ಬ್ರೇಕಿಂಗ್ ನ್ಯೂಸ್
10-06-22 08:52 pm Mangalore Correspondent ಕ್ರೈಂ
ಮಂಗಳೂರು, ಜೂನ್ 10: ಷೇರು ಮಾರ್ಕೆಟ್ ನಲ್ಲಿ ಹಣ ಹೂಡಿಕೆ ಮಾಡಿದರೆ, ಕೆಲವೇ ದಿನಗಳಲ್ಲಿ ಡಬಲ್ ಆಗುತ್ತದೆ, ಗರಿಷ್ಠ ಲಾಭ ಬರುತ್ತದೆಯೆಂದು ಹೇಳಿ ಮಹಿಳೆ ಮತ್ತು ಆಕೆಯ ಮಗಳನ್ನು ಯಾಮಾರಿಸಿ 45 ಲಕ್ಷದ 50 ಸಾವಿರ ರೂಪಾಯಿ ಪೀಕಿಸಿದ ಬಗ್ಗೆ ಮಂಗಳೂರಿನ ಸೈಬರ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಗ್ರೀನ್ ವಿಲ್ ವಾಸ್, ಲಾವಣ್ಯ, ರೊನಾಲ್ಡ್ ಮತ್ತು ಮೆಲಿಸಾ ಪಿರೇರಾ ವಂಚನೆ ಎಸಗಿದ ಆರೋಪಿಗಳು ಎಂಬುದಾಗಿ ತಾಯಿ, ಮಗಳು ದೂರಿನಲ್ಲಿ ತಿಳಿಸಿದ್ದಾರೆ. ಮದುವೆ ಸಮಾರಂಭ ಒಂದರಲ್ಲಿ ಮೆಲಿಸಾ ಪಿರೇರಾ ಭೇಟಿಯಾಗಿದ್ದು, ಅದೇ ಸಂದರ್ಭದಲ್ಲಿ ಗ್ರೀನ್ ವಿಲ್ ವಾಸ್ ನನ್ನು ಪರಿಚಯ ಮಾಡಿಸಿದ್ದರು.
ಗ್ರೀನ್ ವಿಲ್ ಮುಂಬೈ ನಗರದ ಮೀರಾ ರೋಡ್ ನಲ್ಲಿ ಗೋಲ್ಡ್ ಹಿಲ್ ಸ್ಟಾಕ್ ಟ್ರೇಡಿಂಗ್ ಸೆಂಟರಿನಲ್ಲಿ ಕೆಲಸ ಮಾಡುತ್ತಿರುವುದಾಗಿ ನಂಬಿಸಿದ್ದಾರೆ. ಅಲ್ಲದೆ, ಸದ್ಯದಲ್ಲೇ ಗೋಲ್ಡ್ ಹಿಲ್ ಸ್ಟಾಕ್ ಎಕ್ಸ್ ಚೇಂಜ್ ಕಚೇರಿ ಮಂಗಳೂರಿನಲ್ಲಿ ಆರಂಭವಾಗಲಿದ್ದು ಅದರ ಸಂಪೂರ್ಣ ಹೊಣೆಯನ್ನು ತಾನೇ ವಹಿಸುವುದಾಗಿ ತಿಳಿಸಿದ್ದಾರೆ.
ಆರೋಪಿಗಳು ಸೇರಿಕೊಂಡು ಗೋಲ್ಡ್ ಹಿಲ್ ಬಗ್ಗೆ ವಿವರಣೆ ನೀಡಿದ್ದು, ಅದರಲ್ಲಿ ಹಣ ಹೂಡಿಕೆ ಮಾಡಿದರೆ ಕೇವಲ 37 ದಿನಗಳಲ್ಲಿ 30 ಶೇಕಡಾ ಹಣ ಬಡ್ಡಿ ರೂಪದಲ್ಲಿ ತಿರುಗಿ ಬರುತ್ತದೆ ಎಂದು ಹೇಳಿದ್ದಾರೆ. ಅದರಂತೆ, ಬಣ್ಣನೆಯ ಮಾತುಗಳನ್ನು ನಂಬಿದ ಮಹಿಳೆಯ ಪುತ್ರಿ ತಾನು ದುಡಿದು ಕೂಡಿಟ್ಟಿದ್ದ 45,50,000 ರೂಪಾಯಿ ಹಣವನ್ನು 2020ರಲ್ಲಿ ವಿವಿಧ ಸಂದರ್ಭಗಳಲ್ಲಿ ಗೋಲ್ಡ್ ಹಿಲ್ ಹೆಸರಲ್ಲಿ ಹೂಡಿಕೆ ಮಾಡಿದ್ದಾರೆ.
