ಬ್ರೇಕಿಂಗ್ ನ್ಯೂಸ್
20-06-22 12:11 pm Mangalore Correspondent ಕ್ರೈಂ
ಬಂಟ್ವಾಳ, ಜೂನ್ 20: ವಿಟ್ಲ ಠಾಣೆ ವ್ಯಾಪ್ತಿಯ ಸಾಲೆತ್ತೂರಿನ ಅಗರಿ ಎಂಬಲ್ಲಿ ಭಾನುವಾರ ಸಂಜೆ 5.30ಕ್ಕೆ ಬಜರಂಗದಳ ಸ್ಥಳೀಯ ಮುಖಂಡನೊಬ್ಬನ ಮೇಲೆ ಹಲ್ಲೆ ನಡೆಸಿದ ಘಟನೆ ನಡೆದಿದ್ದು, ಈ ಬಗ್ಗೆ ದೂರು – ಪ್ರತಿ ದೂರು ದಾಖಲಾಗಿದೆ.
ವಿಟ್ಲ ಪ್ರಖಂಡ ಸಂಚಾಲಕ ಚಂದ್ರಹಾಸ ಎಂಬವರ ಮೇಲೆ ತಂಡವೊಂದು ಹಲ್ಲೆ ನಡೆಸಿದೆ. ಈ ಬಗ್ಗೆ ಚಂದ್ರಹಾಸ ನೀಡಿದ ದೂರಿನಲ್ಲಿ ಪ್ರಶಾಂತ, ತೇಜಸ್, ಗಿರೀಶ್, ಗಣೇಶ್, ಶರತ್, ಧನು, ಮುನ್ನ, ಚೇತನ, ವಿನಿತ, ದಿನೇಶ್, ಶಶಿಕುಮಾರ್ ಹಾಗೂ ಇತರ ಇಬ್ಬರು ಸೇರಿಕೊಂಡು ಹಲ್ಲೆ ನಡೆಸಿದ್ದಾರೆಂದು ತಿಳಿಸಿದ್ದಾರೆ. ಚೂರಿಯಿಂದ ಚುಚ್ಚಿ ಕೊಲೆಗೆ ಯತ್ನಿಸಿದ್ದು ಹಲ್ಲೆಗೊಳಗಾದ ಚಂದ್ರಹಾಸ ಪುತ್ತೂರಿನ ಸರಕಾರಿ ಆಸ್ಪತ್ರೆಗೆ ದಾಖಲಾಗಿದ್ದಾರೆ.
ಇದಕ್ಕೆದುರಾಗಿ ಸುರತ್ಕಲ್ ಇಡ್ಯಾ ಗ್ರಾಮದ ಪ್ರಶಾಂತ್ ಅಲಿಯಾಸ್ ಪಚ್ಚು (30) ಎಂಬಾತ ವಿಟ್ಲ ಠಾಣೆಯಲ್ಲಿ ಪ್ರತಿದೂರು ನೀಡಿದ್ದು, ತಮ್ಮ ಸಹವರ್ತಿ ಹುಡುಗರ ನಡುವಿನ ವೈಷಮ್ಯದ ಬಗ್ಗೆ ಮಾತನಾಡಲು ಸಾಲೆತ್ತೂರು ಗ್ರಾಮದ ನಾಗೇಶ್ ಎಂಬವರ ಮನೆಯ ಬಳಿಗೆ ಹೋಗಿದ್ದು, ಅಲ್ಲಿ ಚಂದ್ರಹಾಸ, ದೇವದಾಸ ಮತ್ತು ನಾಗೇಶ್ ಇದ್ದರು. ಈ ವೇಳೆ, ಮಾತಿಗೆ ಮಾತು ಬೆಳೆದು ಚಂದ್ರಹಾಸ ಮತ್ತು ದೇವದಾಸ ತನ್ನನ್ನು ಹಿಡಿದು ಕೊಲೆಗೆ ಯತ್ನಿಸಿದ್ದಾರೆ. ಕುತ್ತಿಗೆ ಬೆನ್ನಿಗೆ ಚಾಕುವಿನಲ್ಲಿ ಕೊಯ್ದು ತೀವ್ರ ಹಲ್ಲೆ ಮಾಡಿದ್ದು, ಪುತ್ತೂರು ಪ್ರಗತಿ ಆಸ್ಪತ್ರೆಯಲ್ಲಿ ಪ್ರಾಥಮಿಕ ಚಿಕಿತ್ಸೆ ಪಡೆದು ಅಲ್ಲಿನ ವೈದ್ಯರ ಸೂಚನೆಯಂತೆ ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ಕೆಎಂಸಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಮೇಲ್ನೋಟಕ್ಕೆ ಎರಡು ತಂಡಗಳ ನಡುವೆ ಜಗಳ ನಡೆದು ಹೊಡೆದಾಟ ನಡೆದಿರುವ ಸಾಧ್ಯತೆಯಿದೆ. ಇಬ್ಬರಿಗೂ ಹಲ್ಲೆಯಾಗಿದ್ದು, ಆಸ್ಪತ್ರೆಗೆ ದಾಖಲಾಗಿದ್ದಾರೆ. ವಿಟ್ಲ ಠಾಣೆಯಲ್ಲಿ ಇತ್ತಂಡಗಳ ದೂರಿನಂತೆ ಪ್ರಕರಣ ದಾಖಲಾಗಿದೆ.
