ಬ್ರೇಕಿಂಗ್ ನ್ಯೂಸ್
09-06-22 09:20 pm HK News Desk ಕ್ರೈಂ
ಕಾರವಾರ, ಜೂನ್ 9: ಮುಂಬೈನಿಂದ ಮಂಗಳೂರಿಗೆ ರೈಲಿನಲ್ಲಿ ಹವಾಲಾ ರೂಪದಲ್ಲಿ ತರುತ್ತಿದ್ದ ಎರಡು ಕೋಟಿ ರೂ. ನಗದನ್ನು ರೈಲ್ವೇ ಪೊಲೀಸರು ಕಾರವಾರದಲ್ಲಿ ಪತ್ತೆ ಮಾಡಿದ್ದಾರೆ.
ರೈಲು ಸಂಖ್ಯೆ - 12133 ಮುಂಬೈ ಛತ್ರಪತಿ ಶಿವಾಜಿ ಟರ್ಮಿನಲ್- ಮಂಗಳೂರು ಜಂಕ್ಷನ್ ಎಕ್ಸ್ಪ್ರೆಸ್ನಲ್ಲಿ ಟಿಕೆಟ್ ಇಲ್ಲದೆ ಪ್ರಯಾಣಿಸುತ್ತಿದ್ದ ಕಾರಣಕ್ಕೆ ವ್ಯಕ್ತಿಯನ್ನು ತಪಾಸಣೆಗೆ ಒಳಪಡಿಸಲಾಗಿತ್ತು. ರೈಲ್ವೇ ಟಿಕೆಟ್ ಪರೀಕ್ಷಕರು ವಿಚಾರಿಸಿದರೂ ಸರಿಯಾಗಿ ಉತ್ತರಿಸದೇ ಇದ್ದಾಗ ರೈಲ್ವೇ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ರೈಲು ಕಾರವಾರ ನಿಲ್ದಾಣಕ್ಕೆ ಬಂದಾಗ ವ್ಯಕ್ತಿಯ ಜೊತೆಗಿದ್ದ ಬ್ಯಾಗ್ ತಪಾಸಣೆ ನಡೆಸಿದ್ದು, ಅದರಲ್ಲಿ ಬರೋಬ್ಬರಿ 2 ಕೋಟಿ ರೂ. ಭಾರತೀಯ ಕರೆನ್ಸಿ ನೋಟುಗಳು ಪತ್ತೆಯಾಗಿವೆ.
ಪ್ರಕರಣಕ್ಕೆ ಸಂಬಂಧಿಸಿ 22 ವರ್ಷದ ಚೇನ್ ಸಿಂಗ್ ಎಂಬಾತನನ್ನು ಬಂಧಿಸಲಾಗಿದ್ದು, ಈತ ರಾಜಸ್ಥಾನದ ಜಲೋರ್ ನಗರದ ನಿವಾಸಿ ಎಂದು ಪೊಲೀಸರು ಗುರುತಿಸಿದ್ದಾರೆ. ಬ್ಯಾಗ್ ತೆರೆಯಲು ಹೇಳಿದಾಗ, ಮೊದಲು ನಿರಾಕರಿಸಿದ್ದು ನಂತರ ಬ್ಯಾಗಿನಲ್ಲಿ ದುಡ್ಡಿರುವುದಾಗಿ ಒಪ್ಪಿಕೊಂಡಿದ್ದಾನೆ. ವಿಚಾರಣೆ ವೇಳೆ, ಮುಂಬೈನ ಭರತ್ ಭಾಯ್ ಅಲಿಯಾಸ್ ಪಿಂಟು ಎಂಬಾತನ ಬಳಿ ರೂ.15,000 ಮಾಸಿಕ ವೇತನಕ್ಕೆ ಕೆಲಸ ಮಾಡುತ್ತಿದ್ದು, ಹಣವನ್ನು ಮಂಗಳೂರಿನ ರಾಜ್ ಎನ್ನುವವರಿಗೆ ತಲುಪಿಸಲು ಒಯ್ಯುತ್ತಿದ್ದೇನೆ ಎಂದು ತಿಳಿಸಿದ್ದಾನೆ.
ಜಪ್ತಿಪಡಿಸಿದ ರೂ. 2 ಕೋಟಿ ರೂಪಾಯಿ ನಗದನ್ನು ಅಗತ್ಯ ಕ್ರಮಕ್ಕಾಗಿ ಆದಾಯ ತೆರಿಗೆ ಇಲಾಖೆಯ ನಿರ್ದೇಶನದಂತೆ ಕಾರವಾರ ಗ್ರಾಮೀಣ ಠಾಣೆಗೆ ಹಸ್ತಾಂತರಿಸಲಾಗಿದೆ. ಪೊಲೀಸರು ಅದೇ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದು ಆರೋಪಿಯನ್ನು ಅದೇ ಠಾಣೆಗೆ ಹಸ್ತಾಂತರ ಮಾಡಲಾಗಿದೆ.
