧಾನ ತಂತ್ರಿ ಕಂಠ...
09-01-26 11:00 pm
12-01-26 08:03 pm
Mangaluru Staffer
ಭಾರತ ರಕ್ತಪಾತಕ್ಕೆ ಇನ್ನಷ್ಟು ಸಿದ್ಧವಾಗಬೇಕು ; ಚೀನಾ...
11-01-26 10:39 pm
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
ಅಮೆರಿಕ ಬಿಟ್ಟು ಚೀನಾ ಜೊತೆಗೆ ಬಾಂಧವ್ಯ ಬೆಳೆಸಬೇಕಿದೆ...
11-01-26 12:56 pm
Cm Siddaramaiah, Mangalore: ಕರಾವಳಿ ಪ್ರವಾಸೋದ್ಯ...
10-01-26 10:45 pm
12-01-26 06:28 pm
Mangaluru Staffer
Mangalore Crime: ಬಾಂಗ್ಲಾದವನೆಂದು ಹೇಳಿ ವಲಸೆ ಕಾರ...
12-01-26 01:54 pm
Sharmila Death, Murder, Bangalore: ಮಂಗಳೂರಿನ ಟ...
12-01-26 01:31 pm
ಅಯ್ಯಪ್ಪ ಸ್ವಾಮಿಗಳ ಪೂಜೆ ಸಂದರ್ಭದಲ್ಲಿ ಮುಸ್ಲಿಂ ವ್ಯ...
11-01-26 09:59 pm
ಆರು ವರ್ಷದ ಬಾಲಕಿಯನ್ನು ಅಪಹರಿಸಿ, ಕೊಲೆ ; ತಾಯಿ ಜಗಳ...
07-01-26 10:45 pm