ಬ್ರೇಕಿಂಗ್ ನ್ಯೂಸ್
17-06-22 02:54 pm HK News Desk ಕ್ರೈಂ
ಹಾವೇರಿ, ಜೂನ್ 17 : ತುಂಗಾ ಮೇಲ್ದಂಡೆ ಯೋಜನೆಯ ಸಹಾಯಕ ಇಂಜಿನಿಯರ್ ಮನೆ ಮೇಲೆ ಎಸಿಬಿ ದಾಳಿ ನಡೆದಿದ್ದು ಅಕ್ರಮವಾಗಿ ಕೂಡಿಟ್ಟ ಕೋಟ್ಯಂತರ ಬೆಲೆಯ ಆಸ್ತಿಯನ್ನು ಪತ್ತೆ ಮಾಡಲಾಗಿದೆ. ರಾಣೇಬೆನ್ನೂರು ವಿಭಾಗದ ಅಪ್ಪರ್ ತುಂಗಾ ಸಹಾಯಕ ಇಂಜಿನಿಯರ್ ಚಂದ್ರಪ್ಪ ಓಲೇಕಾರ ಭ್ರಷ್ಟಾಚಾರದಿಂದ ಅಪಾರ ಪ್ರಮಾಣದ ಆಸ್ತಿ ಮಾಡಿದ್ದಾನೆ.
ದಾಳಿ ವೇಳೆ 13 ಲಕ್ಷ 39 ಸಾವಿರ ರೂ. ನಗದು ಹಣ, 400 ಗ್ರಾಂ ಬಂಗಾರ, 1600 ಗ್ರಾಂ ಬೆಳ್ಳಿ ಪತ್ತೆಯಾಗಿದೆ. ಅತ್ತೆ, ಹೆಂಡತಿ ಹಾಗೂ ತನ್ನ ಹೆಸರಲ್ಲಿ ಸೇರಿ 5 ಸೈಟು ಖರೀದಿಸಿದ್ದು ಪ್ರತಿಯೊಂದರ ಮೌಲ್ಯ 40-50 ಲಕ್ಷ ಇದೆ. ರಾಣೇಬೆನ್ನೂರು ತಾಲೂಕಿನ ಗುಡುಗೂರು-ಮೈದೂರು ಗ್ರಾಮದ ಮಧ್ಯೆ 25 ಎಕರೆ ಜಮೀನು ಖರೀದಿಸಿದ್ದಾನೆ. ಇದರ ಮೌಲ್ಯ ಕೋಟಿಗೂ ಮಿಕ್ಕಿದೆ.
ರಾಣೇಬೆನ್ನೂರಿನ ನಗರ ಸಿದ್ದಾರೋಡ ಕಾಲೋನಿ ಹಾಗೂ ಆಣೂರು ಎಂಬಲ್ಲಿ ಎರಡೆರಡು ಮನೆ ಹೊಂದಿದ್ದು ಅಲ್ಲಿಗೆ ದಾಳಿ ಮಾಡಿ ಪರಿಶೀಲನೆ ಮಾಡಿದ್ದಾರೆ. ಹಣ, ಬಂಗಾರದ ಆಭರಣ ಹಾಗೂ ಆಸ್ತಿ ನೋಡಿ ಎಸಿಬಿ ಅಧಿಕಾರಿಗಳೇ ಶಾಕ್ ಆಗಿದ್ದಾರೆ. ಎಸಿಬಿ ಡಿವೈಎಸ್ಪಿ ಗೋಪಿ ನೇತೃತ್ವದಲ್ಲಿ 25 ಮಂದಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ.

ದ್ವಿತೀಯ ದರ್ಜೆ ಸಹಾಯಕನಲ್ಲಿ ಕೋಟ್ಯಂತರ ಆಸ್ತಿ
ಚಿಕ್ಕಮಗಳೂರಿನಲ್ಲಿ ಎಸಿಬಿ ಅಧಿಕಾರಿಗಳ ಬೇಟೆ ನಡೆದಿದ್ದು ದ್ವಿತೀಯ ದರ್ಜೆ ಸಹಾಯಕ ತಿಮ್ಮಯ್ಯ ಎಂಬ ಅಧಿಕಾರಿಯ ಮನೆಯಲ್ಲಿ ಕೋಟ್ಯಂತರ ಆಸ್ತಿ ಪತ್ತೆಯಾಗಿದೆ. ಡಿವೈಎಸ್ಪಿ ಅನಿಲ್ ರಾಥೋಡ್ ನೇತೃತ್ವದಲ್ಲಿ ಏಕಕಾಲದಲ್ಲಿ ಮನೆ, ಕಚೇರಿ, ಪೂರ್ವಿಕರ ನಿವಾಸದ ಮೇಲೂ ದಾಳಿಯಾಗಿದೆ. ಕಡೂರು ಪಟ್ಟಣದಲ್ಲಿ ಮೂರು ನಿವೇಶನ, 8 ಗುಂಟೆ ಜಮೀನು, ಬಸೂರು ಸಮೀಪ 80 ಲಕ್ಷ ಮೌಲ್ಯದ 20 ಎಕ್ರೆ ತೋಟ, ಬಸೂರು ನಲ್ಲಿ 5 ಎಕ್ರೆ ಖಾಲಿ ನಿವೇಶನ, 50 ಸಾವಿರ ನಗದು, 100 ಗ್ರಾಂ ಬೆಳ್ಳಿ, 250 ಗ್ರಾಂ ಚಿನ್ನ ಪತ್ತೆ ಮಾಡಲಾಗಿದೆ.