ಗ್ರೀನ್ ವಿಲ್ ವಾಸ್ ಸೂಚಿಸಿದ ಬ್ಯಾಂಕು ಖಾತೆಗಳಿಗೆ ಹಣವನ್ನು ಹೂಡಿಕೆ ಮಾಡಿದ್ದರು. ಆದರೆ ಆನಂತರ ಯಾವುದೇ ಬಡ್ಡಿ ಹಣವನ್ನು ನೀಡಲಿಲ್ಲ. ಬಡ್ಡಿ ಬದಲು ಅಸಲನ್ನಾದರೂ ಕೊಡಿ ಎಂದು ದುಂಬಾಲು ಬಿದ್ದರೂ, ಹಣವನ್ನು ಹಿಂತಿರುಗಿಸದೆ ಮೋಸ ಮಾಡಿದ್ದಾರೆ. ಇವರ ಮೋಸದ ಜಾಲದಲ್ಲಿ ಆರೋಪಿಗಳು ಸಹಕಾರ ನೀಡಿದ್ದು, ವಂಚನೆಯಲ್ಲಿ ಶಾಮೀಲಾಗಿದ್ದಾರೆ ಎಂದು ಮಹಿಳೆ ದೂರಿನಲ್ಲಿ ತಿಳಿಸಿದ್ದಾರೆ. ಈ ಬಗ್ಗೆ ಮಂಗಳೂರಿನ ಸೈಬರ್ ಠಾಣೆಯಲ್ಲಿ ಕಳೆದ ಡಿಸೆಂಬರ್ ತಿಂಗಳಲ್ಲಿ ದೂರು ದಾಖಲಿಸಿದ್ದರೂ, ಪೊಲೀಸರು ಆರೋಪಿಗಳ ವಿರುದ್ಧ ಕ್ರಮ ಜರುಗಿಸಿಲ್ಲ.
A 57-year-old woman has filed a police complaint against six persons for cheating her and her daughter of Rs 45,50,000 by asking them to invest in the name of Stock Trading Goldhil. The accused are Grenville Vas, Lavanya, Ronald and Melissa Pereira.
12-11-25 11:10 pm
Bangalore Correspondent
ಧರ್ಮಸ್ಥಳ ಶವ ಹೂತ ಪ್ರಕರಣದಲ್ಲಿ ಎಸ್ಐಟಿ ತನಿಖೆಯ ತಡ...
12-11-25 11:06 pm
ಯಾರೂ ಗೂಟ ಹೊಡೆದು ಇರಕ್ಕಾಗಲ್ಲ, ಬಿಹಾರ ಚುನಾವಣೆ ಟೈಮ...
12-11-25 09:03 pm
ವಿಮಾನ ನಿಲ್ದಾಣದಲ್ಲಿ ನಮಾಜ್ ; ಅವರು ಎಲ್ಲಾದ್ರೂ ಶ್ರ...
10-11-25 07:17 pm
54 ಹೆಕ್ಟೇರ್ ಅರಣ್ಯ ನಾಶ ಭೀತಿ ; ಶರಾವತಿ ಪಂಪ್ಡ್ ಸ್...
10-11-25 02:58 pm
12-11-25 02:54 pm
HK News Desk
ದೆಹಲಿ ಘಟನೆ, ಆತ್ಮಹತ್ಯಾ ಬಾಂಬರ್ ಆಗಿರಲಿಲ್ಲ, ಆಕಸ್ಮ...
11-11-25 10:56 pm
Mangaluru Kasaragod Highway: ಮಂಗಳೂರು- ಕಾಸರಗೋಡ...
11-11-25 10:20 pm
ಕೆಂಪುಕೋಟೆ ಕಾರು ಬ್ಲಾಸ್ಟ್ ಪ್ರಕರಣ ; ಜೈಶ್ ಉಗ್ರರ ಲ...
11-11-25 03:28 pm
ಐ-20 ಕಾರು ಕೆಂಪುಕೋಟೆ ಸಿಗ್ನಲ್ ನಲ್ಲಿದ್ದಾಗ ಬ್ಲಾಸ್...
10-11-25 11:07 pm
12-11-25 06:56 pm
Mangalore Correspondent
Ullal Dargah Committee: ಉಳ್ಳಾಲ ದರ್ಗಾ ಕಮಿಟಿಯಲ್...
11-11-25 10:42 pm
Bomb blast in New Delhi, High Alert in Dakshi...
11-11-25 10:15 pm
Bhagvati Prem Ship, Mangalore: ಸುರತ್ಕಲ್ ; ಮರಳ...
08-11-25 08:31 pm
ಬೆಂಗಳೂರು- ಮಂಗಳೂರು ಹೈಸ್ಪೀಡ್ ಕಾರಿಡಾರ್ ; ಶಿರಾಡ...
07-11-25 10:58 pm
12-11-25 12:32 pm
Mangalore Correspondent
ಬೆಳ್ತಂಗಡಿ ಶ್ರೀರಾಮ ಕ್ರೆಡಿಟ್ ಸೊಸೈಟಿಯಲ್ಲಿ ಭಾರೀ ಅ...
11-11-25 06:33 pm
Fraud Dream Deal Mangalore, KSRTC: ತಿಂಗಳಿಗೆ ಒ...
09-11-25 10:27 pm
ಬಹುಕೋಟಿ ವಂಚಕ ರೋಷನ್ ಸಲ್ದಾನಗೆ ಸೇರಿದ 2.85 ಕೋಟಿ ಮ...
09-11-25 03:50 pm
ಕೋಮುದ್ವೇಷದ ಕೊಲೆ ; ಪ್ರತೀಕಾರಕ್ಕೆ ಪ್ರಚೋದಿಸಿ ಇನ್...
08-11-25 11:15 pm