ಬ್ರೇಕಿಂಗ್ ನ್ಯೂಸ್
20-06-22 12:11 pm Mangalore Correspondent ಕ್ರೈಂ
ಬಂಟ್ವಾಳ, ಜೂನ್ 20: ವಿಟ್ಲ ಠಾಣೆ ವ್ಯಾಪ್ತಿಯ ಸಾಲೆತ್ತೂರಿನ ಅಗರಿ ಎಂಬಲ್ಲಿ ಭಾನುವಾರ ಸಂಜೆ 5.30ಕ್ಕೆ ಬಜರಂಗದಳ ಸ್ಥಳೀಯ ಮುಖಂಡನೊಬ್ಬನ ಮೇಲೆ ಹಲ್ಲೆ ನಡೆಸಿದ ಘಟನೆ ನಡೆದಿದ್ದು, ಈ ಬಗ್ಗೆ ದೂರು – ಪ್ರತಿ ದೂರು ದಾಖಲಾಗಿದೆ.
ವಿಟ್ಲ ಪ್ರಖಂಡ ಸಂಚಾಲಕ ಚಂದ್ರಹಾಸ ಎಂಬವರ ಮೇಲೆ ತಂಡವೊಂದು ಹಲ್ಲೆ ನಡೆಸಿದೆ. ಈ ಬಗ್ಗೆ ಚಂದ್ರಹಾಸ ನೀಡಿದ ದೂರಿನಲ್ಲಿ ಪ್ರಶಾಂತ, ತೇಜಸ್, ಗಿರೀಶ್, ಗಣೇಶ್, ಶರತ್, ಧನು, ಮುನ್ನ, ಚೇತನ, ವಿನಿತ, ದಿನೇಶ್, ಶಶಿಕುಮಾರ್ ಹಾಗೂ ಇತರ ಇಬ್ಬರು ಸೇರಿಕೊಂಡು ಹಲ್ಲೆ ನಡೆಸಿದ್ದಾರೆಂದು ತಿಳಿಸಿದ್ದಾರೆ. ಚೂರಿಯಿಂದ ಚುಚ್ಚಿ ಕೊಲೆಗೆ ಯತ್ನಿಸಿದ್ದು ಹಲ್ಲೆಗೊಳಗಾದ ಚಂದ್ರಹಾಸ ಪುತ್ತೂರಿನ ಸರಕಾರಿ ಆಸ್ಪತ್ರೆಗೆ ದಾಖಲಾಗಿದ್ದಾರೆ.
ಇದಕ್ಕೆದುರಾಗಿ ಸುರತ್ಕಲ್ ಇಡ್ಯಾ ಗ್ರಾಮದ ಪ್ರಶಾಂತ್ ಅಲಿಯಾಸ್ ಪಚ್ಚು (30) ಎಂಬಾತ ವಿಟ್ಲ ಠಾಣೆಯಲ್ಲಿ ಪ್ರತಿದೂರು ನೀಡಿದ್ದು, ತಮ್ಮ ಸಹವರ್ತಿ ಹುಡುಗರ ನಡುವಿನ ವೈಷಮ್ಯದ ಬಗ್ಗೆ ಮಾತನಾಡಲು ಸಾಲೆತ್ತೂರು ಗ್ರಾಮದ ನಾಗೇಶ್ ಎಂಬವರ ಮನೆಯ ಬಳಿಗೆ ಹೋಗಿದ್ದು, ಅಲ್ಲಿ ಚಂದ್ರಹಾಸ, ದೇವದಾಸ ಮತ್ತು ನಾಗೇಶ್ ಇದ್ದರು. ಈ ವೇಳೆ, ಮಾತಿಗೆ ಮಾತು ಬೆಳೆದು ಚಂದ್ರಹಾಸ ಮತ್ತು ದೇವದಾಸ ತನ್ನನ್ನು ಹಿಡಿದು ಕೊಲೆಗೆ ಯತ್ನಿಸಿದ್ದಾರೆ. ಕುತ್ತಿಗೆ ಬೆನ್ನಿಗೆ ಚಾಕುವಿನಲ್ಲಿ ಕೊಯ್ದು ತೀವ್ರ ಹಲ್ಲೆ ಮಾಡಿದ್ದು, ಪುತ್ತೂರು ಪ್ರಗತಿ ಆಸ್ಪತ್ರೆಯಲ್ಲಿ ಪ್ರಾಥಮಿಕ ಚಿಕಿತ್ಸೆ ಪಡೆದು ಅಲ್ಲಿನ ವೈದ್ಯರ ಸೂಚನೆಯಂತೆ ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ಕೆಎಂಸಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಮೇಲ್ನೋಟಕ್ಕೆ ಎರಡು ತಂಡಗಳ ನಡುವೆ ಜಗಳ ನಡೆದು ಹೊಡೆದಾಟ ನಡೆದಿರುವ ಸಾಧ್ಯತೆಯಿದೆ. ಇಬ್ಬರಿಗೂ ಹಲ್ಲೆಯಾಗಿದ್ದು, ಆಸ್ಪತ್ರೆಗೆ ದಾಖಲಾಗಿದ್ದಾರೆ. ವಿಟ್ಲ ಠಾಣೆಯಲ್ಲಿ ಇತ್ತಂಡಗಳ ದೂರಿನಂತೆ ಪ್ರಕರಣ ದಾಖಲಾಗಿದೆ.
