ಬ್ರೇಕಿಂಗ್ ನ್ಯೂಸ್
28-06-22 01:05 pm HK News Desk ಕ್ರೈಂ
ಮೈಸೂರು, ಜೂನ್ 28 : ಪತ್ನಿಯ ಬಗ್ಗೆ ಅನೈತಿಕ ಸಂಬಂಧ ಶಂಕೆಯಿಂದ ಆಕೆಯ ರುಂಡವನ್ನೇ ಕತ್ತರಿಸಿ ಭೀಕರವಾಗಿ ಕೊಲೆಗೈದ ಘಟನೆ ಮೈಸೂರಿನಲ್ಲಿ ನಡೆದಿದೆ.
ಮೈಸೂರಿನ ವರುಣಾ ಪೊಲೀಸ್ ಠಾಣಾ ವ್ಯಾಪ್ತಿಯ ಚೆಟ್ಟನಹಳ್ಳಿ ಗ್ರಾಮದಲ್ಲಿ ಘಟನೆ ನಡೆದಿದ್ದು ಪುಟ್ಟಮ್ಮ(40) ಎಂಬ ಮಹಿಳೆ ಮೃತ ದುರ್ದೈವಿ. ಕೊಲೆಯ ಬಳಿಕ ಪತಿ ದೇವರಾಜ್ ತಪ್ಪಿಸಿಕೊಂಡಿದ್ದು ಬಂಧನಕ್ಕಾಗಿ ವರುಣಾ ಪೊಲೀಸರು ಬಲೆ ಬೀಸಿದ್ದಾರೆ.
ಈ ಹಿಂದೆ ಮೊದಲ ಹೆಂಡತಿಯನ್ನೂ ಶೀಲ ಶಂಕಿಸಿ ಕೊಲೆಗೆ ಯತ್ನಿಸಿದ್ದ ದೇವರಾಜ್, ಜೈಲು ವಾಸವನ್ನೂ ಅನುಭವಿಸಿದ್ದ. ಬಳಿಕ ಮೊದಲ ಹೆಂಡತಿಯಿಂದ ದೂರವಾಗಿ 21 ವರ್ಷಗಳ ಹಿಂದೆ ಪುಟ್ಟಮ್ಮಳನ್ನ ಎರಡನೇ ವಿವಾಹವಾಗಿದ್ದ. ಎರಡನೇ ಮದುವೆ ಆದರೂ ಆಕೆಯ ಬಗ್ಗೆಯೂ ಶೀಲ ಶಂಕಿಸಿ ಆಗಾಗ ಜಗಳ ಮಾಡುತ್ತಿದ್ದ.
ಇವರಿಗೆ 20 ವರ್ಷದ ಮಗಳಿದ್ದರೂ ಪತ್ನಿಯ ಮೇಲೆ ಶಂಕೆ ವ್ಯಕ್ತಪಡಿಸುತ್ತಿದ್ದ. ಇದೇ ಶಂಕೆಯಲ್ಲಿ ಕಳೆದ ಒಂದು ತಿಂಗಳಿಂದ ಪುಟ್ಟಮ್ಮಳಿಗೆ ಕಿರುಕುಳವನ್ನೂ ನೀಡುತ್ತಿದ್ದ. ಮಗಳು ಪವಿತ್ರ ಕಾಲೇಜಿಗೆ ಹೋಗುತ್ತಿದ್ದ ವೇಳೆ ಇದೇ ವಿಚಾರಕ್ಕೆ ಮನೆಯಲ್ಲಿ ಕ್ಯಾತೆ ತೆಗೆದು ಜಗಳ ಮಾಡುತ್ತಿದ್ದ ಎನ್ನಲಾಗಿದೆ.
ಇದೀಗ ಮಗಳು ಮನೆಯಲ್ಲಿ ಇಲ್ಲದೇ ಇದ್ದಾಗ ಪತ್ನಿಯನ್ನ ಭೀಕರವಾಗಿ ಕೊಂದಿದ್ದಾನೆ. ರುಂಡ ಮುಂಡವನ್ನ ಬೇರೆ ಆಗುವಂತೆ ಭೀಕರವಾಗಿ ಕೊಲೆ ಮಾಡಿದ್ದು ಈ ಬಗ್ಗೆ ತಂದೆ ದೇವರಾಜ್ ವಿರುದ್ದ ಮಗಳು ಪವಿತ್ರ ದೂರು ನೀಡಿದ್ದಾಳೆ. ವರುಣಾ ಠಾಣೆ ಪೊಲೀಸರು ಪ್ರಕರಣ ದಾಖಲಿಸಿ ದೇವರಾಜ್ ಬಂಧನಕ್ಕೆ ಮುಂದಾಗಿದ್ದಾರೆ.
Mysuru husband suspects of extra martial affair beheads wife. The deceased has been identified as Puttamma (40).
01-05-26 08:33 pm
HK News Staffer
ರಾಜ್ಯದಲ್ಲಿ ಸದ್ಯಕ್ಕೆ ಸಿಎಂ ಬದಲಾವಣೆ ಇಲ್ಲ, ನಾನು ಸ...
30-04-26 08:16 pm
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
ಸದ್ಯಕ್ಕಿಲ್ಲ ಡಿಕೆಶಿಗೆ ಸಿಎಂ ಭಾಗ್ಯ ; ರಾಜ್ಯಸಭೆ- ಏ...
29-04-26 10:36 am
ನಾಯಕತ್ವ ಬದಲಾವಣೆ ಮಾತೇ ಇಲ್ಲ, ಮೇ 20ರೊಳಗೆ ಸಂಪುಟ ವ...
26-04-26 08:05 pm
29-04-26 11:18 pm
HK News Staffer
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:54 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:53 pm
29-04-26 11:05 pm
HK News Staffer
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
ನೂತನ ಮನೆಯ ಔತಣಕೂಟ ದಿನವೇ ಮೃತಪಟ್ಟ ಯಜಮಾನ ; ಬಂಟ್ವಾ...
28-04-26 01:26 pm
ಮಂಗಳೂರು- ಬೆಂಗಳೂರು ರೈಲಿನಲ್ಲಿ ಮಗುವಿಗೆ ಜನ್ಮವಿತ್ತ...
27-04-26 10:29 am
01-05-26 09:24 pm
HK News Staffer
ಸಹೋದ್ಯೋಗಿ ಮೇಲೆ ಆಸಿಡ್ ದಾಳಿ ; ಕೇರಳ ಮೂಲದ ವ್ಯಕ್...
01-05-26 07:18 pm
Rakesh Gladson Dsouza: ಮಂಗಳೂರಿನ ಯುವ ಉದ್ಯಮಿ ರಾ...
01-05-26 06:36 pm
ಮಕ್ಕಳ ಆಯೋಗ ಸಮಿತಿ ಸದಸ್ಯನಿಂದಲೇ ಹಲವು ಮಹಿಳೆಯರಿಗೆ...
01-05-26 01:45 pm
ಬೆಂಗಳೂರಿನ ಜ್ಯುವೆಲ್ಲರಿ ಶಾಪ್ ಗೋಡೆ ಕೊರೆದು ಕೋಟ್ಯಂ...
01-05-26 11:48 am