Fight between two groups in Bantwal, Bajrang Dal local leader Chandrahas stabbed. Police are now on search for the accused.
12-11-25 11:10 pm
Bangalore Correspondent
ಧರ್ಮಸ್ಥಳ ಶವ ಹೂತ ಪ್ರಕರಣದಲ್ಲಿ ಎಸ್ಐಟಿ ತನಿಖೆಯ ತಡ...
12-11-25 11:06 pm
ಯಾರೂ ಗೂಟ ಹೊಡೆದು ಇರಕ್ಕಾಗಲ್ಲ, ಬಿಹಾರ ಚುನಾವಣೆ ಟೈಮ...
12-11-25 09:03 pm
ವಿಮಾನ ನಿಲ್ದಾಣದಲ್ಲಿ ನಮಾಜ್ ; ಅವರು ಎಲ್ಲಾದ್ರೂ ಶ್ರ...
10-11-25 07:17 pm
54 ಹೆಕ್ಟೇರ್ ಅರಣ್ಯ ನಾಶ ಭೀತಿ ; ಶರಾವತಿ ಪಂಪ್ಡ್ ಸ್...
10-11-25 02:58 pm
12-11-25 02:54 pm
HK News Desk
ದೆಹಲಿ ಘಟನೆ, ಆತ್ಮಹತ್ಯಾ ಬಾಂಬರ್ ಆಗಿರಲಿಲ್ಲ, ಆಕಸ್ಮ...
11-11-25 10:56 pm
Mangaluru Kasaragod Highway: ಮಂಗಳೂರು- ಕಾಸರಗೋಡ...
11-11-25 10:20 pm
ಕೆಂಪುಕೋಟೆ ಕಾರು ಬ್ಲಾಸ್ಟ್ ಪ್ರಕರಣ ; ಜೈಶ್ ಉಗ್ರರ ಲ...
11-11-25 03:28 pm
ಐ-20 ಕಾರು ಕೆಂಪುಕೋಟೆ ಸಿಗ್ನಲ್ ನಲ್ಲಿದ್ದಾಗ ಬ್ಲಾಸ್...
10-11-25 11:07 pm
12-11-25 06:56 pm
Mangalore Correspondent
Ullal Dargah Committee: ಉಳ್ಳಾಲ ದರ್ಗಾ ಕಮಿಟಿಯಲ್...
11-11-25 10:42 pm
Bomb blast in New Delhi, High Alert in Dakshi...
11-11-25 10:15 pm
Bhagvati Prem Ship, Mangalore: ಸುರತ್ಕಲ್ ; ಮರಳ...
08-11-25 08:31 pm
ಬೆಂಗಳೂರು- ಮಂಗಳೂರು ಹೈಸ್ಪೀಡ್ ಕಾರಿಡಾರ್ ; ಶಿರಾಡ...
07-11-25 10:58 pm
12-11-25 12:32 pm
Mangalore Correspondent
ಬೆಳ್ತಂಗಡಿ ಶ್ರೀರಾಮ ಕ್ರೆಡಿಟ್ ಸೊಸೈಟಿಯಲ್ಲಿ ಭಾರೀ ಅ...
11-11-25 06:33 pm
Fraud Dream Deal Mangalore, KSRTC: ತಿಂಗಳಿಗೆ ಒ...
09-11-25 10:27 pm
ಬಹುಕೋಟಿ ವಂಚಕ ರೋಷನ್ ಸಲ್ದಾನಗೆ ಸೇರಿದ 2.85 ಕೋಟಿ ಮ...
09-11-25 03:50 pm
ಕೋಮುದ್ವೇಷದ ಕೊಲೆ ; ಪ್ರತೀಕಾರಕ್ಕೆ ಪ್ರಚೋದಿಸಿ ಇನ್...
08-11-25 11:15 pm