ಬ್ರೇಕಿಂಗ್ ನ್ಯೂಸ್
02-07-22 05:02 pm HK News Desk ಕ್ರೈಂ
ನವದೆಹಲಿ, ಜುಲೈ 2: ಬಿಜೆಪಿ ನಾಯಕಿ ನೂಪುರ್ ಶರ್ಮಾ ಪರ ಪೋಸ್ಟ್ ಹಾಕಿದ್ದ ಉದಯಪುರದ ಕನ್ನಯ್ಯಲಾಲ್ ಕೊಲೆ ದೇಶದಲ್ಲಿ ಸದ್ದು ಮಾಡಿರುವ ಬೆನ್ನಲ್ಲೇ ಮಹಾರಾಷ್ಟ್ರದ ಅಮರಾವತಿ ಜಿಲ್ಲೆಯಲ್ಲೂ ಇದೇ ರೀತಿಯ ಕೊಲೆ ಆಗಿರುವ ಶಂಕೆ ವ್ಯಕ್ತವಾಗಿದೆ.
ಅಮರಾವತಿ ನಗರದಲ್ಲಿ ಪಶು ಚಿಕಿತ್ಸಾಲಯದ ಮೆಡಿಕಲ್ ಶಾಪ್ ಹೊಂದಿದ್ದ ಉಮೇಶ್ ಪ್ರಹ್ಲಾದರಾವ್ ಕೊಲ್ಹೆ (54) ಎಂಬವರನ್ನು ಜೂನ್ 21 ರಂದು ರಾತ್ರಿ ಅಪರಿಚಿತ ವ್ಯಕ್ತಿಗಳು ಅಡ್ಡಗಟ್ಟಿ ಕೊಲೆ ಮಾಡಿದ್ದಾರೆ. ಉಮೇಶ್ ಕೊಲ್ಹೆ ಅವರು ಕೂಡ ಕೊಲೆಯಾಗುವುದಕ್ಕೂ ಮುನ್ನ ನೂಪುರ್ ಶರ್ಮಾ ಪರ ಪೋಸ್ಟ್ ಹಾಕಿದ್ದರು. ಆದರೆ ಆಗ ಯಾವ ಕಾರಣಕ್ಕೆ ಕೊಲೆ ಮಾಡಿದ್ದರು ಎನ್ನೋದು ತಿಳಿದುಬಂದಿರಲಿಲ್ಲ. ರಾತ್ರಿ ವೇಳೆ ಕಾರಿನಲ್ಲಿ ತೆರಳುತ್ತಿದ್ದಾಗ ಬೈಕಿನಲ್ಲಿ ಬಂದಿದ್ದ ಆಗಂತುಕರು ಚಾಕುವಿನಿಂದ ಕುತ್ತಿಗೆ ಕೊಯ್ದು ಕೊಂದಿದ್ದಾರೆ. ಈ ವೇಳೆ, ಉಮೇಶ್ ಅವರ ಮಗ, ಪತ್ನಿಯೂ ಇದ್ದುದರಿಂದ ರಸ್ತೆಗೆ ಬಂದು ಬೊಬ್ಬೆ ಹಾಕಿದ್ದರು. ಬಳಿಕ ಹಂತಕರು ಪರಾರಿಯಾಗಿದ್ದರೆ, ಉಮೇಶ್ ಅವರನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಆದರೆ ಚಿಕಿತ್ಸೆ ಸ್ಪಂದಿಸದೆ ಉಮೇಶ್ ಸಾವು ಕಂಡಿದ್ದರು.
