ಬ್ರೇಕಿಂಗ್ ನ್ಯೂಸ್
23-06-22 03:41 pm HK News Desk ಕ್ರೈಂ
ಮೈಸೂರು, ಜೂನ್ 23 : 21 ವರ್ಷದ ಅರ್ಚಕನೊಬ್ಬ ಶಾಸ್ತ್ರ ಕೇಳಲು ಬಂದ 35 ವರ್ಷದ ಗೃಹಿಣಿಯನ್ನು ಮದುವೆಯಾಗುತ್ತೇನೆಂದು ಹೇಳಿ ಹತ್ತು ದಿನಗಳ ಕಾಲ ಜೊತೆಗಿದ್ದು ಆನಂತರ ಕಾಡಿನಲ್ಲಿ ಬಿಟ್ಟು ಎಸ್ಕೇಪ್ ಆಗಿರುವ ಘಟನೆ ಬೆಳಕಿಗೆ ಬಂದಿದೆ.
ಮೈಸೂರು ಜಿಲ್ಲೆ ನಂಜನಗೂಡು ತಾಲೂಕು ಕೊಲ್ಲೂಪುರ ಗ್ರಾಮದಲ್ಲಿ ಘಟನೆ ನಡೆದಿದೆ. ಅಲ್ಲಿನ ಮಹದೇಶ್ವರ ದೇವಸ್ಥಾನಕ್ಕೆ ಮಹಿಳೆ ಶಾಸ್ತ್ರ ಕೇಳಲು ಹೋಗಿದ್ದಾಗ ಅರ್ಚಕ ಪರಿಚಯವಾಗಿದ್ದ. ಆತನ ಮಾತು ಕೇಳಿ ಹತ್ತು ದಿನಗಳ ಹಿಂದೆ ತನ್ನ ಇಬ್ಬರು ಮಕ್ಕಳು, ಗಂಡನನ್ನು ಬಿಟ್ಟು ನಾಪತ್ತೆಯಾಗಿದ್ದಳು. ಬಾಳು ಕೊಡುವುದಾಗಿ ಅರ್ಚಕ ಸಂತೋಷ್ ಮಹಿಳೆಯನ್ನು ಜೊತೆಗೆ ಕರೆದೊಯ್ದಿದ್ದು ಆಕೆಯೊಂದಿಗೆ ಹತ್ತು ದಿನಗಳ ಕಾಲ ಸರಸ ಸಲ್ಲಾಪ ಮಾಡಿದ್ದಾನೆ. ನಂತರ ಬದುಕಲು ಸಾಧ್ಯವಿಲ್ಲ ಎಂದು ಹೇಳಿ ಕಾಡಿನಲ್ಲಿ ಆತ್ಮಹತ್ಯೆ ಮಾಡಿಕೊಳ್ಳೋಣ ಎಂದು ಹೇಳಿ ರಾತ್ರಿ ಕಾಡಿನೊಳಗೆ ತೆರಳಿ ಅಲ್ಲಿಯೇ ಮಹಿಳೆಯನ್ನು ಬಿಟ್ಟು ಪರಾರಿಯಾಗಿದ್ದಾನೆ.
ಎರಡು ಮಕ್ಕಳ ತಾಯಿ ಜೂನ್ 12 ರಂದು ತಂದೆ ಮನೆಯಿಂದ ನಾಪತ್ತೆಯಾಗಿದ್ದಳು. ಸಾಯುವುದಾಗಿ ಹೇಳಿ ರಾತ್ರೋರಾತ್ರಿ ಅರ್ಚಕ ಎಸ್ಕೇಪ್ ಆಗಿದ್ದರಿಂದ ಇಡೀ ರಾತ್ರಿ ಮಹಿಳೆ ಒಂಟಿಯಾಗಿ ಕಾಡಿನಲ್ಲಿ ಕಾಲ ಕಳೆದಿದ್ದಾಳೆ. ಮುಂಜಾನೆ ವೇಳೆಗೆ ಒಂಟಿ ಮಹಿಳೆ ಸ್ಥಳೀಯರ ಕಣ್ಣಿಗೆ ಬಿದ್ದಿದ್ದು ಆಕೆಯ ಕರುಣಾಜನಕ ಕಥೆ ಕೇಳಿ ಗ್ರಾಮಸ್ಥರು ಬೆಚ್ಚಿಬಿದ್ದಿದ್ದು ಹುಲ್ಲಹಳ್ಳಿ ಠಾಣೆ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಮಹಿಳೆಯನ್ನು ವಿಚಾರಣೆ ನಡೆಸಿದ್ದಾರೆ. ಹುಲ್ಲಹಳ್ಳಿ ಪೊಲೀಸ್ ಠಾಣೆಯಲ್ಲಿ ಎಫ್ ಐಆರ್ ದಾಖಲಾಗಿದ್ದು ನಾಪತ್ತೆಯಾದ ಸಂತೋಷ್ ಪತ್ತೆಗೆ ಬಲೆ ಬೀಸಿದ್ದಾರೆ.
