ಬ್ರೇಕಿಂಗ್ ನ್ಯೂಸ್
24-06-22 10:38 pm Mangalore Correspondent ಕ್ರೈಂ
ಪುತ್ತೂರು, ಜೂನ್ 24 : ಎಟಿಎಂ ಕಾರ್ಡ್ ಬ್ಲಾಕ್ ಆಗಿದೆ, ಕೆವೈಸಿ ಅಪ್ಡೇಟ್ ಮಾಡಬೇಕೆಂದು ಹೇಳಿ ಕರೆ ಮಾಡಿ ಹಂತ ಹಂತವಾಗಿ ಎಂಟು ಲಕ್ಷ ರೂ. ಲಪಟಾಯಿಸಿದ ಘಟನೆ ನಡೆದಿದ್ದು ಮೋಸ ಹೋದ ಶಿಕ್ಷಕಿಯೊಬ್ಬರು ಪೊಲೀಸ್ ದೂರು ನೀಡಿದ್ದಾರೆ.
ಕಡಬ ತಾಲೂಕಿನ ನೆಲ್ಯಾಡಿ ಗ್ರಾಮದ ಸಜಿಲಾ ಎಂಬವರು ಸರಕಾರಿ ಪ್ರೌಢಶಾಲೆ ಶಿಕ್ಷಕಿಯಾಗಿದ್ದು ಅವರ ಮಗನ ಮೊಬೈಲ್ ಸಂಖ್ಯೆಗೆ ಎಸ್ ಬಿಐ ಖಾತೆಯ ಎಟಿಎಂ ಬ್ಲಾಕ್ ಆಗಿರುವ ಬಗ್ಗೆ ಜೂನ್ 11 ರಂದು ಮೆಸೇಜ್ ಬಂದಿತ್ತು. ಆನಂತರ ಜೂನ್ 23 ರಂದು ಕೆವೈಸಿ ಅಪ್ಡೇಟ್ ಮಾಡಲು ಕಸ್ಟಮರ್ ಕೇರ್ ನಂಬರ್ ಎಂದು 8240871104 ಗೆ ಕರೆ ಮಾಡಲು ಮೆಸೇಜ್ ಬಂದಿತ್ತು. ಅದರಂತೆ ಮಗ ಪ್ರಣವ್ ಆ ಸಂಖ್ಯೆಗೆ ಕರೆ ಮಾಡಿದ್ದು ಆ ಕಡೆಯಿಂದ ನಿಮ್ಮ ಖಾತೆಯ ಪಿನ್ ಜನರೇಟ್ ಮಾಡಲು ಎಸ್ ಬಿಐ ಖಾತೆಯುಳ್ಳ ಮನೆಯ ಇತರ ಸದಸ್ಯರ ಮಾಹಿತಿ ಕೇಳಿದ್ದಾರೆ.
ಆನಂತರ ತಾಯಿಯ ಎಸ್ ಬಿಐ ಖಾತೆಯ ವಿವರ ನೀಡಿದ್ದಾನೆ. ಬಳಿಕ ಅದೇ ಅಪರಿಚಿತ ವ್ಯಕ್ತಿ ಶಿಕ್ಷಕಿಯ ಮೊಬೈಲ್ ಸಂಖ್ಯೆಗೆ ಬಂದಿರುವ, ಓಟಿಪಿ ಸಂಖ್ಯೆ ಹೇಳುವಂತೆ ತಿಳಿಸಿದ್ದಾನೆ. ಕೊನೆಗೆ, ನೀವು ಹತ್ತಿರದ ಎಟಿಎಂ ಕೇಂದ್ರಕ್ಕೆ ಹೋಗಿ ಇಂಟರ್ನೆಟ್ ಬ್ಯಾಂಕಿಂಗ್ ಜನರೇಟ್ ಮಾಡುವಂತೆ ಸೂಚಿಸಿದ್ದ. ಆದರೆ ಅದೇ ದಿನ ಸಂಜೆ ಬ್ಯಾಂಕಿನಿಂದ ಕರೆ ಮಾಡಿ, ನೀವು ಬ್ಯಾಂಕ್ ಖಾತೆಯ ಮೊಬೈಲ್ ಸಂಖ್ಯೆ ಬದಲಿಸಿದ್ದೀರಾ ಎಂದು ಕೇಳಿದಾಗ ತಾಯಿ, ಮಗ ಮೋಸ ಹೋಗಿರುವುದು ಅರಿವಿಗೆ ಬಂದಿದೆ.