Fight between two groups in Bantwal, Bajrang Dal local leader Chandrahas stabbed. Police are now on search for the accused.
27-06-26 08:31 pm
HK News Staffer
ಅಂಬಾನಿ ಕೊಟ್ಟ 900 ಕೋಟಿ ದೇಣಿಗೆಗೂ ಲೆಕ್ಕ ಇಲ್ಲ, ಈಗ...
27-06-26 04:21 pm
ಆರ್ಎಸ್ಎಸ್ ಗಲಿಬಿಲಿಗೊಂಡರೆ ಬಿಜೆಪಿ ಬುಸುಗುಡುತ್ತದ...
26-06-26 08:30 pm
ಬಿಡದಿಯಲ್ಲಿ ರೈತರ ವಿರುದ್ಧವಾಗಿ ಟೌನ್ಶಿಪ್ ಕಟ್ಟುವ...
26-06-26 05:10 pm
ಇಷ್ಟೆಲ್ಲಾ ಅಲ್ಲೋಲ ಕಲ್ಲೋಲಕ್ಕೆ ಶೋಭಾ ಕರಂದ್ಲಾಜೆ ನೇ...
25-06-26 09:10 pm
27-06-26 09:10 pm
HK News Staffer
40 ಸೆಕೆಂಡ್ ನಲ್ಲಿ ಎರಡು ಬಾರಿ ಭೂಕಂಪ ; ತತ್ತರಿಸಿ ಹ...
25-06-26 12:13 pm
ಕೂಲ್ ಸಿಟಿ ಯುರೋಪಿನಲ್ಲೀಗ ಬಿಸಿಲ ಹೊಡೆತ ; ಫ್ರಾನ್ಸ್...
24-06-26 01:51 pm
ಮಾಹಿತಿ ಹಕ್ಕು ನಿಯಮಗಳಿಗೆ ಮಹಾರಾಷ್ಟ್ರ ಸರ್ಕಾರ ತಿದ್...
23-06-26 10:47 pm
ಟಿಎಂಸಿಯಲ್ಲಿ ರಾಜಕೀಯ ಭೂಕಂಪ ; ಮಮತಾ ಬ್ಯಾನರ್ಜಿ ಅಧ...
23-06-26 12:21 pm
27-06-26 02:44 pm
HK News Staffer
Rss ಸಂಘಟನೆಯನ್ನು ರಿಜಿಸ್ಟರ್ ಮಾಡಿದ್ರೆ ಒಳ್ಳೇದು ;...
26-06-26 09:42 pm
ಸಾಂಪ್ರದಾಯಿಕ ಕನ್ನಡ ಎಂಎ ಪದವಿಗೆ ಆಧುನಿಕ ಟಚ್; ಸಂತ...
26-06-26 08:33 pm
ಡಿಕೆಶಿ ಜೊತೆ ಯಾವುದೇ ವ್ಯಾವಹಾರಿಕ ಸಂಬಂಧವಿಲ್ಲ, ಅಪಪ...
26-06-26 02:14 pm
ಮಂಗಳೂರು, ಮೈಸೂರು ಸೇರಿ ರಾಜ್ಯದ 10 ನಗರಗಳಿಗೆ ಇಲೆಕ್...
25-06-26 10:56 pm
27-06-26 08:01 pm
HK News Staffer
ಬೆಂಗಳೂರಿನಿಂದ ಪ್ರಿಯತಮೆಯ ಅಪಹರಣ ; ಅಂಕೋಲಾಕ್ಕೆ ಹೋಗ...
27-06-26 04:23 pm
ಬೆಂಗಳೂರಿನಲ್ಲಿ ಅಕ್ರಮ ಹಣದ ಭಾರಿ ಬೇಟೆ ; ಕುರುಬರಹಳ್...
27-06-26 04:19 pm
ಮಂತ್ರಾಲಯ ಯಾತ್ರೆ ಮಧ್ಯೆ ಯಮನಂತೆ ನುಗ್ಗಿದ ಲಾರಿ! ಡಿ...
27-06-26 11:46 am
Mangalore, Police, criminial escapes: ಪಾಂಡೇಶ್...
27-06-26 10:54 am