ಬ್ರೇಕಿಂಗ್ ನ್ಯೂಸ್
09-06-22 09:20 pm HK News Desk ಕ್ರೈಂ
ಕಾರವಾರ, ಜೂನ್ 9: ಮುಂಬೈನಿಂದ ಮಂಗಳೂರಿಗೆ ರೈಲಿನಲ್ಲಿ ಹವಾಲಾ ರೂಪದಲ್ಲಿ ತರುತ್ತಿದ್ದ ಎರಡು ಕೋಟಿ ರೂ. ನಗದನ್ನು ರೈಲ್ವೇ ಪೊಲೀಸರು ಕಾರವಾರದಲ್ಲಿ ಪತ್ತೆ ಮಾಡಿದ್ದಾರೆ.
ರೈಲು ಸಂಖ್ಯೆ - 12133 ಮುಂಬೈ ಛತ್ರಪತಿ ಶಿವಾಜಿ ಟರ್ಮಿನಲ್- ಮಂಗಳೂರು ಜಂಕ್ಷನ್ ಎಕ್ಸ್ಪ್ರೆಸ್ನಲ್ಲಿ ಟಿಕೆಟ್ ಇಲ್ಲದೆ ಪ್ರಯಾಣಿಸುತ್ತಿದ್ದ ಕಾರಣಕ್ಕೆ ವ್ಯಕ್ತಿಯನ್ನು ತಪಾಸಣೆಗೆ ಒಳಪಡಿಸಲಾಗಿತ್ತು. ರೈಲ್ವೇ ಟಿಕೆಟ್ ಪರೀಕ್ಷಕರು ವಿಚಾರಿಸಿದರೂ ಸರಿಯಾಗಿ ಉತ್ತರಿಸದೇ ಇದ್ದಾಗ ರೈಲ್ವೇ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ರೈಲು ಕಾರವಾರ ನಿಲ್ದಾಣಕ್ಕೆ ಬಂದಾಗ ವ್ಯಕ್ತಿಯ ಜೊತೆಗಿದ್ದ ಬ್ಯಾಗ್ ತಪಾಸಣೆ ನಡೆಸಿದ್ದು, ಅದರಲ್ಲಿ ಬರೋಬ್ಬರಿ 2 ಕೋಟಿ ರೂ. ಭಾರತೀಯ ಕರೆನ್ಸಿ ನೋಟುಗಳು ಪತ್ತೆಯಾಗಿವೆ.
ಪ್ರಕರಣಕ್ಕೆ ಸಂಬಂಧಿಸಿ 22 ವರ್ಷದ ಚೇನ್ ಸಿಂಗ್ ಎಂಬಾತನನ್ನು ಬಂಧಿಸಲಾಗಿದ್ದು, ಈತ ರಾಜಸ್ಥಾನದ ಜಲೋರ್ ನಗರದ ನಿವಾಸಿ ಎಂದು ಪೊಲೀಸರು ಗುರುತಿಸಿದ್ದಾರೆ. ಬ್ಯಾಗ್ ತೆರೆಯಲು ಹೇಳಿದಾಗ, ಮೊದಲು ನಿರಾಕರಿಸಿದ್ದು ನಂತರ ಬ್ಯಾಗಿನಲ್ಲಿ ದುಡ್ಡಿರುವುದಾಗಿ ಒಪ್ಪಿಕೊಂಡಿದ್ದಾನೆ. ವಿಚಾರಣೆ ವೇಳೆ, ಮುಂಬೈನ ಭರತ್ ಭಾಯ್ ಅಲಿಯಾಸ್ ಪಿಂಟು ಎಂಬಾತನ ಬಳಿ ರೂ.15,000 ಮಾಸಿಕ ವೇತನಕ್ಕೆ ಕೆಲಸ ಮಾಡುತ್ತಿದ್ದು, ಹಣವನ್ನು ಮಂಗಳೂರಿನ ರಾಜ್ ಎನ್ನುವವರಿಗೆ ತಲುಪಿಸಲು ಒಯ್ಯುತ್ತಿದ್ದೇನೆ ಎಂದು ತಿಳಿಸಿದ್ದಾನೆ.