ಮಗ ನೀಡಿದ ದೂರಿನಂತೆ ತನಿಖೆ ನಡೆಸಿದ ಪೊಲೀಸರು ಐದು ಮಂದಿಯನ್ನು ಬಂಧಿಸಿದ್ದಾರೆ. ಅಬ್ದುಲ್ ತೌಫೀಕ್ ತಸ್ಲಿಮ್ (22), ಶಾರುಖ್ ಪಠಾಣ್ (25), ಅಬ್ದುಲ್ ತೌಫಿಕ್ (24), ಶೋಯೆಬ್ ಖಾನ್ (22), ಅತಿಬ್ ರಶೀದ್ (22), ಮುದಾಸಿರ್ ಇಬ್ರಾಹಿಂ(23) ಬಂಧಿತರು.
ಇದೀಗ ಕನ್ನಯ್ಯ ಲಾಲ್ ಕೊಲೆಯ ವಿಚಾರ ಸಾಕಷ್ಟು ಸದ್ದು ಮಾಡಿರುವುದರಿಂದ ಉಮೇಶ್ ಅವರನ್ನೂ ಇದೇ ಕಾರಣಕ್ಕಾಗಿ ಕೊಲೆ ಮಾಡಲಾಗಿತ್ತು ಎಂದು ಅಮರಾವತಿ ಬಿಜೆಪಿ ಘಟಕದ ನಾಯಕರು ಆರೋಪಿಸಿದ್ದಾರೆ. ಅಲ್ಲದೆ, ಪೊಲೀಸರು ಕೊಲೆಯ ಹಿಂದಿನ ಕಾರಣ ಪತ್ತೆ ಮಾಡಬೇಕು ಎಂದು ಆಗ್ರಹ ಮಾಡಿದ್ದಾರೆ.
ಆರೋಪ ಕೇಳಿಬಂದ ಬೆನ್ನಲ್ಲೇ ಕೇಂದ್ರ ಗೃಹ ಸಚಿವ ಅಮಿತ್ ಷಾ ಉಮೇಶ್ ಕೊಲ್ಹೆ ಕೊಲೆ ಪ್ರಕರಣವನ್ನು ಎನ್ಐಎ ತನಿಖೆಗೆ ಒಪ್ಪಿಸಿದ್ದಾರೆ.
A 54-year-old chemist was hacked to death in Maharashtra’s Amravati for allegedly making a social media post in support of suspended BJP leader Nupur Sharma.
12-09-26 09:40 pm
HK News Staffer
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
14-09-26 10:01 pm
HK News Staffer
ಮಂಗಳೂರಿನಲ್ಲಿ ಎರಡು ದಿನ ಸಿಎಂ ಡಿಕೆಶಿ ವಾಸ್ತವ್ಯ ;...
14-09-26 06:02 pm
100 ವರ್ಷಗಳ ಬಳಿಕವೂ ಸ್ವಂತ ಸೂರಿಗಾಗಿ ಕರಾವಳಿಯಲ್ಲಿ...
14-09-26 05:00 pm
Konkan Catholic Credit Society Inaugurated in...
14-09-26 04:18 pm
Konkan Catholic Credit Society Mangalore: ಹಣಕ...
13-09-26 10:11 pm
12-09-26 07:41 pm
HK News Staffer
ಕ್ರಿಪ್ಟೊ ಕರೆನ್ಸಿ ಹೆಸ್ರಲ್ಲಿ ಡಾಕ್ಟರ್ ಗೆ ಮಹಿಳೆಯಿ...
11-09-26 06:38 pm
ಜಾಮೀನು ಪಡೆಯಲು ನಕಲಿ ಆಧಾರ್ ಕಾರ್ಡ್ ಹಾಜರು ; ಉಡು...
11-09-26 01:09 pm
ಬೈಕ್ಗೆ ಡಿಕ್ಕಿ ಹೊಡೆದ ಕಾರು ; ಚಾಮರಾಜನಗರದಲ್ಲಿ ಮೂ...
11-09-26 10:14 am
ಕುಂದಾಪುರದಲ್ಲಿ 8 ಶಾಲಾ ಮಕ್ಕಳ ಬಲಿ ಪಡೆದ ಭೀಕರ ಅಪಘಾ...
10-09-26 08:16 pm