50 ರೂ. ಇಸ್ಕೊಂಡಿದ್ದಕ್ಕೆ ಸ್ನೇಹಿತನಿಂದಲೇ ಯುವಕನ ಕೊಲೆ ! ಬಾಲ್ಯ ಸ್ನೇಹಿತರ ಬೀದಿ ಜಗಳ ಕೊಲೆಯಲ್ಲಿ ಅಂತ್ಯ 

22-06-22 01:04 pm       Bengalore Correspondent   ಕ್ರೈಂ

ಕೇವಲ 50 ರೂಪಾಯಿಗಾಗಿ ಸ್ನೇಹಿತನನ್ನೇ ಕೊಲೆ ಮಾಡಿರುವ ಘಟನೆ ಬಸವೇಶ್ವರ ನಗರ ಪೊಲೀಸ್​ ಠಾಣಾ ವ್ಯಾಪ್ತಿಯಲ್ಲಿ ಮಂಗಳವಾರ ನಡೆದಿದೆ.

ಬೆಂಗಳೂರು, ಜೂನ್ 22: ಕೇವಲ 50 ರೂಪಾಯಿಗಾಗಿ ಸ್ನೇಹಿತನನ್ನೇ ಕೊಲೆ ಮಾಡಿರುವ ಘಟನೆ ಬಸವೇಶ್ವರ ನಗರ ಪೊಲೀಸ್​ ಠಾಣಾ ವ್ಯಾಪ್ತಿಯಲ್ಲಿ ಮಂಗಳವಾರ ನಡೆದಿದೆ.

ಲಗ್ಗೆರೆ ನಿವಾಸಿ ಶಿವಮಾಧು ಕೊಲೆಯಾದ ಯುವಕ. ಶಿವಮಾಧು, ತನ್ನ ಸ್ನೇಹಿತ ಶಾಂತ ಕುಮಾರ್ ಜೊತೆ ಸೈಬರ್ ಸೆಂಟರ್ ಹೋಗಿದ್ದ. ಬಳಿಕ ಇಬ್ಬರು ಕ್ರಿಕೆಟ್ ಆಡಿ ಕುರಬರಹಳ್ಳಿ ಸರ್ಕಲ್​ಗೆ ಬಂದಿದ್ದರು. ಇವರಿಬ್ಬರೂ ಬಾಲ್ಯ ಸ್ನೇಹಿತರಾಗಿದ್ದು ಆನಂತರ ಮನೆ ದೂರವಾಗಿದ್ದರಿಂದ ಭೇಟಿ ಕಡಿಮೆಯಾಗಿತ್ತು. ಶಿವಮಾಧು ಆಟೋ ಚಾಲಕನಾಗಿದ್ದರೆ, ಶಾಂತ ಕುಮಾರ್ ಫುಡ್ ಡೆಲಿವರಿ ಕೆಲಸ ಮಾಡುತ್ತಿದ್ದ. 

ಕುರುಬರಹಳ್ಳಿ ಸರ್ಕಲ್ ನಲ್ಲಿ ಜೊತೆಗಿದ್ದ ವೇಳೆ ಶಾಂತಕುಮಾರ್ ಜೇಬಿನಿಂದ ಶಿವಮಾಧು 50 ರೂಪಾಯಿ ತೆಗೆದಿದ್ದ. ಈ ವೇಳೆ ಇಬ್ಬರ ಮಧ್ಯೆ ಮಾತಿಗೆ ಮಾತು ಬೆಳೆದು ಜಗಳವಾಗಿದೆ. ಜಗಳ ತಾರಕಕ್ಕೇರಿದಾಗ ಶಾಂತಕುಮಾರ್​ ತನ್ನಲ್ಲಿದ್ದ ಚಾಕುವಿನಿಂದ ಶಿವಮಾಧುವಿಗೆ ಇರಿದು ಎಸ್ಕೇಪ್‌ ಆಗಿದ್ದಾನೆ. ಇತ್ತ ರಕ್ತದ ಮಡುವಿನಲ್ಲಿ ಬಿದ್ದು ಒದ್ದಾಡುತ್ತಿದ್ದ ಶಿವಮಾಧುನನ್ನ ಸ್ಥಳೀಯರು ಬಳಿಕ ಖಾಸಗಿ ಆಸ್ಪತ್ರೆಗೆ ಕರೆದೊಯ್ದಿದ್ದರೂ ಆಸ್ಪತ್ರೆಗೆ ಹೋಗುವಷ್ಟರಲ್ಲೇ ಆತ ಮೃತಪಟ್ಟಿದ್ದಾನೆ. 

ಸದ್ಯ ಪ್ರಕರಣ ದಾಖಲಿಸಿಕೊಂಡಿರುವ ಬಸವೇಶ್ವರ ನಗರ ಠಾಣಾ ಪೊಲೀಸರು ಆರೋಪಿ ಪತ್ತೆಗೆ ಬಲೆ‌ ಬೀಸಿದ್ದಾರೆ. 
ಪಶ್ಚಿಮ ವಿಭಾಗ ಡಿಸಿಪಿ ಸಂಜೀವ ಪಾಟೀಲ್ ಸ್ಥಳಕ್ಕೆ ಭೇಟಿ ನೀಡಿದ್ದಾರೆ.

A 24-year-old man was allegedly murdered by his friend after a fight over Rs 50 in Bengaluru on Tuesday night, police said. The police identified the deceased as Shivamadhu, a resident of Laggere, and named the accused as Shanthakumar, a resident of Jai Maruthi Nagar in Bengaluru.