ಬ್ರೇಕಿಂಗ್ ನ್ಯೂಸ್
09-06-22 09:20 pm HK News Desk ಕ್ರೈಂ
ಕಾರವಾರ, ಜೂನ್ 9: ಮುಂಬೈನಿಂದ ಮಂಗಳೂರಿಗೆ ರೈಲಿನಲ್ಲಿ ಹವಾಲಾ ರೂಪದಲ್ಲಿ ತರುತ್ತಿದ್ದ ಎರಡು ಕೋಟಿ ರೂ. ನಗದನ್ನು ರೈಲ್ವೇ ಪೊಲೀಸರು ಕಾರವಾರದಲ್ಲಿ ಪತ್ತೆ ಮಾಡಿದ್ದಾರೆ.
ರೈಲು ಸಂಖ್ಯೆ - 12133 ಮುಂಬೈ ಛತ್ರಪತಿ ಶಿವಾಜಿ ಟರ್ಮಿನಲ್- ಮಂಗಳೂರು ಜಂಕ್ಷನ್ ಎಕ್ಸ್ಪ್ರೆಸ್ನಲ್ಲಿ ಟಿಕೆಟ್ ಇಲ್ಲದೆ ಪ್ರಯಾಣಿಸುತ್ತಿದ್ದ ಕಾರಣಕ್ಕೆ ವ್ಯಕ್ತಿಯನ್ನು ತಪಾಸಣೆಗೆ ಒಳಪಡಿಸಲಾಗಿತ್ತು. ರೈಲ್ವೇ ಟಿಕೆಟ್ ಪರೀಕ್ಷಕರು ವಿಚಾರಿಸಿದರೂ ಸರಿಯಾಗಿ ಉತ್ತರಿಸದೇ ಇದ್ದಾಗ ರೈಲ್ವೇ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ರೈಲು ಕಾರವಾರ ನಿಲ್ದಾಣಕ್ಕೆ ಬಂದಾಗ ವ್ಯಕ್ತಿಯ ಜೊತೆಗಿದ್ದ ಬ್ಯಾಗ್ ತಪಾಸಣೆ ನಡೆಸಿದ್ದು, ಅದರಲ್ಲಿ ಬರೋಬ್ಬರಿ 2 ಕೋಟಿ ರೂ. ಭಾರತೀಯ ಕರೆನ್ಸಿ ನೋಟುಗಳು ಪತ್ತೆಯಾಗಿವೆ.
ಪ್ರಕರಣಕ್ಕೆ ಸಂಬಂಧಿಸಿ 22 ವರ್ಷದ ಚೇನ್ ಸಿಂಗ್ ಎಂಬಾತನನ್ನು ಬಂಧಿಸಲಾಗಿದ್ದು, ಈತ ರಾಜಸ್ಥಾನದ ಜಲೋರ್ ನಗರದ ನಿವಾಸಿ ಎಂದು ಪೊಲೀಸರು ಗುರುತಿಸಿದ್ದಾರೆ. ಬ್ಯಾಗ್ ತೆರೆಯಲು ಹೇಳಿದಾಗ, ಮೊದಲು ನಿರಾಕರಿಸಿದ್ದು ನಂತರ ಬ್ಯಾಗಿನಲ್ಲಿ ದುಡ್ಡಿರುವುದಾಗಿ ಒಪ್ಪಿಕೊಂಡಿದ್ದಾನೆ. ವಿಚಾರಣೆ ವೇಳೆ, ಮುಂಬೈನ ಭರತ್ ಭಾಯ್ ಅಲಿಯಾಸ್ ಪಿಂಟು ಎಂಬಾತನ ಬಳಿ ರೂ.15,000 ಮಾಸಿಕ ವೇತನಕ್ಕೆ ಕೆಲಸ ಮಾಡುತ್ತಿದ್ದು, ಹಣವನ್ನು ಮಂಗಳೂರಿನ ರಾಜ್ ಎನ್ನುವವರಿಗೆ ತಲುಪಿಸಲು ಒಯ್ಯುತ್ತಿದ್ದೇನೆ ಎಂದು ತಿಳಿಸಿದ್ದಾನೆ.
ಜಪ್ತಿಪಡಿಸಿದ ರೂ. 2 ಕೋಟಿ ರೂಪಾಯಿ ನಗದನ್ನು ಅಗತ್ಯ ಕ್ರಮಕ್ಕಾಗಿ ಆದಾಯ ತೆರಿಗೆ ಇಲಾಖೆಯ ನಿರ್ದೇಶನದಂತೆ ಕಾರವಾರ ಗ್ರಾಮೀಣ ಠಾಣೆಗೆ ಹಸ್ತಾಂತರಿಸಲಾಗಿದೆ. ಪೊಲೀಸರು ಅದೇ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದು ಆರೋಪಿಯನ್ನು ಅದೇ ಠಾಣೆಗೆ ಹಸ್ತಾಂತರ ಮಾಡಲಾಗಿದೆ.
