ಬ್ರೇಕಿಂಗ್ ನ್ಯೂಸ್
03-07-22 08:30 pm HK News Desk ಕ್ರೈಂ
ಮಂಗಳೂರು, ಜುಲೈ 3: ನಗರ ಹೊರವಲಯದ ಅರ್ಕುಳದಲ್ಲಿ ಮನೆಯಲ್ಲೇ ದನ ಕಡಿದು ಮಾಂಸ ಮಾಡುತ್ತಿದ್ದಾಗ ಕಂಕನಾಡಿ ಗ್ರಾಮಾಂತರ ಠಾಣೆಯ ಪೊಲೀಸರು ದಾಳಿ ನಡೆಸಿದ್ದಾರೆ. ಭಾನುವಾರ ಬೆಳಗ್ಗೆ 9 ಗಂಟೆ ಸುಮಾರಿಗೆ ಪೊಲೀಸರು ದಾಳಿ ನಡೆಸಿದ್ದು ಮನೆ ಮಾಲೀಕ ಸಾಬಿತ್(40) ಎಂಬಾತನನ್ನು ಬಂಧಿಸಿದ್ದಾರೆ.
ಮನೆಯ ಬಳಿಯ ಶೆಡ್ ಒಂದರಲ್ಲಿ ಸಾಬಿತ್ ಮತ್ತು ಇನ್ನೊಬ್ಬ ಬಶೀರ್ ಮಾಂಸ ಮಾಡುತ್ತಿದ್ದರು. ಈ ಬಗ್ಗೆ ಖಚಿತ ಮಾಹಿತಿ ಪಡೆದು ಪೊಲೀಸರು ದಾಳಿ ನಡೆಸಿದ್ದು 95 ಕೇಜಿ ದನದ ಮಾಂಸವನ್ನು ಸೀಜ್ ಮಾಡಿದ್ದಾರೆ. ಸಾಬಿತ್ ನನ್ನು ವಶಕ್ಕೆ ಪಡೆದಿದ್ದು, ಪೊಲೀಸ್ ದಾಳಿ ವೇಳೆ ಬಶೀರ್ ಓಡಿ ತಪ್ಪಿಸಿಕೊಂಡಿದ್ದಾನೆ. ಮನೆಯನ್ನೇ ಅಕ್ರಮ ಕಸಾಯಿಖಾನೆ ಮಾಡಿಕೊಂಡು ಆಸುಪಾಸಿನಲ್ಲಿ ಅಗತ್ಯ ಇದ್ದವರಿಗೆ ಮಾಂಸವನ್ನು ಪೂರೈಕೆ ಮಾಡುತ್ತಿದ್ದ.
ಗೋಹತ್ಯೆ ನಿಷೇಧ ಕಾಯ್ದೆ ಜಾರಿಯಾಗಿರುವುದರಿಂದ ಗೋವನ್ನು ಹತ್ಯೆ ಮಾಡುವುದು, ಮಾಂಸವನ್ನು ಮಾರಾಟ ಮಾಡುವುದು ಅಪರಾಧವಾಗಿದೆ. ಇತ್ತೀಚೆಗೆ ಬಜರಂಗದಳ ಕಾರ್ಯಕರ್ತರು ಸುದ್ದಿಗೋಷ್ಟಿ ಕರೆದು ಕಟ್ಟುನಿಟ್ಟಾಗಿ ನಿಮಯ ಜಾರಿಗೊಳಿಸಬೇಕೆಂದು ಆಗ್ರಹಿಸಿದ್ದರು. ಈ ಹಿನ್ನೆಲೆಯಲ್ಲಿ ಪೊಲೀಸರು ದಾಳಿ ನಡೆಸಿದ್ದಾರೆ ಎನ್ನಲಾಗುತ್ತಿದೆ. ಉಳ್ಳಾಲ ಠಾಣೆ ವ್ಯಾಪ್ತಿಯ ಚೆಂಬುಗುಡ್ಡೆ ಎಂಬಲ್ಲಿಯೂ ಅಕ್ರಮ ಕಸಾಯಿಖಾನೆ ನಡೆಸುತ್ತಿದ್ದಲ್ಲಿಗೆ ಉಳ್ಳಾಲ ಪೊಲೀಸರು ದಾಳಿ ನಡೆಸಿದ್ದು ವಧಿಸುವುದಕ್ಕಾಗಿ ಇಡಲಾಗಿದೆ ಎನ್ನಲಾಗಿರುವ ದನವನ್ನು ವಶಕ್ಕೆ ಪಡೆದಿದ್ದಾರೆ.
Mangalore police raid illegal slaughterhouses at Arkula, seize 95 kilos of cow meat, one arrested. The arrested has been identified as Sabith. The raid was conducted by Kankanady Rural police.
23-04-25 01:06 pm
Bangalore Correspondent
ಒಂದೇ ಸಮುದಾಯವನ್ನು ಶಿಕ್ಷಣ, ಉದ್ಯೋಗ ಕಾರಣಕ್ಕೆ ಪ್ರತ...
22-04-25 10:15 pm
30 ವರ್ಷಗಳಲ್ಲಿ ಮುಸ್ಲಿಮರು, ಪರಿಶಿಷ್ಟರ ಸಂಖ್ಯೆ ದುಪ...
22-04-25 10:13 pm
Bidar SSLC Student, Blackmail: ಫುಲ್ ಮಾರ್ಕ್ ಕೊ...
22-04-25 02:37 pm
ಜನಿವಾರ ತೆಗೆಸಿರುವ ಕ್ರಮ ನಿಯಮಬಾಹಿರ, ಧಾರ್ಮಿಕ ನಂಬಿ...
22-04-25 01:00 pm
22-04-25 10:33 pm
HK News Desk
Rahul Gandhi, BJP : ಅಮೆರಿಕದಲ್ಲಿ ನಿಂತು ಭಾರತದ ಚ...
22-04-25 07:13 pm
Next Pope: ರೋಮನ್ ಕ್ಯಾಥೋಲಿಕ್ ಚರ್ಚ್ನ 266ನೇ ಪೋಪ...
21-04-25 07:46 pm
Pope Francis Death, Vatican, Catholic: ಕೆಥೋಲಿ...
21-04-25 02:13 pm
No GST on UPI Payments: ಎರಡು ಸಾವಿರಕ್ಕಿಂತ ಮೇಲಿ...
20-04-25 08:42 pm
21-04-25 10:32 pm
Mangalore Correspondent
Puttur, Arun Putila: ಬ್ರಾಹ್ಮಣರು ಮತ್ತೆ ಪರಶುರಾಮ...
21-04-25 07:08 pm
Mangalore Chakravarti Sulibele, Ujre; ಸರ್ಕಾರವ...
20-04-25 05:42 pm
DK Shivakumar, Dharmasthala temple, Mangalore...
20-04-25 12:51 pm
Wafq Protest Mangalore, Police FIR; ವಕ್ಫ್ ವಿರ...
19-04-25 06:19 pm
23-04-25 01:03 pm
Mangalore Correspondent
Shivamogga man killed in Pahalgam attack: ಕಾಶ...
22-04-25 07:37 pm
IPS Om Prakash Murder, Update: ನಿವೃತ್ತ ಡಿಜಿಪಿ...
22-04-25 03:26 pm
Om Prakash IPS Murder, Wife arrest: ನಿವೃತ್ತ ಡ...
21-04-25 01:03 pm
Karnataka DGP Om Prakash Murder, wife: ನಿವೃತ್...
20-04-25 10:52 pm