ಸ್ನಾನದ ಕೊಠಡಿಯಲ್ಲೂ ಐದು ಲಕ್ಷ ನಗದು ಪತ್ತೆ
ಬೆಳಗಾವಿಯ ಪಿಡಬ್ಲ್ಯುಡಿ ಅಧೀಕ್ಷಕ ಇಂಜಿನಿಯರ್ ಬಿವೈ ಪವಾರ್ ಎಂಬ ಭ್ರಷ್ಟ ಅಧಿಕಾರಿಯ ಮನೆ, ಕಚೇರಿ ಸೇರಿ ಆರು ಕಡೆ ಎಸಿಬಿ ದಾಳಿ ನಡೆದಿದ್ದು ಅಪಾರ ಆಸ್ತಿ ಸಿಕ್ಕಿದೆ. ನಿಪ್ಪಾಣಿ ನಗರದಲ್ಲಿರುವ ಮನೆ, ಬೋರಗಾಂವಿಯಲ್ಲಿರುವ ಈತನಿಗೆ ಸೇರಿದ್ದೆನ್ನಲಾದ ಕಾರ್ಖಾನೆಯಲ್ಲೂ ದಾಳಿ ನಡೆದಿದೆ. ನಿಪ್ಪಾಣಿಯ ಮನೆಯ ಸ್ನಾನದ ಕೊಠಡಿಯಲ್ಲಿ ಐದು ಲಕ್ಷ ನಗದು ಸಿಕ್ಕಿದೆ. ಪವಾರ್ ಇದೇ ಜೂನ್ 30 ಕ್ಕೆ ನಿವೃತ್ತರಾಗಲಿದ್ದು ಅಷ್ಟರಲ್ಲೇ ಎಸಿಬಿ ದಾಳಿ ನಡೆಸಿ ಭ್ರಷ್ಟಾಚಾರ ಬಯಲು ಮಾಡಲಾಗಿದೆ.
ACB raid in PWDs house in Haveri, five lakhs found in bathroom, 25 acres of land records found.
01-05-26 08:33 pm
HK News Staffer
ರಾಜ್ಯದಲ್ಲಿ ಸದ್ಯಕ್ಕೆ ಸಿಎಂ ಬದಲಾವಣೆ ಇಲ್ಲ, ನಾನು ಸ...
30-04-26 08:16 pm
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
ಸದ್ಯಕ್ಕಿಲ್ಲ ಡಿಕೆಶಿಗೆ ಸಿಎಂ ಭಾಗ್ಯ ; ರಾಜ್ಯಸಭೆ- ಏ...
29-04-26 10:36 am
ನಾಯಕತ್ವ ಬದಲಾವಣೆ ಮಾತೇ ಇಲ್ಲ, ಮೇ 20ರೊಳಗೆ ಸಂಪುಟ ವ...
26-04-26 08:05 pm
29-04-26 11:18 pm
HK News Staffer
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:54 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:53 pm
29-04-26 11:05 pm
HK News Staffer
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
ನೂತನ ಮನೆಯ ಔತಣಕೂಟ ದಿನವೇ ಮೃತಪಟ್ಟ ಯಜಮಾನ ; ಬಂಟ್ವಾ...
28-04-26 01:26 pm
ಮಂಗಳೂರು- ಬೆಂಗಳೂರು ರೈಲಿನಲ್ಲಿ ಮಗುವಿಗೆ ಜನ್ಮವಿತ್ತ...
27-04-26 10:29 am
01-05-26 09:24 pm
HK News Staffer
ಸಹೋದ್ಯೋಗಿ ಮೇಲೆ ಆಸಿಡ್ ದಾಳಿ ; ಕೇರಳ ಮೂಲದ ವ್ಯಕ್...
01-05-26 07:18 pm
Rakesh Gladson Dsouza: ಮಂಗಳೂರಿನ ಯುವ ಉದ್ಯಮಿ ರಾ...
01-05-26 06:36 pm
ಮಕ್ಕಳ ಆಯೋಗ ಸಮಿತಿ ಸದಸ್ಯನಿಂದಲೇ ಹಲವು ಮಹಿಳೆಯರಿಗೆ...
01-05-26 01:45 pm
ಬೆಂಗಳೂರಿನ ಜ್ಯುವೆಲ್ಲರಿ ಶಾಪ್ ಗೋಡೆ ಕೊರೆದು ಕೋಟ್ಯಂ...
01-05-26 11:48 am