Karwar Hawala via train from Mumbai to Mangalore, two crores money seized, youth arrested. The arrested has been identified as Chin Sing (22).
30-10-25 07:25 pm
Bangalore Correspondent
ಚಿತ್ತಾಪುರ ಆರೆಸ್ಸೆಸ್ ಪಥಸಂಚಲನ ; ನ.5ರಂದು ಮತ್ತೊಂದ...
30-10-25 06:22 pm
ಸಿದ್ದರಾಮಯ್ಯ ಅವರೇ ಐದು ವರ್ಷಗಳಿಗೆ ಮುಖ್ಯಮಂತ್ರಿಯೆಂ...
30-10-25 04:34 pm
ಬೆಂಗಳೂರು ; ಕಾರಿನ ಮಿರ್ರ್ಗೆ ಬೈಕ್ ಟಚ್ ಆಗಿದ್ದ...
29-10-25 09:12 pm
ಬ್ರಿಟಿಷರ ಕಾಲದ ಸ್ಲೋಚ್ ಮಾದರಿ ಕ್ಯಾಪ್ ಬದಲು ; ಅರಸು...
28-10-25 10:03 pm
30-10-25 03:20 pm
HK News Desk
ಭಾರತ ಮೂಲದ ಅನಿಲ್ ಕುಮಾರ್ ಬೊಲ್ಲಗೆ 240 ಕೋಟಿ ಮೊತ್ತ...
28-10-25 10:23 pm
ಶಾಂಘೈ ತೆರಳಿದ್ದ ಪ್ರಧಾನಿ ಮೋದಿ ಹತ್ಯೆಗೆ ಅಮೆರಿಕ ಸಂ...
26-10-25 11:01 pm
ಅಂಗೈಯಲ್ಲಿ ಡೆತ್ ನೋಟ್ ಬರೆದಿಟ್ಟು ಸರ್ಕಾರಿ ವೈದ್ಯೆ...
26-10-25 05:38 pm
ಮುಂದಿನ ವಾರದಿಂದಲೇ ತಮಿಳುನಾಡಿನಲ್ಲಿ ಮತದಾರ ಪಟ್ಟಿಯ...
25-10-25 09:36 pm
30-10-25 08:06 pm
Mangalore Correspondent
ರಸ್ತೆ ಗುಂಡಿ ಮುಚ್ಚಿಸಲು ಹಣವಿಲ್ಲದ ಸರ್ಕಾರಕ್ಕೆ ಶಾಸ...
30-10-25 07:28 pm
ಕುಕ್ಕೆ ಸುಬ್ರಹ್ಮಣ್ಯದಲ್ಲಿ ಮದುವೆಗೆ ಬರುತ್ತಿದ್ದ ಟೆ...
30-10-25 03:23 pm
ನವೆಂಬರ್ 28ರಂದು ಉಡುಪಿ ಶ್ರೀಕೃಷ್ಣ ಮಠಕ್ಕೆ ಪ್ರಧಾನಿ...
30-10-25 11:28 am
ಮಂಗಳೂರಿನಲ್ಲಿ ಅಂತಾರಾಷ್ಟ್ರೀಯ ಬ್ಯಾಡ್ಮಿಂಟನ್ ಕ್ರೀಡ...
29-10-25 10:47 pm
29-10-25 10:43 pm
Mangalore Correspondent
ಪ್ರೇಯಸಿಗಾಗಿ ಕಳ್ಳತನಕ್ಕಿಳಿದ ಲವ್ವರ್ ; 40 ಲಕ್ಷ ಮ...
29-10-25 10:09 pm
ವಿಷನ್ ಇಂಡಿಯಾ ಹೆಸರಲ್ಲಿ ನಕಲಿ ಲಕ್ಕಿ ಸ್ಕೀಮ್ ; ಪುತ...
29-10-25 02:53 pm
ಪುತ್ತೂರು ಮೂರ್ತೆದಾರರ ಸಹಕಾರಿ ಸಂಘಕ್ಕೆ 101 ಗ್ರಾಮ್...
29-10-25 02:33 pm
ಕೇರಳ ಮೂಲದ ಗಲ್ಫ್ ಉದ್ಯಮಿಗೆ ಹನಿಟ್ರ್ಯಾಪ್ ; ಬಂಧನಕ್...
28-10-25 10:48 pm