ಬ್ರೇಕಿಂಗ್ ನ್ಯೂಸ್
28-06-22 01:05 pm HK News Desk ಕ್ರೈಂ
ಮೈಸೂರು, ಜೂನ್ 28 : ಪತ್ನಿಯ ಬಗ್ಗೆ ಅನೈತಿಕ ಸಂಬಂಧ ಶಂಕೆಯಿಂದ ಆಕೆಯ ರುಂಡವನ್ನೇ ಕತ್ತರಿಸಿ ಭೀಕರವಾಗಿ ಕೊಲೆಗೈದ ಘಟನೆ ಮೈಸೂರಿನಲ್ಲಿ ನಡೆದಿದೆ.
ಮೈಸೂರಿನ ವರುಣಾ ಪೊಲೀಸ್ ಠಾಣಾ ವ್ಯಾಪ್ತಿಯ ಚೆಟ್ಟನಹಳ್ಳಿ ಗ್ರಾಮದಲ್ಲಿ ಘಟನೆ ನಡೆದಿದ್ದು ಪುಟ್ಟಮ್ಮ(40) ಎಂಬ ಮಹಿಳೆ ಮೃತ ದುರ್ದೈವಿ. ಕೊಲೆಯ ಬಳಿಕ ಪತಿ ದೇವರಾಜ್ ತಪ್ಪಿಸಿಕೊಂಡಿದ್ದು ಬಂಧನಕ್ಕಾಗಿ ವರುಣಾ ಪೊಲೀಸರು ಬಲೆ ಬೀಸಿದ್ದಾರೆ.
ಈ ಹಿಂದೆ ಮೊದಲ ಹೆಂಡತಿಯನ್ನೂ ಶೀಲ ಶಂಕಿಸಿ ಕೊಲೆಗೆ ಯತ್ನಿಸಿದ್ದ ದೇವರಾಜ್, ಜೈಲು ವಾಸವನ್ನೂ ಅನುಭವಿಸಿದ್ದ. ಬಳಿಕ ಮೊದಲ ಹೆಂಡತಿಯಿಂದ ದೂರವಾಗಿ 21 ವರ್ಷಗಳ ಹಿಂದೆ ಪುಟ್ಟಮ್ಮಳನ್ನ ಎರಡನೇ ವಿವಾಹವಾಗಿದ್ದ. ಎರಡನೇ ಮದುವೆ ಆದರೂ ಆಕೆಯ ಬಗ್ಗೆಯೂ ಶೀಲ ಶಂಕಿಸಿ ಆಗಾಗ ಜಗಳ ಮಾಡುತ್ತಿದ್ದ.
ಇವರಿಗೆ 20 ವರ್ಷದ ಮಗಳಿದ್ದರೂ ಪತ್ನಿಯ ಮೇಲೆ ಶಂಕೆ ವ್ಯಕ್ತಪಡಿಸುತ್ತಿದ್ದ. ಇದೇ ಶಂಕೆಯಲ್ಲಿ ಕಳೆದ ಒಂದು ತಿಂಗಳಿಂದ ಪುಟ್ಟಮ್ಮಳಿಗೆ ಕಿರುಕುಳವನ್ನೂ ನೀಡುತ್ತಿದ್ದ. ಮಗಳು ಪವಿತ್ರ ಕಾಲೇಜಿಗೆ ಹೋಗುತ್ತಿದ್ದ ವೇಳೆ ಇದೇ ವಿಚಾರಕ್ಕೆ ಮನೆಯಲ್ಲಿ ಕ್ಯಾತೆ ತೆಗೆದು ಜಗಳ ಮಾಡುತ್ತಿದ್ದ ಎನ್ನಲಾಗಿದೆ.
ಇದೀಗ ಮಗಳು ಮನೆಯಲ್ಲಿ ಇಲ್ಲದೇ ಇದ್ದಾಗ ಪತ್ನಿಯನ್ನ ಭೀಕರವಾಗಿ ಕೊಂದಿದ್ದಾನೆ. ರುಂಡ ಮುಂಡವನ್ನ ಬೇರೆ ಆಗುವಂತೆ ಭೀಕರವಾಗಿ ಕೊಲೆ ಮಾಡಿದ್ದು ಈ ಬಗ್ಗೆ ತಂದೆ ದೇವರಾಜ್ ವಿರುದ್ದ ಮಗಳು ಪವಿತ್ರ ದೂರು ನೀಡಿದ್ದಾಳೆ. ವರುಣಾ ಠಾಣೆ ಪೊಲೀಸರು ಪ್ರಕರಣ ದಾಖಲಿಸಿ ದೇವರಾಜ್ ಬಂಧನಕ್ಕೆ ಮುಂದಾಗಿದ್ದಾರೆ.
Mysuru husband suspects of extra martial affair beheads wife. The deceased has been identified as Puttamma (40).
12-09-26 09:40 pm
HK News Staffer
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
14-09-26 10:01 pm
HK News Staffer
ಮಂಗಳೂರಿನಲ್ಲಿ ಎರಡು ದಿನ ಸಿಎಂ ಡಿಕೆಶಿ ವಾಸ್ತವ್ಯ ;...
14-09-26 06:02 pm
100 ವರ್ಷಗಳ ಬಳಿಕವೂ ಸ್ವಂತ ಸೂರಿಗಾಗಿ ಕರಾವಳಿಯಲ್ಲಿ...
14-09-26 05:00 pm
Konkan Catholic Credit Society Inaugurated in...
14-09-26 04:18 pm
Konkan Catholic Credit Society Mangalore: ಹಣಕ...
13-09-26 10:11 pm
12-09-26 07:41 pm
HK News Staffer
ಕ್ರಿಪ್ಟೊ ಕರೆನ್ಸಿ ಹೆಸ್ರಲ್ಲಿ ಡಾಕ್ಟರ್ ಗೆ ಮಹಿಳೆಯಿ...
11-09-26 06:38 pm
ಜಾಮೀನು ಪಡೆಯಲು ನಕಲಿ ಆಧಾರ್ ಕಾರ್ಡ್ ಹಾಜರು ; ಉಡು...
11-09-26 01:09 pm
ಬೈಕ್ಗೆ ಡಿಕ್ಕಿ ಹೊಡೆದ ಕಾರು ; ಚಾಮರಾಜನಗರದಲ್ಲಿ ಮೂ...
11-09-26 10:14 am
ಕುಂದಾಪುರದಲ್ಲಿ 8 ಶಾಲಾ ಮಕ್ಕಳ ಬಲಿ ಪಡೆದ ಭೀಕರ ಅಪಘಾ...
10-09-26 08:16 pm