ಬ್ರೇಕಿಂಗ್ ನ್ಯೂಸ್
03-07-22 08:30 pm HK News Desk ಕ್ರೈಂ
ಮಂಗಳೂರು, ಜುಲೈ 3: ನಗರ ಹೊರವಲಯದ ಅರ್ಕುಳದಲ್ಲಿ ಮನೆಯಲ್ಲೇ ದನ ಕಡಿದು ಮಾಂಸ ಮಾಡುತ್ತಿದ್ದಾಗ ಕಂಕನಾಡಿ ಗ್ರಾಮಾಂತರ ಠಾಣೆಯ ಪೊಲೀಸರು ದಾಳಿ ನಡೆಸಿದ್ದಾರೆ. ಭಾನುವಾರ ಬೆಳಗ್ಗೆ 9 ಗಂಟೆ ಸುಮಾರಿಗೆ ಪೊಲೀಸರು ದಾಳಿ ನಡೆಸಿದ್ದು ಮನೆ ಮಾಲೀಕ ಸಾಬಿತ್(40) ಎಂಬಾತನನ್ನು ಬಂಧಿಸಿದ್ದಾರೆ.
ಮನೆಯ ಬಳಿಯ ಶೆಡ್ ಒಂದರಲ್ಲಿ ಸಾಬಿತ್ ಮತ್ತು ಇನ್ನೊಬ್ಬ ಬಶೀರ್ ಮಾಂಸ ಮಾಡುತ್ತಿದ್ದರು. ಈ ಬಗ್ಗೆ ಖಚಿತ ಮಾಹಿತಿ ಪಡೆದು ಪೊಲೀಸರು ದಾಳಿ ನಡೆಸಿದ್ದು 95 ಕೇಜಿ ದನದ ಮಾಂಸವನ್ನು ಸೀಜ್ ಮಾಡಿದ್ದಾರೆ. ಸಾಬಿತ್ ನನ್ನು ವಶಕ್ಕೆ ಪಡೆದಿದ್ದು, ಪೊಲೀಸ್ ದಾಳಿ ವೇಳೆ ಬಶೀರ್ ಓಡಿ ತಪ್ಪಿಸಿಕೊಂಡಿದ್ದಾನೆ. ಮನೆಯನ್ನೇ ಅಕ್ರಮ ಕಸಾಯಿಖಾನೆ ಮಾಡಿಕೊಂಡು ಆಸುಪಾಸಿನಲ್ಲಿ ಅಗತ್ಯ ಇದ್ದವರಿಗೆ ಮಾಂಸವನ್ನು ಪೂರೈಕೆ ಮಾಡುತ್ತಿದ್ದ.
ಗೋಹತ್ಯೆ ನಿಷೇಧ ಕಾಯ್ದೆ ಜಾರಿಯಾಗಿರುವುದರಿಂದ ಗೋವನ್ನು ಹತ್ಯೆ ಮಾಡುವುದು, ಮಾಂಸವನ್ನು ಮಾರಾಟ ಮಾಡುವುದು ಅಪರಾಧವಾಗಿದೆ. ಇತ್ತೀಚೆಗೆ ಬಜರಂಗದಳ ಕಾರ್ಯಕರ್ತರು ಸುದ್ದಿಗೋಷ್ಟಿ ಕರೆದು ಕಟ್ಟುನಿಟ್ಟಾಗಿ ನಿಮಯ ಜಾರಿಗೊಳಿಸಬೇಕೆಂದು ಆಗ್ರಹಿಸಿದ್ದರು. ಈ ಹಿನ್ನೆಲೆಯಲ್ಲಿ ಪೊಲೀಸರು ದಾಳಿ ನಡೆಸಿದ್ದಾರೆ ಎನ್ನಲಾಗುತ್ತಿದೆ. ಉಳ್ಳಾಲ ಠಾಣೆ ವ್ಯಾಪ್ತಿಯ ಚೆಂಬುಗುಡ್ಡೆ ಎಂಬಲ್ಲಿಯೂ ಅಕ್ರಮ ಕಸಾಯಿಖಾನೆ ನಡೆಸುತ್ತಿದ್ದಲ್ಲಿಗೆ ಉಳ್ಳಾಲ ಪೊಲೀಸರು ದಾಳಿ ನಡೆಸಿದ್ದು ವಧಿಸುವುದಕ್ಕಾಗಿ ಇಡಲಾಗಿದೆ ಎನ್ನಲಾಗಿರುವ ದನವನ್ನು ವಶಕ್ಕೆ ಪಡೆದಿದ್ದಾರೆ.
Mangalore police raid illegal slaughterhouses at Arkula, seize 95 kilos of cow meat, one arrested. The arrested has been identified as Sabith. The raid was conducted by Kankanady Rural police.
15-05-25 10:16 pm
HK News Desk
Yatnal FIR, Mahatma Gandhi; ಮಹಾತ್ಮ ಗಾಂಧಿ ಪಾಕಿ...
15-05-25 11:59 am
Pro Pakistan slogan, Arrest, Bangalore: ಬೆಂಗಳ...
14-05-25 05:16 pm
Hassan Kidnap: ಅಪ್ಪನ ಎದುರೇ ಮಗಳ ಅಪಹರಣ ; ಬೇಲೂರಿ...
13-05-25 09:50 pm
Davangere Accident, police constable death: ಲ...
13-05-25 09:37 pm
15-05-25 09:09 pm
HK News Desk
Donald Trump: ನಾನೇನೂ ಮಧ್ಯಸ್ಥಿಕೆ ವಹಿಸಿರಲಿಲ್ಲ,...
15-05-25 08:38 pm
Sofia Qureshi, BJP leader, FIR: ಸೋಫಿಯಾ ಭಯೋತ್ಪ...
14-05-25 11:08 pm
Masood Azhar; ಐಎಂಎಫ್ ಸಾಲದ ಹಣವನ್ನೂ ಉಗ್ರರಿಗೆ ಹಂ...
14-05-25 11:08 pm
ಪಾಕ್ ವಶದಲ್ಲಿದ್ದ ಬಿಎಸ್ಎಫ್ ಯೋಧ ಕೊನೆಗೂ ಬಿಡುಗಡೆ ;...
14-05-25 07:33 pm
15-05-25 08:04 pm
Mangalore Correspondent
Lashkar Terror HQ, Pakistan: ಧ್ವಂಸಗೊಂಡ ಲಷ್ಕರ್...
15-05-25 06:36 pm
Lokayukta raid, Mangalore: ಸರ್ವೆ ಇಲಾಖೆ ಮೇಲ್ವಿ...
15-05-25 03:33 pm
Kundapur Suicide: ಸಾಲಬಾಧೆ, ತಂದೆ- ಮಗ ಬಾವಿಗೆ ಹಾ...
15-05-25 01:34 pm
Manjunath Bhandary, Kukke Temple, Mangalore:...
14-05-25 08:05 pm
15-05-25 11:06 pm
HK News Desk
Bangalore Crime, Mobile showroom: ಮೊಬೈಲ್ ಅಂಗಡ...
15-05-25 06:02 pm
Bangalore Job Fraud, Crime; ಮೆಕ್ರೋಸಾಪ್ಟ್ , ಬ...
15-05-25 12:14 pm
ಕೊಲ್ಕತ್ತಾದಲ್ಲಿ ಕಾರು ಅಡ್ಡಗಟ್ಟಿ 2.66 ಕೋಟಿ ದರೋಡೆ...
14-05-25 10:22 pm
Suhas Shetty Murder, Arrest, CCB Police: ಸುಹಾ...
14-05-25 09:23 pm