ಜಪ್ತಿಪಡಿಸಿದ ರೂ. 2 ಕೋಟಿ ರೂಪಾಯಿ ನಗದನ್ನು ಅಗತ್ಯ ಕ್ರಮಕ್ಕಾಗಿ ಆದಾಯ ತೆರಿಗೆ ಇಲಾಖೆಯ ನಿರ್ದೇಶನದಂತೆ ಕಾರವಾರ ಗ್ರಾಮೀಣ ಠಾಣೆಗೆ ಹಸ್ತಾಂತರಿಸಲಾಗಿದೆ. ಪೊಲೀಸರು ಅದೇ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದು ಆರೋಪಿಯನ್ನು ಅದೇ ಠಾಣೆಗೆ ಹಸ್ತಾಂತರ ಮಾಡಲಾಗಿದೆ.
Karwar Hawala via train from Mumbai to Mangalore, two crores money seized, youth arrested. The arrested has been identified as Chin Sing (22).
03-08-25 10:52 am
HK News Desk
Dharmasthala News, High Court; ಧರ್ಮಸ್ಥಳ ಸುದ್ದ...
01-08-25 11:34 pm
‘Comedy Kiladigalu’, Chandrashekhar Siddi Sui...
01-08-25 10:45 pm
Kannada Producer Ganesh, Film Dharmasthala Fi...
01-08-25 09:09 pm
Rape Case, Prajwal Revanna Verdict : ಮೈಸೂರಿನ...
01-08-25 02:55 pm
03-08-25 04:25 pm
HK News Desk
ಮಾಲೆಗಾಂವ್ ಪ್ರಕರಣದಲ್ಲಿ ಮೋಹನ್ ಭಾಗವತ್ ಬಂಧಿಸುವುದಕ...
01-08-25 10:48 pm
ಭಾರತ, ರಷ್ಯಾದ್ದು ಸತ್ತ ಆರ್ಥಿಕತೆ, ಒಟ್ಟಿಗೇ ನಾಶವಾಗ...
01-08-25 11:44 am
2008ರ ಮಾಲೆಗಾಂವ್ ಸ್ಫೋಟ ಪ್ರಕರಣ ; ಸಾಧ್ವಿ ಪ್ರಜ್ಞ...
31-07-25 10:08 pm
Trump, Modi, Export Tariff: ಸ್ನೇಹಿತ ಎನ್ನುತ್ತಲ...
31-07-25 09:51 am
02-08-25 10:51 pm
Mangalore Correspondent
Kallapu Highway News; ಕಲ್ಲಾಪು ಹೆದ್ದಾರಿಯಲ್ಲಿ ಬ...
02-08-25 03:51 pm
Inspector Manjunath Gowda, SIT, Dharmasthala:...
02-08-25 02:31 pm
Dharmasthala Case, UDR, SIT Police News; ಧರ್ಮ...
02-08-25 01:46 pm
Kerala Comes to Mangalore: Feast at Coral, Th...
02-08-25 01:40 pm
02-08-25 10:04 pm
Giridhar Shettt, Mangaluru
ಪ್ರಜ್ವಲ್ ರೇವಣ್ಣ ಅಪರಾಧಿ ; 14 ವರ್ಷ ಅಲ್ಲ, ಜೀವನಪರ...
02-08-25 07:20 pm
Suhas Shetty Murder, NIA Raid Mangalore: ಸುಹಾ...
02-08-25 04:43 pm
Mangalore CCB Police, Drugs: ಆಂಧ್ರಪ್ರದೇಶದಿಂದ...
01-08-25 05:05 pm
13 ವರ್ಷದ ಬಾಲಕನ ಕಿಡ್ನಾಪ್ ; 5 ಲಕ್ಷ ರೂ. ಹಣ ತರುವಷ...
01-08-25 04:27 pm