Mysuru Hindu priest in love with married woman cheats of marriage and flees away. The woman who had come to the priest for astrology made love with her and promised her of marriage leaves her in forest and flees away.
02-12-25 10:17 pm
Bangalore Correspondent
ಸಂಪುಟ ಪುನಾರಚನೆಯಾದ್ರೆ ಮುನಿಯಪ್ಪ, ಮಹದೇವಪ್ಪ, ಪರಮೇ...
02-12-25 06:29 pm
ಕೃತಕ ಬುದ್ಧಿಮತ್ತೆ ಎಫೆಕ್ಟ್ ; ಭವಿಷ್ಯದಲ್ಲಿ ಜನರು ಕ...
01-12-25 10:59 pm
ಸಿಎಂ, ಡಿಸಿಎಂ ಭೇಟಿಯಾಗಿ ಹೊಟ್ಟೆ ತುಂಬ ಉಪಹಾರ ಸೇವನೆ...
01-12-25 08:28 pm
Bangalore Suicide: ಎರಡು ವರ್ಷದ ಹಿಂದೆ ಗಂಡನ ಸಾವು...
01-12-25 08:18 pm
02-12-25 11:19 pm
HK News Desk
ಕ್ರಿಶ್ಚಿಯನ್ ಧರ್ಮಕ್ಕೆ ಮತಾಂತರಗೊಂಡ ವ್ಯಕ್ತಿಗಳಿಗೆ...
02-12-25 10:25 pm
ಭೂತಾನ್, ಮ್ಯಾನ್ಮಾರ್, ಶ್ರೀಲಂಕಾದಿಂದ ಕಳಪೆ ಅಡಿಕೆ...
01-12-25 10:18 pm
ಡಿಜಿಟಲ್ ಅರೆಸ್ಟ್ ಪ್ರಕರಣ ಹೆಚ್ಚಳ ; ಗಂಭೀರ ಪರಿಗಣಿಸ...
01-12-25 09:28 pm
ಇಡುಕ್ಕಿ ಸ್ಕೈ ಡೈನ್ ವೈಫಲ್ಯ ; 120 ಅಡಿ ಎತ್ತರದಲ್ಲಿ...
30-11-25 10:59 pm
03-12-25 11:54 am
Mangaluru Staffer
Bjp, Arun Puthila, Puttur, Mangalore: ಬಿಜೆಪಿ...
01-12-25 09:25 pm
ಕ್ರಿಸ್ಮಸ್ ವೇಳೆಗೆ ಮಂಗಳೂರು- ಮುಂಬೈ ನಡುವೆ ವಾರದ ಎಲ...
01-12-25 03:08 pm
Kapu Accident, Udupi, Five Killed: ಕಾಪು ಬಳಿ...
30-11-25 06:03 pm
DK Trasnsport Mangalore, Joel: ಡಿಕೆ ಟ್ರಾನ್ಸ್...
29-11-25 10:01 pm
02-12-25 10:48 pm
Bangalore Correspondent
ಇನ್ನೋವಾ ಕಾರಿನಲ್ಲಿ ನಾಲ್ಕು ಕರುಗಳನ್ನು ಸಾಗಿಸುತ್ತಿ...
02-12-25 06:37 pm
ರೈಲಿನಲ್ಲಿ ಬಂದು ನಿಲ್ಲಿಸಿದ್ದ ಸ್ಕೂಟರ್ ಕಳವುಗೈದು ಪ...
02-12-25 02:26 pm
Udupi Rape, Crime, Hindu Jagaran Vedike: ಮದುವ...
01-12-25 04:50 pm
ಗಿಫ್ಟ್ ಕೊಡಲಿಕ್ಕಿದೆಯೆಂದು ಸ್ವರ್ಣ ಜುವೆಲ್ಲರಿಯಿಂದ...
29-11-25 10:57 pm