ಬ್ರೇಕಿಂಗ್ ನ್ಯೂಸ್
19-06-22 11:02 am Udupi Correspondent ಕ್ರೈಂ
ಉಡುಪಿ, ಜೂನ್ 19: ಬಿಜೆಪಿ ಮುಖಂಡ ಯಶಪಾಲ್ ಸುವರ್ಣ ಮತ್ತು ಶ್ರೀರಾಮ ಸೇನೆಯ ಪ್ರಮೋದ್ ಮುತಾಲಿಕ್ ತಲೆ ತೆಗೆದರೆ 20 ಲಕ್ಷ ಬಹುಮಾನ ಕೊಡುವುದಾಗಿ ಜಾಲತಾಣದಲ್ಲಿ ಪೋಸ್ಟ್ ಹಾಕಿದ್ದ ಪ್ರಕರಣದಲ್ಲಿ ಪೊಲೀಸರು ಮಂಗಳೂರಿನ ಬಜ್ಪೆ ನಿವಾಸಿಯನ್ನು ಬಂಧಿಸಿದ್ದಾರೆ.
ಬಂಧಿತ ಆರೋಪಿಯನ್ನು ಬಜ್ಪೆ ನಿವಾಸಿ ಮಹಮ್ಮದ್ ಶಫಿ (26) ಎಂದು ಗುರುತಿಸಲಾಗಿದೆ. ಕೆಲವು ದಿನಗಳ ಬಿಜೆಪಿ ರಾಷ್ಟ್ರೀಯ ಹಿಂದುಳಿದ ವರ್ಗಗಳ ಮೋರ್ಚಾ ಪ್ರಧಾನ ಕಾರ್ಯದರ್ಶಿ ಯಶಪಾಲ್ ಸುವರ್ಣ ವಿರುದ್ಧ ಮಾರಿಗುಡಿ 6 ಎಂಬ ಹೆಸರಿನ Instagram ಖಾತೆಯಲ್ಲಿ ಬೆದರಿಕೆ ಹಾಕಲಾಗಿತ್ತು. ಈ ಬಗ್ಗೆ ಯುವಮೋರ್ಚಾ ಕಾಪು ಕ್ಷೇತ್ರ ಸಮಿತಿ ಅಧ್ಯಕ್ಷ ಸಚಿನ್ ಸುವರ್ಣ ಕಾಪು ಪೊಲೀಸ್ ಠಾಣೆಗೆ ದೂರು ನೀಡಿದ್ದು ಪ್ರಕರಣ ದಾಖಲಾಗಿತ್ತು.
ಪ್ರಕರಣ ದಾಖಲಾದ ಬೆನ್ನಲ್ಲೇ ಕಾರ್ಕಳ ಉಪ ವಿಭಾಗದ ಎಎಸ್ಪಿ ಎಸ್.ವಿಜಯಪ್ರಸಾದ್, ಸೈಬರ್ ಪೊಲೀಸ್ ಠಾಣೆಯ ಸಿಬಂದಿ ಆಧುನಿಕ ತಂತ್ರಜ್ಞಾನವನ್ನು ಬಳಸಿ ತನಿಖೆ ನಡೆಸಿದಾಗ ಬೆದರಿಕೆ ಪೋಸ್ಟ್ ಹಾಕಿದ್ದು ಬಜ್ಪೆ ನಿವಾಸಿ ಮಹಮ್ಮದ್ ಶಾಫಿ ಎಂದು ಮಾಹಿತಿ ಸಂಗ್ರಹಿಸಿದ್ದರು.
ಆಬಳಿಕ ಉಡುಪಿ ಎಸ್ಪಿ ವಿಷ್ಣುವರ್ಧನ್ ಆರೋಪಿ ಪತ್ತೆಗೆ ಕಾಪು ಸಿಪಿಐ ಪ್ರಕಾಶ್, ಪಿಎಸ್ಐ ಶೈಲ ಡಿ.ಎಂ. ನೇತೃತ್ವದಲ್ಲಿ ತಂಡ ರಚಿಸಿದ್ದು ಆರೋಪಿಯನ್ನು ಬಜ್ಪೆ ತಾರಿಕಂಬಳ ಬಸ್ ನಿಲ್ದಾಣದ ಬಳಿ ವಶಕ್ಕೆ ಪಡೆಯುವಲ್ಲಿ ಯಶಸ್ವಿಯಾಗಿದ್ದಾರೆ. ತನಿಖೆ ಸಂದರ್ಭದಲ್ಲಿ ಆರೋಪಿ ತನ್ನ ತಪ್ಪನ್ನು ಒಪ್ಪಿಕೊಂಡಿದ್ದು ಆರು ತಿಂಗಳ ಹಿಂದೆ ಸ್ನೇಹಿತ ಆಸಿಫ್ ಜೊತೆ ಸೇರಿಕೊಂಡು ಮಾರಿಗುಡಿ ಹೆಸರಲ್ಲಿ ಇನ್ ಸ್ಟಾ ಗ್ರಾಮ್ ಪೇಜ್ ತೆರೆದಿದ್ದಾಗಿ ತಿಳಿಸಿದ್ದಾನೆ. ಅಲ್ಲದೆ, ಯಶಪಾಲ್ ಸುವರ್ಣ ಹಾಗೂ ಪ್ರಮೋದ್ ಮುತಾಲಿಕ್ ತಲೆ ಕಡಿದರೆ 20 ಲಕ್ಷ ಎಂದು ಪೋಸ್ಟ್ ಹಾಕಿದ್ದಾಗಿ ತನ್ನ ತಪ್ಪನ್ನು ಒಪ್ಪಿಕೊಂಡಿದ್ದಾನೆ. ಆರೋಪಿಯನ್ನು ಕೋರ್ಟಿಗೆ ಹಾಜರುಪಡಿಸಿ 14 ದಿನ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
One person from Bajpe was arrested by Kaup police in relation to the death threat case to Yashpal Suvarna through an Instagram page by the name Maarigudi_06. The arrested is identified as Mohammed Shafi. He has been sent to 14 days judicial custody. Shafi had posted a death threat message against Yashpal Suvarna and Pramodh Muthalik.
