ಬ್ರೇಕಿಂಗ್ ನ್ಯೂಸ್
28-06-22 01:05 pm HK News Desk ಕ್ರೈಂ
ಮೈಸೂರು, ಜೂನ್ 28 : ಪತ್ನಿಯ ಬಗ್ಗೆ ಅನೈತಿಕ ಸಂಬಂಧ ಶಂಕೆಯಿಂದ ಆಕೆಯ ರುಂಡವನ್ನೇ ಕತ್ತರಿಸಿ ಭೀಕರವಾಗಿ ಕೊಲೆಗೈದ ಘಟನೆ ಮೈಸೂರಿನಲ್ಲಿ ನಡೆದಿದೆ.
ಮೈಸೂರಿನ ವರುಣಾ ಪೊಲೀಸ್ ಠಾಣಾ ವ್ಯಾಪ್ತಿಯ ಚೆಟ್ಟನಹಳ್ಳಿ ಗ್ರಾಮದಲ್ಲಿ ಘಟನೆ ನಡೆದಿದ್ದು ಪುಟ್ಟಮ್ಮ(40) ಎಂಬ ಮಹಿಳೆ ಮೃತ ದುರ್ದೈವಿ. ಕೊಲೆಯ ಬಳಿಕ ಪತಿ ದೇವರಾಜ್ ತಪ್ಪಿಸಿಕೊಂಡಿದ್ದು ಬಂಧನಕ್ಕಾಗಿ ವರುಣಾ ಪೊಲೀಸರು ಬಲೆ ಬೀಸಿದ್ದಾರೆ.
ಈ ಹಿಂದೆ ಮೊದಲ ಹೆಂಡತಿಯನ್ನೂ ಶೀಲ ಶಂಕಿಸಿ ಕೊಲೆಗೆ ಯತ್ನಿಸಿದ್ದ ದೇವರಾಜ್, ಜೈಲು ವಾಸವನ್ನೂ ಅನುಭವಿಸಿದ್ದ. ಬಳಿಕ ಮೊದಲ ಹೆಂಡತಿಯಿಂದ ದೂರವಾಗಿ 21 ವರ್ಷಗಳ ಹಿಂದೆ ಪುಟ್ಟಮ್ಮಳನ್ನ ಎರಡನೇ ವಿವಾಹವಾಗಿದ್ದ. ಎರಡನೇ ಮದುವೆ ಆದರೂ ಆಕೆಯ ಬಗ್ಗೆಯೂ ಶೀಲ ಶಂಕಿಸಿ ಆಗಾಗ ಜಗಳ ಮಾಡುತ್ತಿದ್ದ.
ಇವರಿಗೆ 20 ವರ್ಷದ ಮಗಳಿದ್ದರೂ ಪತ್ನಿಯ ಮೇಲೆ ಶಂಕೆ ವ್ಯಕ್ತಪಡಿಸುತ್ತಿದ್ದ. ಇದೇ ಶಂಕೆಯಲ್ಲಿ ಕಳೆದ ಒಂದು ತಿಂಗಳಿಂದ ಪುಟ್ಟಮ್ಮಳಿಗೆ ಕಿರುಕುಳವನ್ನೂ ನೀಡುತ್ತಿದ್ದ. ಮಗಳು ಪವಿತ್ರ ಕಾಲೇಜಿಗೆ ಹೋಗುತ್ತಿದ್ದ ವೇಳೆ ಇದೇ ವಿಚಾರಕ್ಕೆ ಮನೆಯಲ್ಲಿ ಕ್ಯಾತೆ ತೆಗೆದು ಜಗಳ ಮಾಡುತ್ತಿದ್ದ ಎನ್ನಲಾಗಿದೆ.