ಬ್ಯಾಂಕ್ ಖಾತೆಯನ್ನು ಪರಿಶೀಲಿಸಿದಾಗ, ಖಾತೆಯಲ್ಲಿದ್ದ ಎಂಟು ಲಕ್ಷ ರೂ.ವನ್ನು ಹಂತ ಹಂತವಾಗಿ ಖಾಲಿ ಮಾಡಲಾಗಿತ್ತು. 25 ಸಾವಿರ, 30 ಸಾವಿರ, 50 ಸಾವಿರದಂತೆ ಮೂರು ಬಾರಿ, ಆನಂತರ ತಲಾ ಎರಡು ಲಕ್ಷದಂತೆ ಮೂರು ಬಾರಿ ಒಟ್ಟು 7,47,080 ರೂ. ಹಣವನ್ನು ಲಪಟಾಯಿಸಿರುವುದು ಪತ್ತೆಯಾಗಿದೆ. ಈ ಬಗ್ಗೆ ಬ್ಯಾಂಕ್ ಮ್ಯಾನೇಜರ್ ಬಳಿ ಕೇಳಿದಾಗ, ನಿಮ್ಮ ಖಾತೆಯಿಂದ ಎಂಟು ಲಕ್ಷ ರೂ. ಯಾರೋ ಲೋನ್ ಪಡೆದಿದ್ದಾಗಿ ತಿಳಿಸಿದ್ದಾರೆ. ಮೋಸದ ಬಗ್ಗೆ ದಕ್ಷಿಣ ಕನ್ನಡ ಜಿಲ್ಲಾ ಸಿಇಎನ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಸೈಬರ್ ವಂಚಕರು ಎಟಿಎಂ ಬ್ಲಾಕ್ ಎಂದು ಹೇಳಿ ಯಾಮಾರಿಸಿ ಹಣ ಲಪಟಾಯಿಸಿದ್ದಾಗಿ ಪೊಲೀಸರು ಶಂಕಿಸಿದ್ದಾರೆ.
Mangalore Cyber crime, frauds loot 8 lakhs from teachers account in Puttur.
26-05-26 11:03 pm
HK News Desk
ದೈವಕ್ಕೆ ಅಪಮಾನ; ಮೈಸೂರಿನ ಚಾಮುಂಡೇಶ್ವರಿ ಬೆಟ್ಟಕ್ಕೆ...
26-05-26 08:51 pm
ಬರೆದಿಟ್ಕೊಳ್ಳಿ , ಮುಂದೇನೂ ನಮ್ದೇ ಸರ್ಕಾರ ಇರ್ತದೆ ;...
25-05-26 09:38 pm
Student Suicide: ನೀಟ್ ಪರೀಕ್ಷೆ ಪಜೀತಿ ; ಪಿಯುಸಿಯ...
24-05-26 09:03 pm
ಕಪ್ಪೆಚಿಪ್ಪು ತೆಗೆಯಲು ನದಿಗಿಳಿದಿದ್ದ ಏಳು ಮಹಿಳೆಯರು...
24-05-26 05:36 pm
26-05-26 12:54 pm
HK News Staffer
ಗೃಹಲಕ್ಷ್ಮಿ ಪಡೆಯಲು ಬಯೋಮೆಟ್ರಿಕ್ ಕಡ್ಡಾಯ ; ಕೂಡಲೇ...
26-05-26 12:50 pm
ಎಐಎಡಿಎಂಕೆ ಪಕ್ಷದ ಮೂವರು ಶಾಸಕರು ಸ್ಥಾನಕ್ಕೆ ರಾಜಿನಾ...
25-05-26 08:18 pm
ಕಾಕ್ರೋಚ್ ಜನತಾ ಪಾರ್ಟಿ ವಿರುದ್ಧ ಸಿಬಿಐ ತನಿಖೆಗೆ ಸು...
25-05-26 05:29 pm
ಮತ್ತೆ ಇಂಧನ ಶಾಕ್..! 11 ದಿನದಲ್ಲಿ 4ನೇ ಬಾರಿ ಪೆಟ್ರ...
25-05-26 10:19 am
26-05-26 09:02 pm
HK News Staffer
ನೌಕಾಪಡೆ ಸಬ್ ಲೆಫ್ಟಿನೆಂಟ್ ಆಗಿ ನೇಮಕಗೊಂಡ ನಿಶೆಲ್ ಡ...
26-05-26 07:52 pm
ಎಂಆರ್ ಪಿಎಲ್ ಕೋಕ್ ಸಲ್ಫರ್ ಮಾಲಿನ್ಯ ; ಆರು ತಿಂಗಳಲ್...
25-05-26 09:57 pm
‘ಲ್ಯಾಂಡ್ ಲಿಂಕ್ಸ್’ ಸಂಸ್ಥೆಯ ನಾಲ್ಕು ಸಭಾಭವನ ಏಕಕಾ...
25-05-26 04:23 pm
ಅಮೆರಿಕದಲ್ಲಿ ಧರ್ಮಗುರು, ಹುಟ್ಟೂರು ಮಂಗಳೂರಿನಲ್ಲಿ ಸ...
25-05-26 01:08 pm
26-05-26 02:43 pm
HK News Staffer
ಪಿಯುಸಿ ವಿದ್ಯಾರ್ಥಿನಿಯ ಅತ್ಯಾಚಾರ, ಕೊಲೆ ಪ್ರಕರಣ ;...
26-05-26 11:56 am
Tablet Arif Murder: ಟ್ಯಾಬ್ಲೆಟ್ ಆರೀಫ್ ಕೊಲೆ ಪ್ರ...
25-05-26 11:00 pm
ಭಟ್ಕಳದಲ್ಲಿ ಮುರಿದ ಕೋಮು ಸಾಮರಸ್ಯದ ಕಟ್ಟೆ; ರಸ್ತೆ ನ...
25-05-26 09:40 pm
ಮುಸ್ಲಿಂ ಲೀಗ್ ಶಾಸಕನ ಬಗ್ಗೆ ವಾಟ್ಸಾಪ್ ಗ್ರೂಪಿನಲ್ಲಿ...
25-05-26 04:26 pm