26-05-26 11:03 pm
HK News Desk
ದೈವಕ್ಕೆ ಅಪಮಾನ; ಮೈಸೂರಿನ ಚಾಮುಂಡೇಶ್ವರಿ ಬೆಟ್ಟಕ್ಕೆ...
26-05-26 08:51 pm
ಬರೆದಿಟ್ಕೊಳ್ಳಿ , ಮುಂದೇನೂ ನಮ್ದೇ ಸರ್ಕಾರ ಇರ್ತದೆ ;...
25-05-26 09:38 pm
Student Suicide: ನೀಟ್ ಪರೀಕ್ಷೆ ಪಜೀತಿ ; ಪಿಯುಸಿಯ...
24-05-26 09:03 pm
ಕಪ್ಪೆಚಿಪ್ಪು ತೆಗೆಯಲು ನದಿಗಿಳಿದಿದ್ದ ಏಳು ಮಹಿಳೆಯರು...
24-05-26 05:36 pm
26-05-26 12:54 pm
HK News Staffer
ಗೃಹಲಕ್ಷ್ಮಿ ಪಡೆಯಲು ಬಯೋಮೆಟ್ರಿಕ್ ಕಡ್ಡಾಯ ; ಕೂಡಲೇ...
26-05-26 12:50 pm
ಎಐಎಡಿಎಂಕೆ ಪಕ್ಷದ ಮೂವರು ಶಾಸಕರು ಸ್ಥಾನಕ್ಕೆ ರಾಜಿನಾ...
25-05-26 08:18 pm
ಕಾಕ್ರೋಚ್ ಜನತಾ ಪಾರ್ಟಿ ವಿರುದ್ಧ ಸಿಬಿಐ ತನಿಖೆಗೆ ಸು...
25-05-26 05:29 pm
ಮತ್ತೆ ಇಂಧನ ಶಾಕ್..! 11 ದಿನದಲ್ಲಿ 4ನೇ ಬಾರಿ ಪೆಟ್ರ...
25-05-26 10:19 am
26-05-26 09:02 pm
HK News Staffer
ನೌಕಾಪಡೆ ಸಬ್ ಲೆಫ್ಟಿನೆಂಟ್ ಆಗಿ ನೇಮಕಗೊಂಡ ನಿಶೆಲ್ ಡ...
26-05-26 07:52 pm
ಎಂಆರ್ ಪಿಎಲ್ ಕೋಕ್ ಸಲ್ಫರ್ ಮಾಲಿನ್ಯ ; ಆರು ತಿಂಗಳಲ್...
25-05-26 09:57 pm
‘ಲ್ಯಾಂಡ್ ಲಿಂಕ್ಸ್’ ಸಂಸ್ಥೆಯ ನಾಲ್ಕು ಸಭಾಭವನ ಏಕಕಾ...
25-05-26 04:23 pm
ಅಮೆರಿಕದಲ್ಲಿ ಧರ್ಮಗುರು, ಹುಟ್ಟೂರು ಮಂಗಳೂರಿನಲ್ಲಿ ಸ...
25-05-26 01:08 pm
26-05-26 02:43 pm
HK News Staffer
ಪಿಯುಸಿ ವಿದ್ಯಾರ್ಥಿನಿಯ ಅತ್ಯಾಚಾರ, ಕೊಲೆ ಪ್ರಕರಣ ;...
26-05-26 11:56 am
Tablet Arif Murder: ಟ್ಯಾಬ್ಲೆಟ್ ಆರೀಫ್ ಕೊಲೆ ಪ್ರ...
25-05-26 11:00 pm
ಭಟ್ಕಳದಲ್ಲಿ ಮುರಿದ ಕೋಮು ಸಾಮರಸ್ಯದ ಕಟ್ಟೆ; ರಸ್ತೆ ನ...
25-05-26 09:40 pm
ಮುಸ್ಲಿಂ ಲೀಗ್ ಶಾಸಕನ ಬಗ್ಗೆ ವಾಟ್ಸಾಪ್ ಗ್ರೂಪಿನಲ್ಲಿ...
25-05-26 04:26 pm