ಇದೀಗ ಮಗಳು ಮನೆಯಲ್ಲಿ ಇಲ್ಲದೇ ಇದ್ದಾಗ ಪತ್ನಿಯನ್ನ ಭೀಕರವಾಗಿ ಕೊಂದಿದ್ದಾನೆ. ರುಂಡ ಮುಂಡವನ್ನ ಬೇರೆ ಆಗುವಂತೆ ಭೀಕರವಾಗಿ ಕೊಲೆ ಮಾಡಿದ್ದು ಈ ಬಗ್ಗೆ ತಂದೆ ದೇವರಾಜ್ ವಿರುದ್ದ ಮಗಳು ಪವಿತ್ರ ದೂರು ನೀಡಿದ್ದಾಳೆ. ವರುಣಾ ಠಾಣೆ ಪೊಲೀಸರು ಪ್ರಕರಣ ದಾಖಲಿಸಿ ದೇವರಾಜ್ ಬಂಧನಕ್ಕೆ ಮುಂದಾಗಿದ್ದಾರೆ.
Mysuru husband suspects of extra martial affair beheads wife. The deceased has been identified as Puttamma (40).
15-05-25 11:59 am
HK News Desk
Pro Pakistan slogan, Arrest, Bangalore: ಬೆಂಗಳ...
14-05-25 05:16 pm
Hassan Kidnap: ಅಪ್ಪನ ಎದುರೇ ಮಗಳ ಅಪಹರಣ ; ಬೇಲೂರಿ...
13-05-25 09:50 pm
Davangere Accident, police constable death: ಲ...
13-05-25 09:37 pm
ಅರ್ಧದಲ್ಲಿ ಕದನ ನಿಲ್ಲಿಸಿದ್ದು ಯಾಕೆ? ಇಷ್ಟಕ್ಕೆ ನಮ್...
13-05-25 01:14 pm
15-05-25 09:09 pm
HK News Desk
Donald Trump: ನಾನೇನೂ ಮಧ್ಯಸ್ಥಿಕೆ ವಹಿಸಿರಲಿಲ್ಲ,...
15-05-25 08:38 pm
Sofia Qureshi, BJP leader, FIR: ಸೋಫಿಯಾ ಭಯೋತ್ಪ...
14-05-25 11:08 pm
Masood Azhar; ಐಎಂಎಫ್ ಸಾಲದ ಹಣವನ್ನೂ ಉಗ್ರರಿಗೆ ಹಂ...
14-05-25 11:08 pm
ಪಾಕ್ ವಶದಲ್ಲಿದ್ದ ಬಿಎಸ್ಎಫ್ ಯೋಧ ಕೊನೆಗೂ ಬಿಡುಗಡೆ ;...
14-05-25 07:33 pm
15-05-25 08:04 pm
Mangalore Correspondent
Lashkar Terror HQ, Pakistan: ಧ್ವಂಸಗೊಂಡ ಲಷ್ಕರ್...
15-05-25 06:36 pm
Lokayukta raid, Mangalore: ಸರ್ವೆ ಇಲಾಖೆ ಮೇಲ್ವಿ...
15-05-25 03:33 pm
Kundapur Suicide: ಸಾಲಬಾಧೆ, ತಂದೆ- ಮಗ ಬಾವಿಗೆ ಹಾ...
15-05-25 01:34 pm
Manjunath Bhandary, Kukke Temple, Mangalore:...
14-05-25 08:05 pm
15-05-25 06:02 pm
Bangalore Correspondent
Bangalore Job Fraud, Crime; ಮೆಕ್ರೋಸಾಪ್ಟ್ , ಬ...
15-05-25 12:14 pm
ಕೊಲ್ಕತ್ತಾದಲ್ಲಿ ಕಾರು ಅಡ್ಡಗಟ್ಟಿ 2.66 ಕೋಟಿ ದರೋಡೆ...
14-05-25 10:22 pm
Suhas Shetty Murder, Arrest, CCB Police: ಸುಹಾ...
14-05-25 09:23 pm
Hubballi Schoolboy Murder, Crime, Minor: ಹುಬ್...
13-05-25 07:55 pm