Karwar Hawala via train from Mumbai to Mangalore, two crores money seized, youth arrested. The arrested has been identified as Chin Sing (22).
27-06-26 08:31 pm
HK News Staffer
ಅಂಬಾನಿ ಕೊಟ್ಟ 900 ಕೋಟಿ ದೇಣಿಗೆಗೂ ಲೆಕ್ಕ ಇಲ್ಲ, ಈಗ...
27-06-26 04:21 pm
ಆರ್ಎಸ್ಎಸ್ ಗಲಿಬಿಲಿಗೊಂಡರೆ ಬಿಜೆಪಿ ಬುಸುಗುಡುತ್ತದ...
26-06-26 08:30 pm
ಬಿಡದಿಯಲ್ಲಿ ರೈತರ ವಿರುದ್ಧವಾಗಿ ಟೌನ್ಶಿಪ್ ಕಟ್ಟುವ...
26-06-26 05:10 pm
ಇಷ್ಟೆಲ್ಲಾ ಅಲ್ಲೋಲ ಕಲ್ಲೋಲಕ್ಕೆ ಶೋಭಾ ಕರಂದ್ಲಾಜೆ ನೇ...
25-06-26 09:10 pm
27-06-26 09:10 pm
HK News Staffer
40 ಸೆಕೆಂಡ್ ನಲ್ಲಿ ಎರಡು ಬಾರಿ ಭೂಕಂಪ ; ತತ್ತರಿಸಿ ಹ...
25-06-26 12:13 pm
ಕೂಲ್ ಸಿಟಿ ಯುರೋಪಿನಲ್ಲೀಗ ಬಿಸಿಲ ಹೊಡೆತ ; ಫ್ರಾನ್ಸ್...
24-06-26 01:51 pm
ಮಾಹಿತಿ ಹಕ್ಕು ನಿಯಮಗಳಿಗೆ ಮಹಾರಾಷ್ಟ್ರ ಸರ್ಕಾರ ತಿದ್...
23-06-26 10:47 pm
ಟಿಎಂಸಿಯಲ್ಲಿ ರಾಜಕೀಯ ಭೂಕಂಪ ; ಮಮತಾ ಬ್ಯಾನರ್ಜಿ ಅಧ...
23-06-26 12:21 pm
27-06-26 02:44 pm
HK News Staffer
Rss ಸಂಘಟನೆಯನ್ನು ರಿಜಿಸ್ಟರ್ ಮಾಡಿದ್ರೆ ಒಳ್ಳೇದು ;...
26-06-26 09:42 pm
ಸಾಂಪ್ರದಾಯಿಕ ಕನ್ನಡ ಎಂಎ ಪದವಿಗೆ ಆಧುನಿಕ ಟಚ್; ಸಂತ...
26-06-26 08:33 pm
ಡಿಕೆಶಿ ಜೊತೆ ಯಾವುದೇ ವ್ಯಾವಹಾರಿಕ ಸಂಬಂಧವಿಲ್ಲ, ಅಪಪ...
26-06-26 02:14 pm
ಮಂಗಳೂರು, ಮೈಸೂರು ಸೇರಿ ರಾಜ್ಯದ 10 ನಗರಗಳಿಗೆ ಇಲೆಕ್...
25-06-26 10:56 pm
27-06-26 08:01 pm
HK News Staffer
ಬೆಂಗಳೂರಿನಿಂದ ಪ್ರಿಯತಮೆಯ ಅಪಹರಣ ; ಅಂಕೋಲಾಕ್ಕೆ ಹೋಗ...
27-06-26 04:23 pm
ಬೆಂಗಳೂರಿನಲ್ಲಿ ಅಕ್ರಮ ಹಣದ ಭಾರಿ ಬೇಟೆ ; ಕುರುಬರಹಳ್...
27-06-26 04:19 pm
ಮಂತ್ರಾಲಯ ಯಾತ್ರೆ ಮಧ್ಯೆ ಯಮನಂತೆ ನುಗ್ಗಿದ ಲಾರಿ! ಡಿ...
27-06-26 11:46 am
Mangalore, Police, criminial escapes: ಪಾಂಡೇಶ್...
27-06-26 10:54 am