ಬ್ರೇಕಿಂಗ್ ನ್ಯೂಸ್
28-06-22 01:05 pm HK News Desk ಕ್ರೈಂ
ಮೈಸೂರು, ಜೂನ್ 28 : ಪತ್ನಿಯ ಬಗ್ಗೆ ಅನೈತಿಕ ಸಂಬಂಧ ಶಂಕೆಯಿಂದ ಆಕೆಯ ರುಂಡವನ್ನೇ ಕತ್ತರಿಸಿ ಭೀಕರವಾಗಿ ಕೊಲೆಗೈದ ಘಟನೆ ಮೈಸೂರಿನಲ್ಲಿ ನಡೆದಿದೆ.
ಮೈಸೂರಿನ ವರುಣಾ ಪೊಲೀಸ್ ಠಾಣಾ ವ್ಯಾಪ್ತಿಯ ಚೆಟ್ಟನಹಳ್ಳಿ ಗ್ರಾಮದಲ್ಲಿ ಘಟನೆ ನಡೆದಿದ್ದು ಪುಟ್ಟಮ್ಮ(40) ಎಂಬ ಮಹಿಳೆ ಮೃತ ದುರ್ದೈವಿ. ಕೊಲೆಯ ಬಳಿಕ ಪತಿ ದೇವರಾಜ್ ತಪ್ಪಿಸಿಕೊಂಡಿದ್ದು ಬಂಧನಕ್ಕಾಗಿ ವರುಣಾ ಪೊಲೀಸರು ಬಲೆ ಬೀಸಿದ್ದಾರೆ.
ಈ ಹಿಂದೆ ಮೊದಲ ಹೆಂಡತಿಯನ್ನೂ ಶೀಲ ಶಂಕಿಸಿ ಕೊಲೆಗೆ ಯತ್ನಿಸಿದ್ದ ದೇವರಾಜ್, ಜೈಲು ವಾಸವನ್ನೂ ಅನುಭವಿಸಿದ್ದ. ಬಳಿಕ ಮೊದಲ ಹೆಂಡತಿಯಿಂದ ದೂರವಾಗಿ 21 ವರ್ಷಗಳ ಹಿಂದೆ ಪುಟ್ಟಮ್ಮಳನ್ನ ಎರಡನೇ ವಿವಾಹವಾಗಿದ್ದ. ಎರಡನೇ ಮದುವೆ ಆದರೂ ಆಕೆಯ ಬಗ್ಗೆಯೂ ಶೀಲ ಶಂಕಿಸಿ ಆಗಾಗ ಜಗಳ ಮಾಡುತ್ತಿದ್ದ.
ಇವರಿಗೆ 20 ವರ್ಷದ ಮಗಳಿದ್ದರೂ ಪತ್ನಿಯ ಮೇಲೆ ಶಂಕೆ ವ್ಯಕ್ತಪಡಿಸುತ್ತಿದ್ದ. ಇದೇ ಶಂಕೆಯಲ್ಲಿ ಕಳೆದ ಒಂದು ತಿಂಗಳಿಂದ ಪುಟ್ಟಮ್ಮಳಿಗೆ ಕಿರುಕುಳವನ್ನೂ ನೀಡುತ್ತಿದ್ದ. ಮಗಳು ಪವಿತ್ರ ಕಾಲೇಜಿಗೆ ಹೋಗುತ್ತಿದ್ದ ವೇಳೆ ಇದೇ ವಿಚಾರಕ್ಕೆ ಮನೆಯಲ್ಲಿ ಕ್ಯಾತೆ ತೆಗೆದು ಜಗಳ ಮಾಡುತ್ತಿದ್ದ ಎನ್ನಲಾಗಿದೆ.
ಇದೀಗ ಮಗಳು ಮನೆಯಲ್ಲಿ ಇಲ್ಲದೇ ಇದ್ದಾಗ ಪತ್ನಿಯನ್ನ ಭೀಕರವಾಗಿ ಕೊಂದಿದ್ದಾನೆ. ರುಂಡ ಮುಂಡವನ್ನ ಬೇರೆ ಆಗುವಂತೆ ಭೀಕರವಾಗಿ ಕೊಲೆ ಮಾಡಿದ್ದು ಈ ಬಗ್ಗೆ ತಂದೆ ದೇವರಾಜ್ ವಿರುದ್ದ ಮಗಳು ಪವಿತ್ರ ದೂರು ನೀಡಿದ್ದಾಳೆ. ವರುಣಾ ಠಾಣೆ ಪೊಲೀಸರು ಪ್ರಕರಣ ದಾಖಲಿಸಿ ದೇವರಾಜ್ ಬಂಧನಕ್ಕೆ ಮುಂದಾಗಿದ್ದಾರೆ.
Mysuru husband suspects of extra martial affair beheads wife. The deceased has been identified as Puttamma (40).
11-09-25 10:11 pm
Bangalore Correspondent
ಈದ್ ಮೆರವಣಿಗೆ : ಶಿವಮೊಗ್ಗದಲ್ಲಿ ಪಾಕಿಸ್ತಾನ್ ಜಿಂದಾ...
09-09-25 10:52 pm
U T Khader: ಯುಟಿ ಖಾದರ್ ಏಕಪಕ್ಷೀಯ ತೀರ್ಮಾನ ತೆಗೆದ...
09-09-25 09:14 pm
Shivamogga Accident: ಸೆ.25ಕ್ಕೆ ಹಸೆಮಣೆ ಏರಬೇಕಿದ...
08-09-25 08:07 pm
ವೀರಶೈವ ಲಿಂಗಾಯತರು ಹಿಂದು ಬದಲು ಇತರರು ಎಂದು ನಮೂದಿಸ...
08-09-25 06:48 pm
10-09-25 04:22 pm
HK News Desk
ನೇಪಾಳದಲ್ಲಿ ಹಿಂಸಾಚಾರ ತೀವ್ರ ; ದೇಶ ಬಿಟ್ಟು ಓಡಿದ ಪ...
09-09-25 11:09 pm
ನೂತನ ಉಪ ರಾಷ್ಟ್ರಪತಿಯಾಗಿ ಎನ್.ಡಿ.ಎ ಮೈತ್ರಿಕೂಟದ ಸಿ...
09-09-25 09:38 pm
ಕಾಸರಗೋಡು ; ರಾಷ್ಟ್ರೀಯ ಹೆದ್ದಾರಿ ದಾಟಲೆತ್ನಿಸಿದ ಮಹ...
08-09-25 11:06 pm
ನೇಪಾಳದಲ್ಲಿ ಸೋಶಿಯಲ್ ಮೀಡಿಯಾ ಬ್ಯಾನ್ ; ದೇಶಾದ್ಯಂತ...
08-09-25 10:59 pm
11-09-25 10:42 pm
Mangaluru Correspondent
Mangalore, Harish Kumar: ಎರಡು ನಿಮಿಷದ ಆಜಾನ್ ನಿ...
11-09-25 09:38 pm
Mangalore Airport, Road, Accident: ಮಂಗಳೂರು ಏರ...
11-09-25 06:14 pm
Dharmasthala, YouTube, SIT: ಧರ್ಮಸ್ಥಳ ವಿರುದ್ಧ...
11-09-25 02:45 pm
ಬಿಜೆಪಿ ಬಗ್ಗೆ ಪುತ್ತಿಲ ಪರಿವಾರದ ಅಸಮಾಧಾನ ; ಭರವಸೆ...
11-09-25 01:40 pm
11-09-25 09:13 pm
Mangalore Correspondent
Mangalore Fake Documents, Crime, Arrest: ಸರ್ಕ...
11-09-25 08:52 pm
ಅಮೆರಿಕ ಅಧ್ಯಕ್ಷರ ಆಪ್ತ, ಬಲಪಂಥೀಯ ಕಾರ್ಯಕರ್ತ ಚಾರ್ಲ...
11-09-25 02:25 pm
Mangalore Police, Communial Case, Arrest, Cri...
08-09-25 10:34 pm
ಮಂಗಳೂರು ಏರ್ಪೋರ್ಟ್ ಟರ್ಮಿನಲ್ ಬಿಲ್ಡಿಂಗ್ ಧ್ವಂಸ ಬೆ...
07-09-25 03:34 pm